ಉತ್ತರ ಪ್ರದೇಶ ರಾಜ್ಯದ ಶಹಜಹಾನ್ಪುರದ ಹಳ್ಳಿಯೊಂದರಲ್ಲಿ 18 ವರ್ಷದ ದಲಿತ ಯುವತಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಯುವತಿ ದನಗಳನ್ನು ಮೇಯಿಸಲು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಲ್ಹಾರ್ ಪೊಲೀಸ್ ಠಾಣೆಯ ಎಸ್ಎಚ್ಒ ಸಂಜಯ್ ಕುಮಾರ್ ಹೇಳಿದ್ದಾರೆ. ಆರೋಪಿ ಮಧ್ಯವಯಸ್ಕ ವ್ಯಕ್ತಿಯಾಗಿದ್ದು, ಸಂತ್ರಸ್ತೆಯ ಗ್ರಾಮದವನೇ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಗೆ ಹಿಂದಿರುಗಿದ ನಂತರ ಯುವತಿ ತನ್ನ ಕುಟುಂಬ ಸದಸ್ಯರಿಗೆ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿಸಿದ್ದಾರೆ. ನಂತರ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡದ್ದು, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ದೆಹಲಿಯ ನೈರುತ್ಯ ದೆಹಲಿಯ ಕಂಟೋನ್ಮೆಂಟ್ ಬಳಿ ಆಗಸ್ಟ್ 1 ರಂದು ದಲಿತ ಬಾಲಕಿ ಮೇಲೆ 55 ವರ್ಷದ ಸ್ಮಶಾನದ ಪೂಜಾರಿ ರಾಧೇ ಶ್ಯಾಮ್ ಮತ್ತು ಸ್ಮಶಾನದ ಉದ್ಯೋಗಿ ಕುಲದೀಪ್ ಸಿಂಗ್ ಇಬ್ಬರು ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ, ಕುಟುಂಬದ ಒಪ್ಪಿಗೆಯಿಲ್ಲದೆ ಅಂತ್ಯಸಂಸ್ಕಾರ ಮಾಡಲಾಗಿತ್ತು. ಈ ಕುರಿತು ಬಾಲಕಿಯ ತಾಯಿಯ ಹೇಳಿಕೆಯ ಆಧಾರದ ಮೇಲೆ ದೆಹಲಿ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ಶಿವರಾಮ ಕಾರಂತ್ ಬಡಾವಣೆ ಎಂಬ ‘ಅಭಿವೃದ್ಧಿ’ ಯೋಜನೆ; ದಲಿತರು-ಬಡಬಗ್ಗರ ಮೇಲೆ ಪ್ರಹಾರ