Homeಕರ್ನಾಟಕ334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

- Advertisement -
- Advertisement -

ಗ್ರೇಟರ್ ಚೆನ್ನೈ ಮಹಾನಗರ ಪಾಲಿಕೆಯು ಆರಂಭವಾಗಿ 334 ವರ್ಷಗಳು ಕಳೆದಿವೆ. ಈ ದೀರ್ಘಾವಧಿಯ ನಂತರ, ಮೊದಲ ಬಾರಿಗೆ ಚೆನ್ನೈ ಪಾಲಿಕೆಗೆ ದಲಿತ ಮಹಿಳೆಯೊಬ್ಬರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಪಾಲಿಕೆಯಲ್ಲಿ ಬಹುಮತ ಪಡೆದಿರುವ ಡಿಎಂಕೆ ಪಕ್ಷವು ದಲಿತ ಕಾರ್ಪೋರೇಟರ್ ಆರ್.ಪ್ರಿಯಾ ಅವರನ್ನು ಮೇಯರ್ ಹುದ್ದೆಗೆ ಶುಕ್ರವಾರ ನಡೆದ ಚುನಾವಣೆಗೆ ನಾಮನಿರ್ದೇಶನ ಮಾಡಿತ್ತು. ಚುನಾವಣೆಯಲ್ಲಿ ಹೆಚ್ಚು ಸದಸ್ಯರ ಬೆಂಬಲ ಪಡೆದ ಪ್ರಿಯಾ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಮಹಾನಗರ ಪಾಲಿಕೆಗಳಲ್ಲಿ ಮೇಯರ್, ಉಪಮೇಯರ್ ಹಾಗೂ ಪುರಸಭೆ ಅಧ್ಯಕ್ಷರು, ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಪರೋಕ್ಷ ಚುನಾವಣೆ ನಡೆದಿದೆ.

ತಾರಾ ಚೆರಿಯನ್ (ಕಾಂಗ್ರೆಸ್, 1957-1958) ಮತ್ತು ಕಾಮಾಕ್ಷಿ ಜಯರಾಮನ್ (ಡಿಎಂಕೆ, 1971-1972) ನಂತರ ಪ್ರಿಯಾ ಅವರು ಚೆನ್ನೈಗೆ ಮೂರನೇ ಮಹಿಳಾ ಮೇಯರ್ ಆಗಿದ್ದಾರೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನಲ್ಲಿರುವ ಒಟ್ಟು 200 ವಾರ್ಡ್‌‌ಗಳಲ್ಲಿ ಡಿಎಂಕೆ 153 ವಾರ್ಡ್‌‌ಗಳಲ್ಲಿ ಗೆಲುವು ಸಾಧಿಸಿತ್ತು. ಅಲ್ಲದೆ, ಡಿಎಂಕೆಯ ಮಿತ್ರಪಕ್ಷಗಳು 25 ಸ್ಥಾನಗಳನ್ನು ಗೆದ್ದಿವೆ. ಪಾಲಿಕೆಗೆ ಸರ್ಕಾರವು ಪರೋಕ್ಷ ಚುನಾವಣೆ ನಡೆಸಿದ್ದು, ಪ್ರಿಯಾ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಿಯಾ, ಚೆನ್ನೈನ ತಿರು-ವಿ-ಕಾ ನಗರದಲ್ಲಿ ವಾರ್ಡ್ ಸಂಖ್ಯೆ 74ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ವಾರ್ಡ್ ಚೆನ್ನೈ ನಗರದ ಅತ್ಯಂತ ಹಿಂದುಳಿದ ಮತ್ತು ಅಭಿವೃದ್ದಿ ಕಾಣದ ಪ್ರದೇಶಗಳಲ್ಲಿ ಒಂದಾಗಿದೆ. ಈ ವಾರ್ಡ್‌ನಲ್ಲಿ ಕಳಪೆ ಮೂಲಸೌಕರ್ಯಗಳಿದ್ದು, ಚಿಕ್ಕಚಿಕ್ಕ ಮನೆಗಳಲ್ಲಿ ಜನರು ವಾಸಿಸುತ್ತಿದ್ದಾರೆ.

ದಿ. ಮಾಜಿ ಸಿಎಂ ಜಯಲಲಿತಾ ಅವರು ಅಧಿಕಾರದಲ್ಲಿದ್ದಾಗ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿಯನ್ನು ಜಾರಿಗೆ ತಂದರು. ಬಳಿಕ, ಎಲ್ಲಾ ಪಕ್ಷದ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ತಮ್ಮ ಪತ್ನಿಯರು, ಸಹೋದರಿಯರು ಮತ್ತು ಮಕ್ಕಳನ್ನು ಕಣಕ್ಕಿಳಿಸಲು ಪ್ರಾರಂಭಿಸಿದ್ದರು. ಈಗಲೂ ಆ ರೀತಿಯ ನಿದರ್ಶನಗಳು ಸಾಕಷ್ಟಿವೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಹಿಳೆಯರ ಪರವಾಗಿ ಅವರ ಗಂಡಂದಿರು ಅಧಿಕಾರ ಚಲಾಯಿಸುತ್ತಿದ್ದ ಮತ್ತು ಚಲಾಯಿಸುತ್ತಿರುವುದೂ ಇದೆ. ಮಹಿಳಾ ಸದಸ್ಯರನ್ನು ಕೌನ್ಸಿಲ್ ಹಾಲ್‌ನಲ್ಲಿ ಟೋಕನಿಸಂ ರೀತಿಯಲ್ಲಿ ಮಾತ್ರ ಕೂರಿಸುತ್ತಿದ್ದದ್ದೂ ಇದೆ. ಚೈನ್ನೈ ಪಾಲಿಕೆಯಲ್ಲಿಯೂ ಇದೆಲ್ಲವೂ ನಡೆದಿದೆ. ಇದೆಲ್ಲವನ್ನೂ ನಿಭಾಯಿಸಿ ಮಹಿಳೆಯರೇ ತಮ್ಮ ಅಧಿಕಾರವನ್ನು ಚಲಾಯಿಸುವ ಮತ್ತು ಪಾಲಿಕೆಯಲ್ಲಿ ತಮ್ಮ ಇರುವಿಕೆಯನ್ನು ಸಾಬೀತುಪಡಿಸುವಂತೆ ಮಾಡುವ ದೊಡ್ಡ ಜವಾಬ್ದಾರಿಯೂ ಪ್ರಿಯಾ ಅವರ ಮೇಲಿದೆ. ತಮಿಳುನಾಡಿನ ವಿವಿಧ ಪಾಲಿಕೆಗಳಲ್ಲಿ ಒಟ್ಟಾರೆಯಾಗಿ ಡಿಎಂಕೆಯಿಂದ 11 ಮಹಿಳೆಯರು ಮೇಯರ್ ಹುದ್ದೆ ಅಲಂಕರಿಸಿದ್ದಾರೆ ಮತ್ತು 5 ಮಹಿಳೆಯರು ಉಪಮೇಯರ್ ಆಗಿದ್ದಾರೆ.

ಒಂದು ಮೇಯರ್, ಎರಡು ಉಪಮೇಯರ್‌ ಸ್ಥಾನ, ಪುರಸಭೆಗಳಲ್ಲಿ 6 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರು, ಪಟ್ಟಣ ಪಂಚಾಯತಿಗಳಲ್ಲಿ 8 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರ ಸ್ಥಾನಗಳನ್ನು ತಮ್ಮ ಪ್ರಮುಖ ಮಿತ್ರ ಪಕ್ಷವಾದ ಕಾಂಗ್ರೆ‍ಸ್‌ಗೆ ಡಿಎಂಕೆ ಬಿಟ್ಟುಕೊಟ್ಟಿದೆ. ಇತರ ಮಿತ್ರಪಕ್ಷಗಳಾದ ಸಿಪಿಐ (ಎಂ), ಸಿಪಿಐ, ಎಂಡಿಎಂಕೆ ಮತ್ತು ವಿಸಿಕೆ ತಲಾ ಒಂದು ಉಪಮೇಯರ್ ಹುದ್ದೆಯನ್ನು ಪಡೆದುಕೊಂಡಿವೆ.

ಕುಂಭಕೋಣಂನಲ್ಲಿ ಆಟೋರಿಕ್ಷಾ ಚಾಲಕ ಶರವಣನ್ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದ್ದು, ಅವರು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು.


ಇದನ್ನೂ ಓದಿರಿ: ರಾಯಚೂರು: ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ, ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...