Homeಕರ್ನಾಟಕಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

ಬಾಗಲೂರು ಗ್ರಾಪಂ: ದಲಿತ ಅಧ್ಯಕ್ಷೆ ಕುಳಿತ ಕುರ್ಚಿ ಗೋಮೂತ್ರದಿಂದ ಶುದ್ಧೀಕರಣ: ಬಿಜೆಪಿ ದೂರು

- Advertisement -
- Advertisement -

ಬ್ಯಾಟರಾಯನಪುರ: ದಲಿತ ಮಹಿಳೆ ಕುಳಿತಿದ್ದ ಕುರ್ಚಿಯನ್ನು, ಗೋಮೂತ್ರದಿಂದ ಶುದ್ಧೀಕರಿಸಿ ನಂತರ ಬಳಸಿರುವ ಘಟನೆ ಇಲ್ಲಿನ ಬಾಗಲೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.

ದಲಿತ ಮಹಿಳೆ ಅಧ್ಯಕ್ಷರಾಗಿ ಕುಳಿತ್ತಿದ್ದ ಕುರ್ಚಿಯನ್ನು ಅವರು ಅಧಿಕಾರದಿಂದ ಕೆಳಗಿಳಿದ ಬಳಿಕ ಸವರ್ಣಿಯ ವ್ಯಕ್ತಿ ಗೋಮೂತ್ರದಿಂದ ಶುದ್ಧೀಕರಿಸಿದ್ದಾನೆ ಎಂದು ಬಿಜೆಪಿ ಎಸ್‌ಸಿ ಮೊರ್ಚಾ ಆರೋಪಿಸಿದೆ. ಈ ಕುರಿತು ಮೊರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

ಏನಿದು ಘಟನೆ? ಬಿಜೆಪಿ ಎಸ್‌.ಸಿ. ಮೋರ್ಚಾದ ಆರೋಪವೇನು?

ಬಾಗಲೂರು ಕಾಂಗ್ರೆಸ್ ಮುಖಂಡ, ಗ್ರಾ.ಪಂ.ಅಧ್ಯಕ್ಷ ಜೆ.ಮುನೇಗೌಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರ ಹೆಸರಲ್ಲಿ ನಕಲಿ ಖಾತೆ ತೆರೆದು ಗ್ರಾ.ಪಂ.ಹಣ ದುರುಪಯೋಗ ಪಡಿಸಿಕೊಳ್ಳುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಪ್ರಾದೇಶಿಕ ಆಯುಕ್ತರು ಬೆಂಗಳೂರು ಸೇರಿದಂತೆ ಸಂಬಂಧಪಟ್ಟ ವಿವಿಧ ಇಲಾಖೆಗಳಿಗೆ 2019ರಲ್ಲಿ ಲಿಖಿತ ದೂರು ಸಲ್ಲಿಸಲಾಗಿತ್ತು. ಸದರಿ ದೂರನ್ನು ಕಳೆದ ಎರಡು ವರ್ಷಗಳಿಂದ ಪರಿಶೀಲಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ 1993ರ ಪ್ರಕರಣ 43(ಎ) ಮತ್ತು (48(4)ರ ಅನ್ವಯ ಇತ್ತೀಚೆಗೆ ಗ್ರಾ.ಪಂ. ಅಧ್ಯಕ್ಷ ಜೆ.ಮುನೇಗೌಡ ಅವರನ್ನು ಗ್ರಾ.ಪಂ. ಅಧ್ಯಕ್ಷ ಸ್ಥಾನದಿಂದ ಅಮಾನತ್ತುಗೊಳಿಸಲಾಗಿತ್ತು.

ಅಮಾನತುಗೊಂಡ ಅಧ್ಯಕ್ಷರ ಸ್ಥಾನವನ್ನು ಅಲಂಕರಿಸಿ ಉಪಾಧ್ಯಕ್ಷೆ ಯಶೋಧಮ್ಮ ಮೂರು ದಿನಗಳ ಕಾಲ ಆಡಳಿತ ನಡೆಸಿದ್ದರು. ಈ ನಡುವೆ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಗ್ರಾ.ಪಂ. ಅಧ್ಯಕ್ಷ ಜೆ.ಮುನೇಗೌಡ ನ್ಯಾಯಾಲಯದ ಮೊರೆ ಹೋಗಿ, ತಮ್ಮ ವಿರುದ್ಧ ಕೈಗೊಂಡಿರುವ ಅಮಾನತು ಆದೇಶವನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಿದ್ದರು. ನ್ಯಾಯಾಲಯ ಗ್ರಾ.ಪಂ. ಅಧ್ಯಕ್ಷ ಜೆ.ಮುನೇಗೌಡರ ಮನವಿಯನ್ನು ಪರಿಶೀಲಿಸಿ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಜೆ.ಮುನೇಗೌಡರು ಪುನಃ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.

(ವಿಡಿಯೊ ನೋಡಿ)

ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ಆದರೆ ಜೆ.ಮುನೇಗೌಡ ಅಮಾನತುಗೊಂಡ ವೇಳೆಯ ಮೂರು ದಿನಗಳ ಕಾಲ ಅಧ್ಯಕ್ಷರ ಕುರ್ಚಿ ಅಲಂಕರಿಸಿದ್ದ ಉಪಾಧ್ಯಕ್ಷೆ ಯಶೋಧಮ್ಮ ದಲಿತ ಸಮುದಾಯಕ್ಕೆ ಸೇರಿದ ಮಹಿಳೆಯಾಗಿದ್ದು, ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಅಧ್ಯಕ್ಷ ಸ್ಥಾನವನ್ನು ಪುನಃ ಅಲಂಕರಿಸಲು ಆಗಮಿಸಿದ ಜೆ.ಮುನೇಗೌಡ ಅಧ್ಯಕ್ಷರ ಕುರ್ಚಿಯನ್ನು ಗ್ರಾ.ಪಂ. ಕಚೇರಿಯಿಂದ ಹೊರತಂದು, ಅದನ್ನು ಸ್ವಚ್ಛಗೊಳಿಸಿ, ಸಗಣಿ ಮತ್ತು ಗೋಮೂತ್ರ ಪ್ರೋಕ್ಷಣೆ ಮಾಡಿದ್ದಾರೆ ಎಂದು ದೂರಲಾಗಿದೆ. ದಲಿತ ಮಹಿಳೆ ಕುರ್ಚಿಯ ಮೇಲೆ ಕುಳಿತಿದ್ದರಿಂದ ಅದು ಅಪವಿತ್ರವಾಗಿದೆ ಎಂದು ಜೆ.ಮುನೇಗೌಡ ಈ ರೀತಿ ಮಾಡಿದ್ದಾರೆ ಎಂಬುದು ದಲಿತ ಸಮುದಾಯದ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಜೆಪಿ ಎಸ್.ಸಿ.ಮೋರ್ಚಾ ಪದಾಧಿಕಾರಿಗಳು ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಲವು ಮುಖಂಡರೊಡಗೂಡಿ ಬಾಗಲೂರು ಉಪಾಧ್ಯಕ್ಷೆ, ಘಟನೆಯ ಕೇಂದ್ರ ಬಿಂದುವಾಗಿರುವ ಯಶೋಧಮ್ಮನವರ ಮನೆಗೆ ಭೇಟಿ ನೀಡಿದ್ದಾರೆ.

ದಲಿತ ಸಮುದಾಯಕ್ಕೆ ಅಪಮಾನಿಸಿರುವ ಇಂತಹ ಕೃತ್ಯಗಳು ಮರುಕಳಿಸಬಾರದು ಹಾಗೂ ಉಪಾಧ್ಯಕ್ಷೆ ಯಶೋಧಮ್ಮ ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಬಾಗಲೂರು ಪೊಲೀಸರಿಗೆ ಲಿಖಿತ ದೂರಿನ ಮನವಿಯನ್ನು ದಲಿತ ಮುಖಂಡರು ಮಾಡಿದ್ದಾರೆ.

“ದಲಿತ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್‌ನ ದಲಿತ ವಿರೋಧಿತನವಿದು” ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಾಗಲೂರು ಗ್ರಾಪಂ ಸೇರಲಿದ್ದು, ಕ್ಷೇತ್ರದ ಶಾಸಕ ಕೃಷ್ಣ ಭೈರೇಗೌಡ ಅವರ ಪ್ರತಿಕ್ರಿಯೆಗೆ ‘ನಾನುಗೌರಿ.ಕಾಂ’ ಸಂಪರ್ಕಿಸಿತು. “ಈ ಕುರಿತು ಮಾಹಿತಿ ಇಲ್ಲ” ಎಂದು ಶಾಸಕರು ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿರಿ: ಕೇರಳ: ದಲಿತ ಮಹಿಳೆಗೆ ಮನೆ ಕಟ್ಟುಲು ಸಾಮಾಗ್ರಿಯನ್ನು ಕೊಂಡೊಯ್ಯಲು ಬಿಡದ ಮೇಲ್ಜಾತಿ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...