Homeಕರ್ನಾಟಕ334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

- Advertisement -
- Advertisement -

ಗ್ರೇಟರ್ ಚೆನ್ನೈ ಮಹಾನಗರ ಪಾಲಿಕೆಯು ಆರಂಭವಾಗಿ 334 ವರ್ಷಗಳು ಕಳೆದಿವೆ. ಈ ದೀರ್ಘಾವಧಿಯ ನಂತರ, ಮೊದಲ ಬಾರಿಗೆ ಚೆನ್ನೈ ಪಾಲಿಕೆಗೆ ದಲಿತ ಮಹಿಳೆಯೊಬ್ಬರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಪಾಲಿಕೆಯಲ್ಲಿ ಬಹುಮತ ಪಡೆದಿರುವ ಡಿಎಂಕೆ ಪಕ್ಷವು ದಲಿತ ಕಾರ್ಪೋರೇಟರ್ ಆರ್.ಪ್ರಿಯಾ ಅವರನ್ನು ಮೇಯರ್ ಹುದ್ದೆಗೆ ಶುಕ್ರವಾರ ನಡೆದ ಚುನಾವಣೆಗೆ ನಾಮನಿರ್ದೇಶನ ಮಾಡಿತ್ತು. ಚುನಾವಣೆಯಲ್ಲಿ ಹೆಚ್ಚು ಸದಸ್ಯರ ಬೆಂಬಲ ಪಡೆದ ಪ್ರಿಯಾ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಮಹಾನಗರ ಪಾಲಿಕೆಗಳಲ್ಲಿ ಮೇಯರ್, ಉಪಮೇಯರ್ ಹಾಗೂ ಪುರಸಭೆ ಅಧ್ಯಕ್ಷರು, ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಪರೋಕ್ಷ ಚುನಾವಣೆ ನಡೆದಿದೆ.

ತಾರಾ ಚೆರಿಯನ್ (ಕಾಂಗ್ರೆಸ್, 1957-1958) ಮತ್ತು ಕಾಮಾಕ್ಷಿ ಜಯರಾಮನ್ (ಡಿಎಂಕೆ, 1971-1972) ನಂತರ ಪ್ರಿಯಾ ಅವರು ಚೆನ್ನೈಗೆ ಮೂರನೇ ಮಹಿಳಾ ಮೇಯರ್ ಆಗಿದ್ದಾರೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನಲ್ಲಿರುವ ಒಟ್ಟು 200 ವಾರ್ಡ್‌‌ಗಳಲ್ಲಿ ಡಿಎಂಕೆ 153 ವಾರ್ಡ್‌‌ಗಳಲ್ಲಿ ಗೆಲುವು ಸಾಧಿಸಿತ್ತು. ಅಲ್ಲದೆ, ಡಿಎಂಕೆಯ ಮಿತ್ರಪಕ್ಷಗಳು 25 ಸ್ಥಾನಗಳನ್ನು ಗೆದ್ದಿವೆ. ಪಾಲಿಕೆಗೆ ಸರ್ಕಾರವು ಪರೋಕ್ಷ ಚುನಾವಣೆ ನಡೆಸಿದ್ದು, ಪ್ರಿಯಾ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಿಯಾ, ಚೆನ್ನೈನ ತಿರು-ವಿ-ಕಾ ನಗರದಲ್ಲಿ ವಾರ್ಡ್ ಸಂಖ್ಯೆ 74ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ವಾರ್ಡ್ ಚೆನ್ನೈ ನಗರದ ಅತ್ಯಂತ ಹಿಂದುಳಿದ ಮತ್ತು ಅಭಿವೃದ್ದಿ ಕಾಣದ ಪ್ರದೇಶಗಳಲ್ಲಿ ಒಂದಾಗಿದೆ. ಈ ವಾರ್ಡ್‌ನಲ್ಲಿ ಕಳಪೆ ಮೂಲಸೌಕರ್ಯಗಳಿದ್ದು, ಚಿಕ್ಕಚಿಕ್ಕ ಮನೆಗಳಲ್ಲಿ ಜನರು ವಾಸಿಸುತ್ತಿದ್ದಾರೆ.

ದಿ. ಮಾಜಿ ಸಿಎಂ ಜಯಲಲಿತಾ ಅವರು ಅಧಿಕಾರದಲ್ಲಿದ್ದಾಗ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿಯನ್ನು ಜಾರಿಗೆ ತಂದರು. ಬಳಿಕ, ಎಲ್ಲಾ ಪಕ್ಷದ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ತಮ್ಮ ಪತ್ನಿಯರು, ಸಹೋದರಿಯರು ಮತ್ತು ಮಕ್ಕಳನ್ನು ಕಣಕ್ಕಿಳಿಸಲು ಪ್ರಾರಂಭಿಸಿದ್ದರು. ಈಗಲೂ ಆ ರೀತಿಯ ನಿದರ್ಶನಗಳು ಸಾಕಷ್ಟಿವೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಹಿಳೆಯರ ಪರವಾಗಿ ಅವರ ಗಂಡಂದಿರು ಅಧಿಕಾರ ಚಲಾಯಿಸುತ್ತಿದ್ದ ಮತ್ತು ಚಲಾಯಿಸುತ್ತಿರುವುದೂ ಇದೆ. ಮಹಿಳಾ ಸದಸ್ಯರನ್ನು ಕೌನ್ಸಿಲ್ ಹಾಲ್‌ನಲ್ಲಿ ಟೋಕನಿಸಂ ರೀತಿಯಲ್ಲಿ ಮಾತ್ರ ಕೂರಿಸುತ್ತಿದ್ದದ್ದೂ ಇದೆ. ಚೈನ್ನೈ ಪಾಲಿಕೆಯಲ್ಲಿಯೂ ಇದೆಲ್ಲವೂ ನಡೆದಿದೆ. ಇದೆಲ್ಲವನ್ನೂ ನಿಭಾಯಿಸಿ ಮಹಿಳೆಯರೇ ತಮ್ಮ ಅಧಿಕಾರವನ್ನು ಚಲಾಯಿಸುವ ಮತ್ತು ಪಾಲಿಕೆಯಲ್ಲಿ ತಮ್ಮ ಇರುವಿಕೆಯನ್ನು ಸಾಬೀತುಪಡಿಸುವಂತೆ ಮಾಡುವ ದೊಡ್ಡ ಜವಾಬ್ದಾರಿಯೂ ಪ್ರಿಯಾ ಅವರ ಮೇಲಿದೆ. ತಮಿಳುನಾಡಿನ ವಿವಿಧ ಪಾಲಿಕೆಗಳಲ್ಲಿ ಒಟ್ಟಾರೆಯಾಗಿ ಡಿಎಂಕೆಯಿಂದ 11 ಮಹಿಳೆಯರು ಮೇಯರ್ ಹುದ್ದೆ ಅಲಂಕರಿಸಿದ್ದಾರೆ ಮತ್ತು 5 ಮಹಿಳೆಯರು ಉಪಮೇಯರ್ ಆಗಿದ್ದಾರೆ.

ಒಂದು ಮೇಯರ್, ಎರಡು ಉಪಮೇಯರ್‌ ಸ್ಥಾನ, ಪುರಸಭೆಗಳಲ್ಲಿ 6 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರು, ಪಟ್ಟಣ ಪಂಚಾಯತಿಗಳಲ್ಲಿ 8 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರ ಸ್ಥಾನಗಳನ್ನು ತಮ್ಮ ಪ್ರಮುಖ ಮಿತ್ರ ಪಕ್ಷವಾದ ಕಾಂಗ್ರೆ‍ಸ್‌ಗೆ ಡಿಎಂಕೆ ಬಿಟ್ಟುಕೊಟ್ಟಿದೆ. ಇತರ ಮಿತ್ರಪಕ್ಷಗಳಾದ ಸಿಪಿಐ (ಎಂ), ಸಿಪಿಐ, ಎಂಡಿಎಂಕೆ ಮತ್ತು ವಿಸಿಕೆ ತಲಾ ಒಂದು ಉಪಮೇಯರ್ ಹುದ್ದೆಯನ್ನು ಪಡೆದುಕೊಂಡಿವೆ.

ಕುಂಭಕೋಣಂನಲ್ಲಿ ಆಟೋರಿಕ್ಷಾ ಚಾಲಕ ಶರವಣನ್ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದ್ದು, ಅವರು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು.


ಇದನ್ನೂ ಓದಿರಿ: ರಾಯಚೂರು: ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ, ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...