Homeಮುಖಪುಟದಲಿತ ಮಹಿಳೆಗೆ ಜಾತಿ ನಿಂದನೆಗೈದು ಥಳಿತ

ದಲಿತ ಮಹಿಳೆಗೆ ಜಾತಿ ನಿಂದನೆಗೈದು ಥಳಿತ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ದಲಿತ ಮಹಿಳೆಯನ್ನು ಜಾತಿ ನಿಂದನೆಗೈದು ಥಳಿಸಿದ ಆಘಾತಕಾರಿ ಘಟನೆ ನಡೆದಿದೆ. ದಲಿತ ಮಹಿಳೆಯ ಮೇಕೆ ದಾರಿ ತಪ್ಪಿ ಹೊಲಕ್ಕೆ ತೆರಳಿದ ಕಾರಣ ಆಕ್ರೋಶಗೊಂಡ ಹೊಲದ ಮಾಲಕ ಈ ಕೃತ್ಯವನ್ನು ಎಸಗಿದ್ದಾನೆ ಎನ್ನುವುದು ಬಯಲಾಗಿದೆ. ಈ ಘಟನೆಯು ಭಾರತದಲ್ಲಿ ದಲಿತರು ಎದುರಿಸುತ್ತಿರುವ ತಾರತಮ್ಯ ಮತ್ತು ಹಿಂಸಾಚಾರವನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ.

ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹ ವ್ಯಕ್ತವಾಗಿದೆ. ಅಸಹಾಯಕ ಮಹಿಳೆಯ ಮೇಲೆ ಅವಹೇಳನಕಾರಿಯಾಗಿ ಜಾತಿ ನಿಂದನೆಗಳನ್ನು ಮಾಡಿ ನಿರ್ದಯವಾಗಿ ಥಳಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಸ್ಥಳೀಯ ಅಧಿಕಾರಿಗಳು ಈ ಬಗ್ಗೆ ತನಿಖೆ ಆರಂಭಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ವಿರುದ್ಧ ಶೀಘ್ರ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.

ಫೆಬ್ರವರಿಯಲ್ಲಿ, ಗುಜರಾತ್‌ನ ಗಾಂಧಿನಗರದಲ್ಲಿ ದಲಿತ ವರನ ಮದುವೆಯ ಮೆರವಣಿಗೆಯ ಭಾಗವಾಗಿ ಕುದುರೆ ಸವಾರಿ ಮಾಡಿದ್ದಕ್ಕಾಗಿ ಹಲ್ಲೆ ನಡೆಸಲಾಗಿತ್ತು. ವರನು ಸುಮಾರು 100 ಮಂದಿ ಭಾಗವಹಿಸಿದ್ದ ಮೆರವಣಿಗೆಯಲ್ಲಿ ಕುದುರೆಯ ಮೇಲೆ ಸವಾರಿ ಮಾಡಿಕೊಂಡು ಗ್ರಾಮದ ವಧುವಿನ ಮನೆಗೆ ಹೋಗುತ್ತಿದ್ದಾಗ ಮೋಟಾರು ಸೈಕಲ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಅಡ್ಡಗಟ್ಟಿ ಅವನನ್ನು ಕುದುರೆಯಿಂದ ಕೆಳಗೆ ಎಳೆದು ಕಪಾಳಮೋಕ್ಷ ಮಾಡಿದ್ದಾನೆ. ಆರೋಪಿಯು, ತನ್ನ ಸಮುದಾಯದವರಿಗೆ ಮಾತ್ರ ಕುದುರೆ ಸವಾರಿ ಮಾಡಲು ಅವಕಾಶ ಇದೆ ಎಂದು ಹೇಳಿ ಜಾತಿ ನಿಂದನೆಗಳನ್ನು ಮಾಡಿದ್ದನು.

ಇತ್ತೀಚೆಗಷ್ಟೇ ಖನ್ನಾದ ಗೋಹ್ ಗ್ರಾಮದಲ್ಲಿ ಮೇವು ಸಂಗ್ರಹಿಸುತ್ತಿದ್ದ ನಾಲ್ವರು ದಲಿತ ಮಹಿಳೆಯರ ಮೇಲೆ ಭೂಮಾಲಕರೊಬ್ಬರು ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದರು. ಆರೋಪಿ ವಸಾಖಾ ಸಿಂಗ್ ತನ್ನ ಬಟ್ಟೆಗಳನ್ನು ಹರಿದು ಹಲ್ಲೆ ಮಾಡಿ ಜಾತಿ ನಿಂದನೆಗಳನ್ನು ಮಾಡಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದರು. ಗುರುದ್ವಾರ ರಾಮದಾಸಿಯಾ, ಸಮ್ರಾಲಾ ಹೊರಗೆ ಪ್ರತಿಭಟನೆಯ ನಂತರ, ಸದರ್ ಖನ್ನಾ ಪೊಲೀಸರು ವಸಾಖಾ ಸಿಂಗ್ ಅವರನ್ನು ಬಂಧಿಸಿದ್ದಾರೆ. ವಸಾಖಾ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 323, 354 ಮತ್ತು ಎಸ್ಸಿ, ಎಸ್ಟಿ ಕಾಯ್ದೆಯ ಸೆಕ್ಷನ್ 3ರಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನು ಓದಿ: ನೋಟ್‌ ಬ್ಯಾನ್‌ ಮಾಡಿದ ರೀತಿ ಸರಿಯಿಲ್ಲ: ಜಸ್ಟಿಸ್‌ ನಾಗರತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...