Homeದಲಿತ್ ಫೈಲ್ಸ್ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ (ಅಡುಗೆ ಸಿಬ್ಬಂದಿ) ಸುನೀತಾ ದೇವಿ ಅವರು ತಯಾರಿಸಿದ ಬಿಸಿಯೂಟವನ್ನು ಸೇವಿಸಲು ಏಳರಿಂದ ಎಂಟು ವಿದ್ಯಾರ್ಥಿಗಳು ಮತ್ತೆ ನಿರಾಕರಿಸಿದ್ದಾರೆ.

ಡಿಸೆಂಬರ್‌ 2021ರಲ್ಲಿ ದಲಿತ ಮಹಿಳೆಯನ್ನು ವಜಾಗೊಳಿಸಿದಾಗ ವಿವಾದ ಸೃಷ್ಟಿಯಾಗಿತ್ತು. ದಲಿತ ವಿದ್ಯಾರ್ಥಿಗಳು ಸವರ್ಣೀಯರು ತಯಾರಿಸಿದ ಊಟವನ್ನು ಸೇವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ದಲಿತ ಮಹಿಳೆಯನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ‘ಈಗ ಮತ್ತೆ ವಿವಾದ ಶುರುವಾಗಿದೆ’ ಎಂದು ಶಾಲೆಯ ಪ್ರಾಂಶುಪಾಲರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ನಂತರ ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ನರೇಂದ್ರ ಸಿಂಗ್ ಭಂಡಾರಿ ಅವರು ಮೇ 20ರಂದು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿದ್ದಾರೆ. ಜೌಲ್‌ನಲ್ಲಿರುವ ಸ್ವತಂತ್ರ ಸಂಗ್ರಾಮ ಸೇನಾನಿ ದಿವಂಗತ ಶ್ರೀ ರಾಮಚಂದ್ರ ಸರ್ಕಾರಿ ಅಂತರ ಕಾಲೇಜಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಬೇಕು ಎಂದು ಸೂಚಿಸಿದ್ದಾರೆ.

“ಇಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌, ಕೆಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಭೆ ನಡೆಸಿದರು. ಊಟವನ್ನು ಬಹಿಷ್ಕರಿಸುವುದನ್ನು ನಿಲ್ಲಿಸುವಂತೆ ಮನವೊಲಿಸಲು ಪ್ರಯತ್ನಿಸಿದರು. ಅಧಿಕಾರಿಗಳೇ ಶಾಲೆಯಲ್ಲಿ ಊಟ ಮಾಡಿದರು. ಆದಾಗ್ಯೂ, ಈ 7-8 ವಿದ್ಯಾರ್ಥಿಗಳು ಊಟ ತಿನ್ನಲು ನಿರಾಕರಿಸಿದರು. ಅನ್ನವನ್ನು ತಿನ್ನುವುದಿಲ್ಲ ಎಂದು ಈ ವಿದ್ಯಾರ್ಥಿಗಳು ಹೇಳಿಕೊಂಡರು” ಎಂದು ಪ್ರಾಂಶುಪಾಲರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ..

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

ದಲಿತ ಮಹಿಳೆಯನ್ನು ವಜಾಗೊಳಿಸಿ ಮರುನೇಮಕ ಮಾಡಲಾಗಿದೆ. ಅದೇ ಶಾಲೆಯಲ್ಲಿ ಆರರಿಂದ ಎಂಟನೇ ತರಗತಿಗಳಲ್ಲಿ ಓದುತ್ತಿರುವ ಸವರ್ಣೀಯ ಸಮುದಾಯಕ್ಕೆ ಸೇರಿದ ಸುಮಾರು 43 ವಿದ್ಯಾರ್ಥಿಗಳು ದೇವಿ ಬೇಯಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದರು.

23 ಡಿಸೆಂಬರ್ 2021ರಂದು, ಚಂಪಾವತ್ ಶಿಕ್ಷಣ ಇಲಾಖೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದ್ದರು. ನೇಮಕಾತಿಯಲ್ಲಿನ ಕಾರ್ಯವಿಧಾನದಲ್ಲಿ ಲೋಪವಾಗಿದೆ ಎಂದು ಕಾರಣ ನೀಡಿದ್ದರು. ದಲಿತ ಮಹಿಳೆಯ ಬದಲಿಗೆ ಸವರ್ಣೀಯ ಜಾತಿಗೆ ಸೇರಿದವರನ್ನು ನೇಮಿಸಲಾಗಿತ್ತು. ಇದಕ್ಕೆ ಪ್ರತಿರೋಧವಾಗಿ ಶಾಲೆಯ 23 ದಲಿತ ವಿದ್ಯಾರ್ಥಿಗಳು ಸವರ್ಣೀಯ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ಸೇವಿಸಲು ನಿರಾಕರಿಸಿದರು.

ಇದನ್ನೂ ಓದಿರಿ: #RejectBrahminTextBooks ಟ್ವಿಟರ್‌ ಅಭಿಯಾನ ಇಂದು

ದೇವಿ ಅವರನ್ನು ವಜಾಗೊಳಿಸಿದ ನಂತರ, ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರದೀಪ್ ತಮ್ತಾ ಅವರು ಧ್ವನಿ ಎತ್ತಿ, “ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಮರುಸ್ಥಾಪಿಸಲು” ಕಾಂಗ್ರೆಸ್ ಆಂದೋಲನವನ್ನು ಪ್ರಾರಂಭಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಕ್ರಿಯೆ ನೀಡಿ, “ಸುನೀತಾ ದೇವಿಯವರನ್ನು ಮರುಸೇರ್ಪಡೆ ಮಾಡದಿದ್ದರೆ, ನಮ್ಮ ಸಂಘಟನೆಯು ಉತ್ತರಾಖಂಡ್ ಮುಖ್ಯಮಂತ್ರಿ ಸಚಿವ ಪುಷ್ಕರ್ ಸಿಂಗ್ ಧಾಮಿಗೆ ಘೇರಾವ್ ಹಾಕಲಿದೆ” ಎಂದಿದ್ದರು.

ದೇವಿಯವರನ್ನು ಜನವರಿ 1 ರಂದು ಮರು ನೇಮಕ ಮಾಡಲಾಯಿತು. ಮಾರ್ಚ್‌ ತಿಂಗಳಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಅಡುಗೆ ಮಾಡಲು ದೇವಿ ಆರಂಭಿಸಿದರು.

ತಮ್ಮನ್ನು ವಜಾಗೊಳಿಸಿದ ನಂತರ ಉತ್ತರಾಖಂಡ ಪೊಲೀಸರಿಗೆ ದೇವಿ ದೂರು ನೀಡಿದ್ದರು. ದೇವಿಯವರಿಗೆ ಜಾತಿ ನಿಂದನೆ ಹಾಗೂ ಕ್ರಿಮಿನಲ್ ಬೆದರಿಕೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಲಿತ ಮಹಿಳೆಗೆ ಸರ್ಕಾರ ನೀಡಿರುವ ಪರಿಶುದ್ದತೆಯ ನಿರ್ವಹಣೆಯ ತರಪೇತಿ, ಅಡುಗೆ ತರಪೇತಿಯ ವಿವರಗಳನ್ನು ಮತ್ತು ಆಕೆ ತರಪೇತಿಯ ಕೊನೆಯಲ್ಲಿ ಜನರ ಆರೋಗ್ಯದ ಮತ್ತು ಯೋಗಕ್ಷೇಮದ ಬಗ್ಗೆ ತೆಗೆದುಕೊಂಡ ಪ್ರತಿಜ್ಞೆಯನ್ನು ಜನರಿಗೆ ಮತ್ತು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಅಲ್ಲದೆ ಈ ಸಮಸ್ಯೆಗೆ ಉತ್ತರಿಸಲಾಗದಿರುವ ಇನ್ನೂ ಹಲವಾರು ವಿಷಯಗಳಿವೆ. ಅದನ್ನು ಸರ್ಕಾರ ಒಂದು ನಿಯೋಗದ ಮುಖಾಂತರ ಅಧ್ಯಯನ ಮಾಡಿ ಜನರು ಕೇಳುವ ಮತ್ತು ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವ ಎಲ್ಲಾ ವಿಷಯಗಳಿಗೂ ಕೇವಲ ಮಾತಿನಲ್ಲಲ್ಲದೆ ಕಾರ್ಯತಹ: ಪರಿಹರಿಸುವ ಪ್ರಯತ್ನವನ್ನು ಮಾಡಬೇಕು. ಉದಾಹರಣೆಗೆ : ಒಬ್ಬ ಮ್ಯಾನ್‌ಹೋಲ್‌ ಕ್ಲೀನ್‌ ಮಾಡುವವನ ಹೆಂಡತಿ ಕುಕ್‌ ಆದರೆ ಪರಿಶುದ್ದತೆಯ ಬಗ್ಗೆ ಅನುಮಾನಗಳು ಸಹಜವಾಗಿರುತ್ತವೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...