Homeಕರ್ನಾಟಕ334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

- Advertisement -
- Advertisement -

ಗ್ರೇಟರ್ ಚೆನ್ನೈ ಮಹಾನಗರ ಪಾಲಿಕೆಯು ಆರಂಭವಾಗಿ 334 ವರ್ಷಗಳು ಕಳೆದಿವೆ. ಈ ದೀರ್ಘಾವಧಿಯ ನಂತರ, ಮೊದಲ ಬಾರಿಗೆ ಚೆನ್ನೈ ಪಾಲಿಕೆಗೆ ದಲಿತ ಮಹಿಳೆಯೊಬ್ಬರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಪಾಲಿಕೆಯಲ್ಲಿ ಬಹುಮತ ಪಡೆದಿರುವ ಡಿಎಂಕೆ ಪಕ್ಷವು ದಲಿತ ಕಾರ್ಪೋರೇಟರ್ ಆರ್.ಪ್ರಿಯಾ ಅವರನ್ನು ಮೇಯರ್ ಹುದ್ದೆಗೆ ಶುಕ್ರವಾರ ನಡೆದ ಚುನಾವಣೆಗೆ ನಾಮನಿರ್ದೇಶನ ಮಾಡಿತ್ತು. ಚುನಾವಣೆಯಲ್ಲಿ ಹೆಚ್ಚು ಸದಸ್ಯರ ಬೆಂಬಲ ಪಡೆದ ಪ್ರಿಯಾ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಮಹಾನಗರ ಪಾಲಿಕೆಗಳಲ್ಲಿ ಮೇಯರ್, ಉಪಮೇಯರ್ ಹಾಗೂ ಪುರಸಭೆ ಅಧ್ಯಕ್ಷರು, ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಪರೋಕ್ಷ ಚುನಾವಣೆ ನಡೆದಿದೆ.

ತಾರಾ ಚೆರಿಯನ್ (ಕಾಂಗ್ರೆಸ್, 1957-1958) ಮತ್ತು ಕಾಮಾಕ್ಷಿ ಜಯರಾಮನ್ (ಡಿಎಂಕೆ, 1971-1972) ನಂತರ ಪ್ರಿಯಾ ಅವರು ಚೆನ್ನೈಗೆ ಮೂರನೇ ಮಹಿಳಾ ಮೇಯರ್ ಆಗಿದ್ದಾರೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನಲ್ಲಿರುವ ಒಟ್ಟು 200 ವಾರ್ಡ್‌‌ಗಳಲ್ಲಿ ಡಿಎಂಕೆ 153 ವಾರ್ಡ್‌‌ಗಳಲ್ಲಿ ಗೆಲುವು ಸಾಧಿಸಿತ್ತು. ಅಲ್ಲದೆ, ಡಿಎಂಕೆಯ ಮಿತ್ರಪಕ್ಷಗಳು 25 ಸ್ಥಾನಗಳನ್ನು ಗೆದ್ದಿವೆ. ಪಾಲಿಕೆಗೆ ಸರ್ಕಾರವು ಪರೋಕ್ಷ ಚುನಾವಣೆ ನಡೆಸಿದ್ದು, ಪ್ರಿಯಾ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಿಯಾ, ಚೆನ್ನೈನ ತಿರು-ವಿ-ಕಾ ನಗರದಲ್ಲಿ ವಾರ್ಡ್ ಸಂಖ್ಯೆ 74ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ವಾರ್ಡ್ ಚೆನ್ನೈ ನಗರದ ಅತ್ಯಂತ ಹಿಂದುಳಿದ ಮತ್ತು ಅಭಿವೃದ್ದಿ ಕಾಣದ ಪ್ರದೇಶಗಳಲ್ಲಿ ಒಂದಾಗಿದೆ. ಈ ವಾರ್ಡ್‌ನಲ್ಲಿ ಕಳಪೆ ಮೂಲಸೌಕರ್ಯಗಳಿದ್ದು, ಚಿಕ್ಕಚಿಕ್ಕ ಮನೆಗಳಲ್ಲಿ ಜನರು ವಾಸಿಸುತ್ತಿದ್ದಾರೆ.

ದಿ. ಮಾಜಿ ಸಿಎಂ ಜಯಲಲಿತಾ ಅವರು ಅಧಿಕಾರದಲ್ಲಿದ್ದಾಗ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿಯನ್ನು ಜಾರಿಗೆ ತಂದರು. ಬಳಿಕ, ಎಲ್ಲಾ ಪಕ್ಷದ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ತಮ್ಮ ಪತ್ನಿಯರು, ಸಹೋದರಿಯರು ಮತ್ತು ಮಕ್ಕಳನ್ನು ಕಣಕ್ಕಿಳಿಸಲು ಪ್ರಾರಂಭಿಸಿದ್ದರು. ಈಗಲೂ ಆ ರೀತಿಯ ನಿದರ್ಶನಗಳು ಸಾಕಷ್ಟಿವೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಹಿಳೆಯರ ಪರವಾಗಿ ಅವರ ಗಂಡಂದಿರು ಅಧಿಕಾರ ಚಲಾಯಿಸುತ್ತಿದ್ದ ಮತ್ತು ಚಲಾಯಿಸುತ್ತಿರುವುದೂ ಇದೆ. ಮಹಿಳಾ ಸದಸ್ಯರನ್ನು ಕೌನ್ಸಿಲ್ ಹಾಲ್‌ನಲ್ಲಿ ಟೋಕನಿಸಂ ರೀತಿಯಲ್ಲಿ ಮಾತ್ರ ಕೂರಿಸುತ್ತಿದ್ದದ್ದೂ ಇದೆ. ಚೈನ್ನೈ ಪಾಲಿಕೆಯಲ್ಲಿಯೂ ಇದೆಲ್ಲವೂ ನಡೆದಿದೆ. ಇದೆಲ್ಲವನ್ನೂ ನಿಭಾಯಿಸಿ ಮಹಿಳೆಯರೇ ತಮ್ಮ ಅಧಿಕಾರವನ್ನು ಚಲಾಯಿಸುವ ಮತ್ತು ಪಾಲಿಕೆಯಲ್ಲಿ ತಮ್ಮ ಇರುವಿಕೆಯನ್ನು ಸಾಬೀತುಪಡಿಸುವಂತೆ ಮಾಡುವ ದೊಡ್ಡ ಜವಾಬ್ದಾರಿಯೂ ಪ್ರಿಯಾ ಅವರ ಮೇಲಿದೆ. ತಮಿಳುನಾಡಿನ ವಿವಿಧ ಪಾಲಿಕೆಗಳಲ್ಲಿ ಒಟ್ಟಾರೆಯಾಗಿ ಡಿಎಂಕೆಯಿಂದ 11 ಮಹಿಳೆಯರು ಮೇಯರ್ ಹುದ್ದೆ ಅಲಂಕರಿಸಿದ್ದಾರೆ ಮತ್ತು 5 ಮಹಿಳೆಯರು ಉಪಮೇಯರ್ ಆಗಿದ್ದಾರೆ.

ಒಂದು ಮೇಯರ್, ಎರಡು ಉಪಮೇಯರ್‌ ಸ್ಥಾನ, ಪುರಸಭೆಗಳಲ್ಲಿ 6 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರು, ಪಟ್ಟಣ ಪಂಚಾಯತಿಗಳಲ್ಲಿ 8 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರ ಸ್ಥಾನಗಳನ್ನು ತಮ್ಮ ಪ್ರಮುಖ ಮಿತ್ರ ಪಕ್ಷವಾದ ಕಾಂಗ್ರೆ‍ಸ್‌ಗೆ ಡಿಎಂಕೆ ಬಿಟ್ಟುಕೊಟ್ಟಿದೆ. ಇತರ ಮಿತ್ರಪಕ್ಷಗಳಾದ ಸಿಪಿಐ (ಎಂ), ಸಿಪಿಐ, ಎಂಡಿಎಂಕೆ ಮತ್ತು ವಿಸಿಕೆ ತಲಾ ಒಂದು ಉಪಮೇಯರ್ ಹುದ್ದೆಯನ್ನು ಪಡೆದುಕೊಂಡಿವೆ.

ಕುಂಭಕೋಣಂನಲ್ಲಿ ಆಟೋರಿಕ್ಷಾ ಚಾಲಕ ಶರವಣನ್ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದ್ದು, ಅವರು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು.


ಇದನ್ನೂ ಓದಿರಿ: ರಾಯಚೂರು: ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ, ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...