Homeದಲಿತ್ ಫೈಲ್ಸ್ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ (ಅಡುಗೆ ಸಿಬ್ಬಂದಿ) ಸುನೀತಾ ದೇವಿ ಅವರು ತಯಾರಿಸಿದ ಬಿಸಿಯೂಟವನ್ನು ಸೇವಿಸಲು ಏಳರಿಂದ ಎಂಟು ವಿದ್ಯಾರ್ಥಿಗಳು ಮತ್ತೆ ನಿರಾಕರಿಸಿದ್ದಾರೆ.

ಡಿಸೆಂಬರ್‌ 2021ರಲ್ಲಿ ದಲಿತ ಮಹಿಳೆಯನ್ನು ವಜಾಗೊಳಿಸಿದಾಗ ವಿವಾದ ಸೃಷ್ಟಿಯಾಗಿತ್ತು. ದಲಿತ ವಿದ್ಯಾರ್ಥಿಗಳು ಸವರ್ಣೀಯರು ತಯಾರಿಸಿದ ಊಟವನ್ನು ಸೇವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ದಲಿತ ಮಹಿಳೆಯನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ‘ಈಗ ಮತ್ತೆ ವಿವಾದ ಶುರುವಾಗಿದೆ’ ಎಂದು ಶಾಲೆಯ ಪ್ರಾಂಶುಪಾಲರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ನಂತರ ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ನರೇಂದ್ರ ಸಿಂಗ್ ಭಂಡಾರಿ ಅವರು ಮೇ 20ರಂದು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿದ್ದಾರೆ. ಜೌಲ್‌ನಲ್ಲಿರುವ ಸ್ವತಂತ್ರ ಸಂಗ್ರಾಮ ಸೇನಾನಿ ದಿವಂಗತ ಶ್ರೀ ರಾಮಚಂದ್ರ ಸರ್ಕಾರಿ ಅಂತರ ಕಾಲೇಜಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಬೇಕು ಎಂದು ಸೂಚಿಸಿದ್ದಾರೆ.

“ಇಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌, ಕೆಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಭೆ ನಡೆಸಿದರು. ಊಟವನ್ನು ಬಹಿಷ್ಕರಿಸುವುದನ್ನು ನಿಲ್ಲಿಸುವಂತೆ ಮನವೊಲಿಸಲು ಪ್ರಯತ್ನಿಸಿದರು. ಅಧಿಕಾರಿಗಳೇ ಶಾಲೆಯಲ್ಲಿ ಊಟ ಮಾಡಿದರು. ಆದಾಗ್ಯೂ, ಈ 7-8 ವಿದ್ಯಾರ್ಥಿಗಳು ಊಟ ತಿನ್ನಲು ನಿರಾಕರಿಸಿದರು. ಅನ್ನವನ್ನು ತಿನ್ನುವುದಿಲ್ಲ ಎಂದು ಈ ವಿದ್ಯಾರ್ಥಿಗಳು ಹೇಳಿಕೊಂಡರು” ಎಂದು ಪ್ರಾಂಶುಪಾಲರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ..

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

ದಲಿತ ಮಹಿಳೆಯನ್ನು ವಜಾಗೊಳಿಸಿ ಮರುನೇಮಕ ಮಾಡಲಾಗಿದೆ. ಅದೇ ಶಾಲೆಯಲ್ಲಿ ಆರರಿಂದ ಎಂಟನೇ ತರಗತಿಗಳಲ್ಲಿ ಓದುತ್ತಿರುವ ಸವರ್ಣೀಯ ಸಮುದಾಯಕ್ಕೆ ಸೇರಿದ ಸುಮಾರು 43 ವಿದ್ಯಾರ್ಥಿಗಳು ದೇವಿ ಬೇಯಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದರು.

23 ಡಿಸೆಂಬರ್ 2021ರಂದು, ಚಂಪಾವತ್ ಶಿಕ್ಷಣ ಇಲಾಖೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದ್ದರು. ನೇಮಕಾತಿಯಲ್ಲಿನ ಕಾರ್ಯವಿಧಾನದಲ್ಲಿ ಲೋಪವಾಗಿದೆ ಎಂದು ಕಾರಣ ನೀಡಿದ್ದರು. ದಲಿತ ಮಹಿಳೆಯ ಬದಲಿಗೆ ಸವರ್ಣೀಯ ಜಾತಿಗೆ ಸೇರಿದವರನ್ನು ನೇಮಿಸಲಾಗಿತ್ತು. ಇದಕ್ಕೆ ಪ್ರತಿರೋಧವಾಗಿ ಶಾಲೆಯ 23 ದಲಿತ ವಿದ್ಯಾರ್ಥಿಗಳು ಸವರ್ಣೀಯ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ಸೇವಿಸಲು ನಿರಾಕರಿಸಿದರು.

ಇದನ್ನೂ ಓದಿರಿ: #RejectBrahminTextBooks ಟ್ವಿಟರ್‌ ಅಭಿಯಾನ ಇಂದು

ದೇವಿ ಅವರನ್ನು ವಜಾಗೊಳಿಸಿದ ನಂತರ, ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರದೀಪ್ ತಮ್ತಾ ಅವರು ಧ್ವನಿ ಎತ್ತಿ, “ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಮರುಸ್ಥಾಪಿಸಲು” ಕಾಂಗ್ರೆಸ್ ಆಂದೋಲನವನ್ನು ಪ್ರಾರಂಭಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಕ್ರಿಯೆ ನೀಡಿ, “ಸುನೀತಾ ದೇವಿಯವರನ್ನು ಮರುಸೇರ್ಪಡೆ ಮಾಡದಿದ್ದರೆ, ನಮ್ಮ ಸಂಘಟನೆಯು ಉತ್ತರಾಖಂಡ್ ಮುಖ್ಯಮಂತ್ರಿ ಸಚಿವ ಪುಷ್ಕರ್ ಸಿಂಗ್ ಧಾಮಿಗೆ ಘೇರಾವ್ ಹಾಕಲಿದೆ” ಎಂದಿದ್ದರು.

ದೇವಿಯವರನ್ನು ಜನವರಿ 1 ರಂದು ಮರು ನೇಮಕ ಮಾಡಲಾಯಿತು. ಮಾರ್ಚ್‌ ತಿಂಗಳಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಅಡುಗೆ ಮಾಡಲು ದೇವಿ ಆರಂಭಿಸಿದರು.

ತಮ್ಮನ್ನು ವಜಾಗೊಳಿಸಿದ ನಂತರ ಉತ್ತರಾಖಂಡ ಪೊಲೀಸರಿಗೆ ದೇವಿ ದೂರು ನೀಡಿದ್ದರು. ದೇವಿಯವರಿಗೆ ಜಾತಿ ನಿಂದನೆ ಹಾಗೂ ಕ್ರಿಮಿನಲ್ ಬೆದರಿಕೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಲಿತ ಮಹಿಳೆಗೆ ಸರ್ಕಾರ ನೀಡಿರುವ ಪರಿಶುದ್ದತೆಯ ನಿರ್ವಹಣೆಯ ತರಪೇತಿ, ಅಡುಗೆ ತರಪೇತಿಯ ವಿವರಗಳನ್ನು ಮತ್ತು ಆಕೆ ತರಪೇತಿಯ ಕೊನೆಯಲ್ಲಿ ಜನರ ಆರೋಗ್ಯದ ಮತ್ತು ಯೋಗಕ್ಷೇಮದ ಬಗ್ಗೆ ತೆಗೆದುಕೊಂಡ ಪ್ರತಿಜ್ಞೆಯನ್ನು ಜನರಿಗೆ ಮತ್ತು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಅಲ್ಲದೆ ಈ ಸಮಸ್ಯೆಗೆ ಉತ್ತರಿಸಲಾಗದಿರುವ ಇನ್ನೂ ಹಲವಾರು ವಿಷಯಗಳಿವೆ. ಅದನ್ನು ಸರ್ಕಾರ ಒಂದು ನಿಯೋಗದ ಮುಖಾಂತರ ಅಧ್ಯಯನ ಮಾಡಿ ಜನರು ಕೇಳುವ ಮತ್ತು ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವ ಎಲ್ಲಾ ವಿಷಯಗಳಿಗೂ ಕೇವಲ ಮಾತಿನಲ್ಲಲ್ಲದೆ ಕಾರ್ಯತಹ: ಪರಿಹರಿಸುವ ಪ್ರಯತ್ನವನ್ನು ಮಾಡಬೇಕು. ಉದಾಹರಣೆಗೆ : ಒಬ್ಬ ಮ್ಯಾನ್‌ಹೋಲ್‌ ಕ್ಲೀನ್‌ ಮಾಡುವವನ ಹೆಂಡತಿ ಕುಕ್‌ ಆದರೆ ಪರಿಶುದ್ದತೆಯ ಬಗ್ಗೆ ಅನುಮಾನಗಳು ಸಹಜವಾಗಿರುತ್ತವೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...