Homeಕರ್ನಾಟಕ334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

- Advertisement -
- Advertisement -

ಗ್ರೇಟರ್ ಚೆನ್ನೈ ಮಹಾನಗರ ಪಾಲಿಕೆಯು ಆರಂಭವಾಗಿ 334 ವರ್ಷಗಳು ಕಳೆದಿವೆ. ಈ ದೀರ್ಘಾವಧಿಯ ನಂತರ, ಮೊದಲ ಬಾರಿಗೆ ಚೆನ್ನೈ ಪಾಲಿಕೆಗೆ ದಲಿತ ಮಹಿಳೆಯೊಬ್ಬರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಪಾಲಿಕೆಯಲ್ಲಿ ಬಹುಮತ ಪಡೆದಿರುವ ಡಿಎಂಕೆ ಪಕ್ಷವು ದಲಿತ ಕಾರ್ಪೋರೇಟರ್ ಆರ್.ಪ್ರಿಯಾ ಅವರನ್ನು ಮೇಯರ್ ಹುದ್ದೆಗೆ ಶುಕ್ರವಾರ ನಡೆದ ಚುನಾವಣೆಗೆ ನಾಮನಿರ್ದೇಶನ ಮಾಡಿತ್ತು. ಚುನಾವಣೆಯಲ್ಲಿ ಹೆಚ್ಚು ಸದಸ್ಯರ ಬೆಂಬಲ ಪಡೆದ ಪ್ರಿಯಾ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಮಹಾನಗರ ಪಾಲಿಕೆಗಳಲ್ಲಿ ಮೇಯರ್, ಉಪಮೇಯರ್ ಹಾಗೂ ಪುರಸಭೆ ಅಧ್ಯಕ್ಷರು, ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಪರೋಕ್ಷ ಚುನಾವಣೆ ನಡೆದಿದೆ.

ತಾರಾ ಚೆರಿಯನ್ (ಕಾಂಗ್ರೆಸ್, 1957-1958) ಮತ್ತು ಕಾಮಾಕ್ಷಿ ಜಯರಾಮನ್ (ಡಿಎಂಕೆ, 1971-1972) ನಂತರ ಪ್ರಿಯಾ ಅವರು ಚೆನ್ನೈಗೆ ಮೂರನೇ ಮಹಿಳಾ ಮೇಯರ್ ಆಗಿದ್ದಾರೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನಲ್ಲಿರುವ ಒಟ್ಟು 200 ವಾರ್ಡ್‌‌ಗಳಲ್ಲಿ ಡಿಎಂಕೆ 153 ವಾರ್ಡ್‌‌ಗಳಲ್ಲಿ ಗೆಲುವು ಸಾಧಿಸಿತ್ತು. ಅಲ್ಲದೆ, ಡಿಎಂಕೆಯ ಮಿತ್ರಪಕ್ಷಗಳು 25 ಸ್ಥಾನಗಳನ್ನು ಗೆದ್ದಿವೆ. ಪಾಲಿಕೆಗೆ ಸರ್ಕಾರವು ಪರೋಕ್ಷ ಚುನಾವಣೆ ನಡೆಸಿದ್ದು, ಪ್ರಿಯಾ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಿಯಾ, ಚೆನ್ನೈನ ತಿರು-ವಿ-ಕಾ ನಗರದಲ್ಲಿ ವಾರ್ಡ್ ಸಂಖ್ಯೆ 74ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ವಾರ್ಡ್ ಚೆನ್ನೈ ನಗರದ ಅತ್ಯಂತ ಹಿಂದುಳಿದ ಮತ್ತು ಅಭಿವೃದ್ದಿ ಕಾಣದ ಪ್ರದೇಶಗಳಲ್ಲಿ ಒಂದಾಗಿದೆ. ಈ ವಾರ್ಡ್‌ನಲ್ಲಿ ಕಳಪೆ ಮೂಲಸೌಕರ್ಯಗಳಿದ್ದು, ಚಿಕ್ಕಚಿಕ್ಕ ಮನೆಗಳಲ್ಲಿ ಜನರು ವಾಸಿಸುತ್ತಿದ್ದಾರೆ.

ದಿ. ಮಾಜಿ ಸಿಎಂ ಜಯಲಲಿತಾ ಅವರು ಅಧಿಕಾರದಲ್ಲಿದ್ದಾಗ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿಯನ್ನು ಜಾರಿಗೆ ತಂದರು. ಬಳಿಕ, ಎಲ್ಲಾ ಪಕ್ಷದ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ತಮ್ಮ ಪತ್ನಿಯರು, ಸಹೋದರಿಯರು ಮತ್ತು ಮಕ್ಕಳನ್ನು ಕಣಕ್ಕಿಳಿಸಲು ಪ್ರಾರಂಭಿಸಿದ್ದರು. ಈಗಲೂ ಆ ರೀತಿಯ ನಿದರ್ಶನಗಳು ಸಾಕಷ್ಟಿವೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಹಿಳೆಯರ ಪರವಾಗಿ ಅವರ ಗಂಡಂದಿರು ಅಧಿಕಾರ ಚಲಾಯಿಸುತ್ತಿದ್ದ ಮತ್ತು ಚಲಾಯಿಸುತ್ತಿರುವುದೂ ಇದೆ. ಮಹಿಳಾ ಸದಸ್ಯರನ್ನು ಕೌನ್ಸಿಲ್ ಹಾಲ್‌ನಲ್ಲಿ ಟೋಕನಿಸಂ ರೀತಿಯಲ್ಲಿ ಮಾತ್ರ ಕೂರಿಸುತ್ತಿದ್ದದ್ದೂ ಇದೆ. ಚೈನ್ನೈ ಪಾಲಿಕೆಯಲ್ಲಿಯೂ ಇದೆಲ್ಲವೂ ನಡೆದಿದೆ. ಇದೆಲ್ಲವನ್ನೂ ನಿಭಾಯಿಸಿ ಮಹಿಳೆಯರೇ ತಮ್ಮ ಅಧಿಕಾರವನ್ನು ಚಲಾಯಿಸುವ ಮತ್ತು ಪಾಲಿಕೆಯಲ್ಲಿ ತಮ್ಮ ಇರುವಿಕೆಯನ್ನು ಸಾಬೀತುಪಡಿಸುವಂತೆ ಮಾಡುವ ದೊಡ್ಡ ಜವಾಬ್ದಾರಿಯೂ ಪ್ರಿಯಾ ಅವರ ಮೇಲಿದೆ. ತಮಿಳುನಾಡಿನ ವಿವಿಧ ಪಾಲಿಕೆಗಳಲ್ಲಿ ಒಟ್ಟಾರೆಯಾಗಿ ಡಿಎಂಕೆಯಿಂದ 11 ಮಹಿಳೆಯರು ಮೇಯರ್ ಹುದ್ದೆ ಅಲಂಕರಿಸಿದ್ದಾರೆ ಮತ್ತು 5 ಮಹಿಳೆಯರು ಉಪಮೇಯರ್ ಆಗಿದ್ದಾರೆ.

ಒಂದು ಮೇಯರ್, ಎರಡು ಉಪಮೇಯರ್‌ ಸ್ಥಾನ, ಪುರಸಭೆಗಳಲ್ಲಿ 6 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರು, ಪಟ್ಟಣ ಪಂಚಾಯತಿಗಳಲ್ಲಿ 8 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರ ಸ್ಥಾನಗಳನ್ನು ತಮ್ಮ ಪ್ರಮುಖ ಮಿತ್ರ ಪಕ್ಷವಾದ ಕಾಂಗ್ರೆ‍ಸ್‌ಗೆ ಡಿಎಂಕೆ ಬಿಟ್ಟುಕೊಟ್ಟಿದೆ. ಇತರ ಮಿತ್ರಪಕ್ಷಗಳಾದ ಸಿಪಿಐ (ಎಂ), ಸಿಪಿಐ, ಎಂಡಿಎಂಕೆ ಮತ್ತು ವಿಸಿಕೆ ತಲಾ ಒಂದು ಉಪಮೇಯರ್ ಹುದ್ದೆಯನ್ನು ಪಡೆದುಕೊಂಡಿವೆ.

ಕುಂಭಕೋಣಂನಲ್ಲಿ ಆಟೋರಿಕ್ಷಾ ಚಾಲಕ ಶರವಣನ್ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದ್ದು, ಅವರು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು.


ಇದನ್ನೂ ಓದಿರಿ: ರಾಯಚೂರು: ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ, ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...