Homeಕರ್ನಾಟಕ334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

- Advertisement -
- Advertisement -

ಗ್ರೇಟರ್ ಚೆನ್ನೈ ಮಹಾನಗರ ಪಾಲಿಕೆಯು ಆರಂಭವಾಗಿ 334 ವರ್ಷಗಳು ಕಳೆದಿವೆ. ಈ ದೀರ್ಘಾವಧಿಯ ನಂತರ, ಮೊದಲ ಬಾರಿಗೆ ಚೆನ್ನೈ ಪಾಲಿಕೆಗೆ ದಲಿತ ಮಹಿಳೆಯೊಬ್ಬರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಪಾಲಿಕೆಯಲ್ಲಿ ಬಹುಮತ ಪಡೆದಿರುವ ಡಿಎಂಕೆ ಪಕ್ಷವು ದಲಿತ ಕಾರ್ಪೋರೇಟರ್ ಆರ್.ಪ್ರಿಯಾ ಅವರನ್ನು ಮೇಯರ್ ಹುದ್ದೆಗೆ ಶುಕ್ರವಾರ ನಡೆದ ಚುನಾವಣೆಗೆ ನಾಮನಿರ್ದೇಶನ ಮಾಡಿತ್ತು. ಚುನಾವಣೆಯಲ್ಲಿ ಹೆಚ್ಚು ಸದಸ್ಯರ ಬೆಂಬಲ ಪಡೆದ ಪ್ರಿಯಾ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಮಹಾನಗರ ಪಾಲಿಕೆಗಳಲ್ಲಿ ಮೇಯರ್, ಉಪಮೇಯರ್ ಹಾಗೂ ಪುರಸಭೆ ಅಧ್ಯಕ್ಷರು, ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಪರೋಕ್ಷ ಚುನಾವಣೆ ನಡೆದಿದೆ.

ತಾರಾ ಚೆರಿಯನ್ (ಕಾಂಗ್ರೆಸ್, 1957-1958) ಮತ್ತು ಕಾಮಾಕ್ಷಿ ಜಯರಾಮನ್ (ಡಿಎಂಕೆ, 1971-1972) ನಂತರ ಪ್ರಿಯಾ ಅವರು ಚೆನ್ನೈಗೆ ಮೂರನೇ ಮಹಿಳಾ ಮೇಯರ್ ಆಗಿದ್ದಾರೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನಲ್ಲಿರುವ ಒಟ್ಟು 200 ವಾರ್ಡ್‌‌ಗಳಲ್ಲಿ ಡಿಎಂಕೆ 153 ವಾರ್ಡ್‌‌ಗಳಲ್ಲಿ ಗೆಲುವು ಸಾಧಿಸಿತ್ತು. ಅಲ್ಲದೆ, ಡಿಎಂಕೆಯ ಮಿತ್ರಪಕ್ಷಗಳು 25 ಸ್ಥಾನಗಳನ್ನು ಗೆದ್ದಿವೆ. ಪಾಲಿಕೆಗೆ ಸರ್ಕಾರವು ಪರೋಕ್ಷ ಚುನಾವಣೆ ನಡೆಸಿದ್ದು, ಪ್ರಿಯಾ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಿಯಾ, ಚೆನ್ನೈನ ತಿರು-ವಿ-ಕಾ ನಗರದಲ್ಲಿ ವಾರ್ಡ್ ಸಂಖ್ಯೆ 74ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ವಾರ್ಡ್ ಚೆನ್ನೈ ನಗರದ ಅತ್ಯಂತ ಹಿಂದುಳಿದ ಮತ್ತು ಅಭಿವೃದ್ದಿ ಕಾಣದ ಪ್ರದೇಶಗಳಲ್ಲಿ ಒಂದಾಗಿದೆ. ಈ ವಾರ್ಡ್‌ನಲ್ಲಿ ಕಳಪೆ ಮೂಲಸೌಕರ್ಯಗಳಿದ್ದು, ಚಿಕ್ಕಚಿಕ್ಕ ಮನೆಗಳಲ್ಲಿ ಜನರು ವಾಸಿಸುತ್ತಿದ್ದಾರೆ.

ದಿ. ಮಾಜಿ ಸಿಎಂ ಜಯಲಲಿತಾ ಅವರು ಅಧಿಕಾರದಲ್ಲಿದ್ದಾಗ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿಯನ್ನು ಜಾರಿಗೆ ತಂದರು. ಬಳಿಕ, ಎಲ್ಲಾ ಪಕ್ಷದ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ತಮ್ಮ ಪತ್ನಿಯರು, ಸಹೋದರಿಯರು ಮತ್ತು ಮಕ್ಕಳನ್ನು ಕಣಕ್ಕಿಳಿಸಲು ಪ್ರಾರಂಭಿಸಿದ್ದರು. ಈಗಲೂ ಆ ರೀತಿಯ ನಿದರ್ಶನಗಳು ಸಾಕಷ್ಟಿವೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಹಿಳೆಯರ ಪರವಾಗಿ ಅವರ ಗಂಡಂದಿರು ಅಧಿಕಾರ ಚಲಾಯಿಸುತ್ತಿದ್ದ ಮತ್ತು ಚಲಾಯಿಸುತ್ತಿರುವುದೂ ಇದೆ. ಮಹಿಳಾ ಸದಸ್ಯರನ್ನು ಕೌನ್ಸಿಲ್ ಹಾಲ್‌ನಲ್ಲಿ ಟೋಕನಿಸಂ ರೀತಿಯಲ್ಲಿ ಮಾತ್ರ ಕೂರಿಸುತ್ತಿದ್ದದ್ದೂ ಇದೆ. ಚೈನ್ನೈ ಪಾಲಿಕೆಯಲ್ಲಿಯೂ ಇದೆಲ್ಲವೂ ನಡೆದಿದೆ. ಇದೆಲ್ಲವನ್ನೂ ನಿಭಾಯಿಸಿ ಮಹಿಳೆಯರೇ ತಮ್ಮ ಅಧಿಕಾರವನ್ನು ಚಲಾಯಿಸುವ ಮತ್ತು ಪಾಲಿಕೆಯಲ್ಲಿ ತಮ್ಮ ಇರುವಿಕೆಯನ್ನು ಸಾಬೀತುಪಡಿಸುವಂತೆ ಮಾಡುವ ದೊಡ್ಡ ಜವಾಬ್ದಾರಿಯೂ ಪ್ರಿಯಾ ಅವರ ಮೇಲಿದೆ. ತಮಿಳುನಾಡಿನ ವಿವಿಧ ಪಾಲಿಕೆಗಳಲ್ಲಿ ಒಟ್ಟಾರೆಯಾಗಿ ಡಿಎಂಕೆಯಿಂದ 11 ಮಹಿಳೆಯರು ಮೇಯರ್ ಹುದ್ದೆ ಅಲಂಕರಿಸಿದ್ದಾರೆ ಮತ್ತು 5 ಮಹಿಳೆಯರು ಉಪಮೇಯರ್ ಆಗಿದ್ದಾರೆ.

ಒಂದು ಮೇಯರ್, ಎರಡು ಉಪಮೇಯರ್‌ ಸ್ಥಾನ, ಪುರಸಭೆಗಳಲ್ಲಿ 6 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರು, ಪಟ್ಟಣ ಪಂಚಾಯತಿಗಳಲ್ಲಿ 8 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರ ಸ್ಥಾನಗಳನ್ನು ತಮ್ಮ ಪ್ರಮುಖ ಮಿತ್ರ ಪಕ್ಷವಾದ ಕಾಂಗ್ರೆ‍ಸ್‌ಗೆ ಡಿಎಂಕೆ ಬಿಟ್ಟುಕೊಟ್ಟಿದೆ. ಇತರ ಮಿತ್ರಪಕ್ಷಗಳಾದ ಸಿಪಿಐ (ಎಂ), ಸಿಪಿಐ, ಎಂಡಿಎಂಕೆ ಮತ್ತು ವಿಸಿಕೆ ತಲಾ ಒಂದು ಉಪಮೇಯರ್ ಹುದ್ದೆಯನ್ನು ಪಡೆದುಕೊಂಡಿವೆ.

ಕುಂಭಕೋಣಂನಲ್ಲಿ ಆಟೋರಿಕ್ಷಾ ಚಾಲಕ ಶರವಣನ್ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದ್ದು, ಅವರು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು.


ಇದನ್ನೂ ಓದಿರಿ: ರಾಯಚೂರು: ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ, ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...