Homeಕರ್ನಾಟಕಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

ಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

- Advertisement -
- Advertisement -

ಬ್ಯಾಟರಾಯನಪುರ: ದಲಿತ ಮಹಿಳೆ ಕುಳಿತಿದ್ದ ಕುರ್ಚಿಯನ್ನು, ಗೋಮೂತ್ರದಿಂದ ಶುದ್ಧೀಕರಿಸಿ ನಂತರ ಬಳಸಿರುವ ಘಟನೆ ಇಲ್ಲಿನ ಬಾಗಲೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.

ದಲಿತ ಮಹಿಳೆ ಅಧ್ಯಕ್ಷರಾಗಿ ಕುಳಿತ್ತಿದ್ದ ಕುರ್ಚಿಯನ್ನು ಅವರು ಅಧಿಕಾರದಿಂದ ಕೆಳಗಿಳಿದ ಬಳಿಕ ಸವರ್ಣಿಯ ವ್ಯಕ್ತಿ ಗೋಮೂತ್ರದಿಂದ ಶುದ್ಧೀಕರಿಸಿದ್ದಾನೆ ಎಂದು ಬಿಜೆಪಿ ಎಸ್‌ಸಿ ಮೊರ್ಚಾ ಆರೋಪಿಸಿದೆ. ಈ ಕುರಿತು ಮೊರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

ಏನಿದು ಘಟನೆ? ಬಿಜೆಪಿ ಎಸ್‌.ಸಿ. ಮೋರ್ಚಾದ ಆರೋಪವೇನು?

ಬಾಗಲೂರು ಕಾಂಗ್ರೆಸ್ ಮುಖಂಡ, ಗ್ರಾ.ಪಂ.ಅಧ್ಯಕ್ಷ ಜೆ.ಮುನೇಗೌಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರ ಹೆಸರಲ್ಲಿ ನಕಲಿ ಖಾತೆ ತೆರೆದು ಗ್ರಾ.ಪಂ.ಹಣ ದುರುಪಯೋಗ ಪಡಿಸಿಕೊಳ್ಳುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಪ್ರಾದೇಶಿಕ ಆಯುಕ್ತರು ಬೆಂಗಳೂರು ಸೇರಿದಂತೆ ಸಂಬಂಧಪಟ್ಟ ವಿವಿಧ ಇಲಾಖೆಗಳಿಗೆ 2019ರಲ್ಲಿ ಲಿಖಿತ ದೂರು ಸಲ್ಲಿಸಲಾಗಿತ್ತು. ಸದರಿ ದೂರನ್ನು ಕಳೆದ ಎರಡು ವರ್ಷಗಳಿಂದ ಪರಿಶೀಲಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ 1993ರ ಪ್ರಕರಣ 43(ಎ) ಮತ್ತು (48(4)ರ ಅನ್ವಯ ಇತ್ತೀಚೆಗೆ ಗ್ರಾ.ಪಂ. ಅಧ್ಯಕ್ಷ ಜೆ.ಮುನೇಗೌಡ ಅವರನ್ನು ಗ್ರಾ.ಪಂ. ಅಧ್ಯಕ್ಷ ಸ್ಥಾನದಿಂದ ಅಮಾನತ್ತುಗೊಳಿಸಲಾಗಿತ್ತು.

ಅಮಾನತುಗೊಂಡ ಅಧ್ಯಕ್ಷರ ಸ್ಥಾನವನ್ನು ಅಲಂಕರಿಸಿ ಉಪಾಧ್ಯಕ್ಷೆ ಯಶೋಧಮ್ಮ ಮೂರು ದಿನಗಳ ಕಾಲ ಆಡಳಿತ ನಡೆಸಿದ್ದರು. ಈ ನಡುವೆ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಗ್ರಾ.ಪಂ. ಅಧ್ಯಕ್ಷ ಜೆ.ಮುನೇಗೌಡ ನ್ಯಾಯಾಲಯದ ಮೊರೆ ಹೋಗಿ, ತಮ್ಮ ವಿರುದ್ಧ ಕೈಗೊಂಡಿರುವ ಅಮಾನತು ಆದೇಶವನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಿದ್ದರು. ನ್ಯಾಯಾಲಯ ಗ್ರಾ.ಪಂ. ಅಧ್ಯಕ್ಷ ಜೆ.ಮುನೇಗೌಡರ ಮನವಿಯನ್ನು ಪರಿಶೀಲಿಸಿ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಜೆ.ಮುನೇಗೌಡರು ಪುನಃ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.

(ವಿಡಿಯೊ ನೋಡಿ)

ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ಆದರೆ ಜೆ.ಮುನೇಗೌಡ ಅಮಾನತುಗೊಂಡ ವೇಳೆಯ ಮೂರು ದಿನಗಳ ಕಾಲ ಅಧ್ಯಕ್ಷರ ಕುರ್ಚಿ ಅಲಂಕರಿಸಿದ್ದ ಉಪಾಧ್ಯಕ್ಷೆ ಯಶೋಧಮ್ಮ ದಲಿತ ಸಮುದಾಯಕ್ಕೆ ಸೇರಿದ ಮಹಿಳೆಯಾಗಿದ್ದು, ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಅಧ್ಯಕ್ಷ ಸ್ಥಾನವನ್ನು ಪುನಃ ಅಲಂಕರಿಸಲು ಆಗಮಿಸಿದ ಜೆ.ಮುನೇಗೌಡ ಅಧ್ಯಕ್ಷರ ಕುರ್ಚಿಯನ್ನು ಗ್ರಾ.ಪಂ. ಕಚೇರಿಯಿಂದ ಹೊರತಂದು, ಅದನ್ನು ಸ್ವಚ್ಛಗೊಳಿಸಿ, ಸಗಣಿ ಮತ್ತು ಗೋಮೂತ್ರ ಪ್ರೋಕ್ಷಣೆ ಮಾಡಿದ್ದಾರೆ ಎಂದು ದೂರಲಾಗಿದೆ. ದಲಿತ ಮಹಿಳೆ ಕುರ್ಚಿಯ ಮೇಲೆ ಕುಳಿತಿದ್ದರಿಂದ ಅದು ಅಪವಿತ್ರವಾಗಿದೆ ಎಂದು ಜೆ.ಮುನೇಗೌಡ ಈ ರೀತಿ ಮಾಡಿದ್ದಾರೆ ಎಂಬುದು ದಲಿತ ಸಮುದಾಯದ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಜೆಪಿ ಎಸ್.ಸಿ.ಮೋರ್ಚಾ ಪದಾಧಿಕಾರಿಗಳು ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಲವು ಮುಖಂಡರೊಡಗೂಡಿ ಬಾಗಲೂರು ಉಪಾಧ್ಯಕ್ಷೆ, ಘಟನೆಯ ಕೇಂದ್ರ ಬಿಂದುವಾಗಿರುವ ಯಶೋಧಮ್ಮನವರ ಮನೆಗೆ ಭೇಟಿ ನೀಡಿದ್ದಾರೆ.

ದಲಿತ ಸಮುದಾಯಕ್ಕೆ ಅಪಮಾನಿಸಿರುವ ಇಂತಹ ಕೃತ್ಯಗಳು ಮರುಕಳಿಸಬಾರದು ಹಾಗೂ ಉಪಾಧ್ಯಕ್ಷೆ ಯಶೋಧಮ್ಮ ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಬಾಗಲೂರು ಪೊಲೀಸರಿಗೆ ಲಿಖಿತ ದೂರಿನ ಮನವಿಯನ್ನು ದಲಿತ ಮುಖಂಡರು ಮಾಡಿದ್ದಾರೆ.

“ದಲಿತ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್‌ನ ದಲಿತ ವಿರೋಧಿತನವಿದು” ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಾಗಲೂರು ಗ್ರಾಪಂ ಸೇರಲಿದ್ದು, ಕ್ಷೇತ್ರದ ಶಾಸಕ ಕೃಷ್ಣ ಭೈರೇಗೌಡ ಅವರ ಪ್ರತಿಕ್ರಿಯೆಗೆ ‘ನಾನುಗೌರಿ.ಕಾಂ’ ಸಂಪರ್ಕಿಸಿತು. “ಈ ಕುರಿತು ಮಾಹಿತಿ ಇಲ್ಲ” ಎಂದು ಶಾಸಕರು ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿರಿ: ಕೇರಳ: ದಲಿತ ಮಹಿಳೆಗೆ ಮನೆ ಕಟ್ಟುಲು ಸಾಮಾಗ್ರಿಯನ್ನು ಕೊಂಡೊಯ್ಯಲು ಬಿಡದ ಮೇಲ್ಜಾತಿ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...