Homeದಲಿತ್ ಫೈಲ್ಸ್ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ.

ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ ಈತ ಕಾಂಪೌಂಡರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಮೀರತ್ ಮತ್ತು ಸಹರಾನ್ಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಹರಿದ್ವಾರ ಸಮೀಪ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಶದಲ್ಲಿದ್ದ ಯುವತಿಯನ್ನು ರಕ್ಷಿಸಿದ್ದಾರೆ. ಇಬ್ಬರನ್ನೂ ಮೀರತ್‌ಗೆ ಕರೆತರಲಾಗಿದೆ ಎಂದು ವರದಿಯಾಗಿದೆ.

ಯುವತಿಯ ಹೇಳಿಕೆ ಪಡೆಯುವುದು ಸೇರಿದಂತೆ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ಮತ್ತು ಆರೋಪಿ ಯುವಕನ ನಡುವೆ ಕಳೆದ ಮೂರು ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಈ ನಡುವೆ ಯುವತಿಯ ಕುಟುಂಬಸ್ಥರು ಆಕೆಗೆ ಬೇರೆ ಯುವಕನ ಜೊತೆ ಮದುವೆ ಮಾಡಲು ಮುಂದಾಗಿದ್ದರು. ಈ ವಿಷಯ ತಿಳಿದು ಆಕೆಯನ್ನು ಕರೆದೊಯ್ಯಲು ಯುವಕ ಮುಂದಾಗಿದ್ದ. ಇದಕ್ಕೆ ಅಡ್ಡಿಯಾದ ಆಕೆಯ ತಾಯಿಯನ್ನು ಕೊಲೆ ಮಾಡಿದ್ದಾನೆ ಎಂದು ಕೆಲ ವರದಿಗಳು ಹೇಳಿವೆ. ಅಪರಾಧದ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಘಟನೆಯ ಹಿನ್ನೆಲೆ : ಮೀರತ್‌ನ ಸರ್ಧಾನ ಪೊಲೀಸ್ ಠಾಣೆ ವ್ಯಾಪ್ತಿಯ ಕಪ್ಸದ್ ಗ್ರಾಮದಲ್ಲಿ ಜನವರಿ 8ರಂದು ಬೆಳಿಗ್ಗೆ ಘಟನೆ ನಡೆದಿದೆ. ಯುವತಿ ಮತ್ತು ಆಕೆಯ ತಾಯಿ ಹೊಲಕ್ಕೆ ಕೆಲಸಕ್ಕೆ ಹೋಗುತ್ತಿದ್ದಾಗ, ಮಾರ್ಗ ಮಧ್ಯೆ ಅವರನ್ನು ತಡೆದ ಆರೋಪಿ ಪರಾಸ್ ಸೋಮ್, ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ತಾಯಿ ಮಗಳನ್ನು ರಕ್ಷಿಸಲು ಮುಂದಾದಾಗ ಆರೋಪಿ ಪರಾಸ್ ಆಕೆಯ ತಲೆಗೆ ಹರಿತವಾಗಿ ಆಯುಧದಿಂದ ಹೊಡೆದಿದ್ದ. ಪರಿಣಾಮ ಆಕೆಗೆ ಗಂಭೀರ ಗಾಯವಾಗಿತ್ತು. ಸ್ಥಳೀಯರು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ, ತೀವ್ರ ರಕ್ತಸ್ರಾವದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ತಾಯಿಯ ತಲೆಗೆ ಹೊಡೆದ ಬಳಿಕ, ಆರೋಪಿ ಪರಾಸ್ ಆತನ ಸಹಚರರ ಜೊತೆಗೂಡಿ ಯುವತಿಯನ್ನು ಅಪಹರಿಸಿದ್ದ. ಆರೋಪಿಯ ಸಹಚರರ ಪೈಕಿ ಓರ್ವನ ಹೆಸರು ಸುನಿಲ್ ಕುಮಾರ್ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ರಾಜಕೀಯ ನಾಯಕರಿಂದ ಖಂಡನೆ

ದಲಿತ ಮಹಿಳೆಯ ಕೊಲೆ ಮತ್ತು ಆಕೆಯ ಮಗಳ ಅಪಹರಣ ಪ್ರಕರಣ ಉತ್ತರ ಪ್ರದೇಶದ ಮಾತ್ರವಲ್ಲದೆ, ದೇಶದಾದ್ಯಂತ ಸುದ್ದಿಯಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಭೀಮ್ ಆರ್ಮಿ ಸೇರಿದಂತೆ ದಲಿತ ಸಂಘಟನೆಗಳು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿವೆ.

ಮಾಯಾವತಿ, ಅಖಿಲೇಶ್ ಯಾದವ್, ಚಂದ್ರಶೇಖರ್ ಆಝಾದ್ ಸೇರಿದಂತೆ ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ತೆರಳುತ್ತಿದ್ದ ಚಂದ್ರಶೇಖರ್ ಆಝಾದ್ ಅವರನ್ನು ಶನಿವಾರ ಪೊಲೀಸರು ತಡೆದಿದ್ದಾರೆ.

ಪೊಲೀಸರು ಕೊಲೆ, ಅಪಹರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಗ್ರಾಮದಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ. ರಾಜಕೀಯ ಭೇಟಿಗಳನ್ನು ತಡೆಯಲು ರಸ್ತೆಗಳನ್ನು ಮುಚ್ಚಲಾಗಿದೆ. ಸಂತ್ರಸ್ತೆಯ ಕುಟುಂಬವು ಆರಂಭದಲ್ಲಿ ಅಂತ್ಯಕ್ರಿಯೆ ನಡೆಸಲು ನಿರಾಕರಿಸಿತ್ತು. ಆರೋಪಿಗಳ ಬಂಧನ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಿತ್ತು.

ಕೊಲೆಯಾದ ಮಹಿಳೆಯ ಕುಟುಂಬಕ್ಕೆ ಆರಂಭದಲ್ಲಿ 10 ಲಕ್ಷ ರೂಪಾಯಿ ಪರಿಹಾರ ಮತ್ತು ಭದ್ರತೆಯನ್ನು ಒದಗಿಸುವುದಾಗಿ ಸರ್ಕಾರ ಭರವಸೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...