Homeಮುಖಪುಟದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5...

ದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5 ದಿನಗಳ ಪ್ರತಿಭಟನೆ ಬಳಿಕ ಮೃತದೇಹ ಸ್ವೀಕಾರ

- Advertisement -
- Advertisement -

ತಿರುನಲ್ವೇಲಿ, ತಮಿಳುನಾಡು: ಪ್ರೇಮಸಂಬಂಧದ ಕಾರಣಕ್ಕೆ ನಡೆದಿದೆ ಎನ್ನಲಾದ ದಲಿತ ಟೆಕ್ಕಿ ಕವಿನ್ ಸೆಲ್ವಗಣೇಶ್‌ (23) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸುರ್ಜಿತ್‌ನ ತಂದೆ ಮತ್ತು ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೆ ಕಾರಣರಾದ ಎಲ್ಲರನ್ನೂ ಬಂಧಿಸುವವರೆಗೂ ಮೃತದೇಹ ಸ್ವೀಕರಿಸುವುದಿಲ್ಲ ಎಂದು ಕವಿನ್ ಕುಟುಂಬ ಐದು ದಿನಗಳ ಕಾಲ ನಡೆಸಿದ ತೀವ್ರ ಪ್ರತಿಭಟನೆಯ ನಂತರ ಈ ಬಂಧನ ನಡೆದಿದೆ.

ಈ ಪ್ರಕರಣದಲ್ಲಿ ಆರೋಪಿ ಸುರ್ಜಿತ್‌ರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರ ತಂದೆಯನ್ನು ಸಹ ಬಂಧಿಸಬೇಕು ಎಂದು ಕವಿನ್ ಕುಟುಂಬ ಪಟ್ಟು ಹಿಡಿದಿತ್ತು. ಶುಕ್ರವಾರ, ಸಬ್ ಇನ್ಸ್‌ಪೆಕ್ಟರ್ ಸರವಣನ್‌ ಬಂಧನದ ನಂತರ, ಮೃತ ಟೆಕ್ಕಿಯ ಕುಟುಂಬ ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತದೇಹವನ್ನು ಸ್ವೀಕರಿಸಿದೆ. ಈ ವೇಳೆ ಸಚಿವ ಕೆ.ಎನ್. ನೆಹರು ಮತ್ತು ಜಿಲ್ಲಾಧಿಕಾರಿ ಆರ್. ಸುಕುಮಾರ್ ಸಹ ಉಪಸ್ಥಿತರಿದ್ದರು.

ಪ್ರೀತಿಯೇ ಹತ್ಯೆಗೆ ಕಾರಣ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಕವಿನ್ ಮತ್ತು ಆರೋಪಿ ಸುರ್ಜಿತ್‌ನ ಸಹೋದರಿ ಸುಭಾಷಿಣಿ ನಡುವಿನ ಪ್ರೇಮಸಂಬಂಧವೇ ಈ ಹತ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಆದರೆ, ಸುಭಾಷಿಣಿ ಈ ಕುರಿತು ವಿಡಿಯೋವೊಂದರಲ್ಲಿ ಸ್ಪಷ್ಟಪಡಿಸಿದ್ದು, “ನಾವು ನಿಜವಾಗಿಯೂ ಪರಸ್ಪರ ಪ್ರೀತಿಸುತ್ತಿದ್ದೆವು. ಆದರೆ, ನಮ್ಮ ಸಂಬಂಧದ ಬಗ್ಗೆ ತಕ್ಷಣವೇ ನಮ್ಮ ಪೋಷಕರಿಗೆ ತಿಳಿಸಬಾರದೆಂದು ನಿರ್ಧರಿಸಿದ್ದೆವು. ಮೇ 30ರಂದು ನನ್ನ ಅಣ್ಣ ಸುರ್ಜಿತ್ ಈ ವಿಷಯವನ್ನು ನನ್ನ ತಂದೆಗೆ ತಿಳಿಸಿದ್ದ. ಆದರೆ, ಕವಿನ್ ಸ್ವಲ್ಪ ಸಮಯ ಬೇಕು ಎಂದಿದ್ದರಿಂದ ನಾನು ಸುಮ್ಮನಿದ್ದೆ” ಎಂದು ಹೇಳಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ಕವಿನ್ ಅವರ ಸಂಬಂಧಿ ಸೆಲ್ವಂ, “ಇದು ಸ್ಪಷ್ಟವಾಗಿ ಮರ್ಯಾದೆಗೇಡು ಹತ್ಯೆ (Honour killing). ಸುರ್ಜಿತ್‌ ಬಂಧನವಾಗಿದೆ, ಆದರೆ ಅವನ ತಂದೆ-ತಾಯಿಯನ್ನೂ ಬಂಧಿಸಬೇಕು. ಎಫ್‌ಐಆರ್ ಆಧಾರದ ಮೇಲೆ ಅವರನ್ನು ಬಂಧಿಸಲು ಅವಕಾಶವಿದೆ,” ಎಂದು ಒತ್ತಾಯಿಸಿದ್ದರು. ಸಾರ್ವಜನಿಕರ ಆಕ್ರೋಶ ಮತ್ತು ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ತನಿಖೆಗಾಗಿ ಸಿಐಡಿ (Crime Branch–CID) ಗೆ ವರ್ಗಾಯಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಕವಿನ್ ಸೆಲ್ವಗಣೇಶ್ ಮತ್ತು ಸುಭಾಷಿಣಿ ಪ್ರೀತಿಸುತ್ತಿದ್ದರು. ಈ ಸಂಬಂಧ ಸುರ್ಜಿತ್‌ಗೆ ಇಷ್ಟವಿರಲಿಲ್ಲ. ಮೇ 30ರಂದು ಕವಿನ್‌ರನ್ನು ಆತನ ಪ್ರೇಯಸಿ ಸುಭಾಷಿಣಿ ಕೆಲಸ ಮಾಡುತ್ತಿದ್ದ ಸಿಧಾ ಕೇಂದ್ರದ ಬಳಿ ಸುರ್ಜಿತ್ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದನು. ಸಿಸಿಟಿವಿ ದೃಶ್ಯಗಳಲ್ಲಿ ಈ ಘಟನೆ ದಾಖಲಾಗಿದೆ. ನಂತರ ಕವಿನ್ ದೇಹವು ತೀವ್ರ ಗಾಯಗಳೊಂದಿಗೆ ಪತ್ತೆಯಾಗಿತ್ತು. ಸುರ್ಜಿತ್‌ನನ್ನು ಕೊಲೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರ ಬಂಧನದ ನಂತರ, ನ್ಯಾಯ ಸಿಗುವ ಭರವಸೆಯಲ್ಲಿ ಕುಟುಂಬವು ಪ್ರತಿಭಟನೆಯನ್ನು ಹಿಂತೆಗೆದುಕೊಂಡು ಮೃತದೇಹವನ್ನು ಸ್ವೀಕರಿಸಿದೆ. ಈ ಘಟನೆ ತಮಿಳುನಾಡಿನಲ್ಲಿ ಜಾತಿವಾದದ ವಿರುದ್ಧ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕಮಲ್ ಹಾಸನ್ ಸೇರಿದಂತೆ ಹಲವು ರಾಜಕೀಯ ನಾಯಕರು ಖಂಡಿಸಿದ್ದಾರೆ.

ಮುಂಬೈ-ಕೋಲ್ಕತ್ತಾ ಇಂಡಿಗೋ ವಿಮಾನದಲ್ಲಿ ಮುಸ್ಲಿಂ ಪ್ರಯಾಣಿಕನಿಗೆ ಕಪಾಳಮೋಕ್ಷ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...