Homeಮುಖಪುಟಪಾಟ್ನಾ: ಹೆಚ್ಚಿನ ಬಡ್ಡಿ ನೀಡಿದಿದ್ದಕ್ಕೆ ದಲಿತ ಮಹಿಳೆಯನ್ನು ಬೆತ್ತಲುಗೊಳಿಸಿ, ಮೂತ್ರ ಕುಡಿಸಿ, ಹಲ್ಲೆ

ಪಾಟ್ನಾ: ಹೆಚ್ಚಿನ ಬಡ್ಡಿ ನೀಡಿದಿದ್ದಕ್ಕೆ ದಲಿತ ಮಹಿಳೆಯನ್ನು ಬೆತ್ತಲುಗೊಳಿಸಿ, ಮೂತ್ರ ಕುಡಿಸಿ, ಹಲ್ಲೆ

- Advertisement -
- Advertisement -

ದಲಿತ ಮಹಿಳೆಯೊಬ್ಬರು ಸಾಲ ಹಿಂದಿರುಗಿಸಿಸರೂ, ಹೆಚ್ಚಿನ ಬಡ್ಡಿ ನೀಡವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಲ್ಲೇ, ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ಮೋಸಿಂಪುರ ಗ್ರಾಮದಲ್ಲಿ ನಡೆದಿದೆ.

ಸಾಲ ನೀಡಿದ ವ್ಯಕ್ತಿಗೆ ಹಣವನ್ನು ಹಿಂದಿರುಗಿಸಿದ್ರೂ ಮಹಿಳೆಗೆ ಹೆಚ್ಚಿನ ಬಡ್ಡಿ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಮಹಿಳೆ ನಿರಕಾರಿಸಿದ್ದು, ಇದರಿಂದ ಕೋಪಗೊಂಡ ಸಾಲ ನೀಡಿದ ವ್ಯಕ್ತಿ ಮಹಿಳೆಗೆ ಕ್ರೂರವಾಗಿ ಹಲ್ಲೆ ಮಾಡಿ, ವಿವಸ್ತ್ರಗೊಳಿಸಿದ್ದಾನೆ ಎಂದು ಹೇಳಲಾಗಿದೆ.

”ಈ ವೇಳೆ ಸಾಲ ನೀಡಿದ ವ್ಯಕ್ತಿಯ ಮಗ ಮಹಿಳೆಯ ಬಾಯಿಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಪತಿ ಪಾಟ್ನಾ ಜಿಲ್ಲೆಯ ಮೋಸಿಂಪುರ ಗ್ರಾಮದ ಪ್ರಮೋದ್ ಸಿಂಗ್ ಅವರಿಂದ 1,500 ಸಾಲ ಪಡೆದಿದ್ದರು” ಎಂದು ಪೊಲೀಸರು ಹೇಳಿದ್ದಾರೆ.

”ದಂಪತಿಗಳು ಸಾಲ ಪಡೆದ ಹಣವನ್ನು ಬಡ್ಡಿ ಸಹಿತ ಮರುಪಾವತಿ ಮಾಡಿದ್ದರು. ಆದರೆ ಪ್ರಮೋದ್ ಸಿಂಗ್ ಹೆಚ್ಚುವರಿ ಬಡ್ಡಿ ನೀಡುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ದಂಪತಿಗಳು ಒಪ್ಪದಿದ್ದಾಗ ಪ್ರಮೋದ್ ಸಿಂಗ್​​ನ ಮಗ ಮತ್ತು ಆತ ಸಹಾಯಕರು ಹಲ್ಲೆ ಮಾಡಿದ್ದಾರೆ” ಎಂದು ಪೊಲೀಸ್​​ ವರದಿ ಹೇಳಿದೆ.

”ಶನಿವಾರ ರಾತ್ರಿ ಮನೆಯ ಹೊರಗೆ ನೀರು ತುಂಬಿಸುತ್ತಿರುವಾಗ ಪ್ರಮೋದ್, ಆತನ ಮಗ ಅಂಶು ಮತ್ತು ಇತರ ನಾಲ್ವರು ಪುರುಷರು ತಮ್ಮೊಂದಿಗೆ ಬರುವಂತೆ ಒತ್ತಾಯಿಸಿದ್ದಾರೆ” ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

”ನಾನು ಎಲ್ಲಿಗೂ ಬರುವುದಿಲ್ಲ ಎಂದು ಹೇಳಿದಾಗ ಆಕೆಗೆ ದೊಣ್ಣೆಯಿಂದ ಥಳಿಸಿದ್ದು, ಗ್ರಾಮದ ಹೊರಗೆ ಕರೆದುಕೊಂಡು ಹೋಗಿ ವಿವಸ್ತ್ರಗೊಳಿಸಿದ್ದಾರೆ. ನಂತರ ಪ್ರಮೋದ್ ಸಿಂಗ್ ತನ್ನ ಮಗ ಅಂಶುಗೆ ನನ್ನ ಬಾಯಿಗೆ ಮೂತ್ರ ಮಾಡು ಎಂದು ಹೇಳಿದ್ದಾನೆ” ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ನಂತರ ಮಹಿಳೆ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದಿದ್ದಾಳೆ. ಇನ್ನು ಈಕೆ ಬೆತ್ತಲೆಯಾಗಿ ಓಡಿಕೊಂಡು ಬರುವುದನ್ನು ಗ್ರಾಮಸ್ಥರು ನೋಡಿದ್ದಾರೆ. ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ವೈದ್ಯನನ್ನು ಥಳಿಸಿ ಹತ್ಯೆ; ಬಿಜೆಪಿ ನಾಯಕನ ಸಂಬಂಧಿಯಿಂದ ಕೃತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...