Homeದಲಿತ್ ಫೈಲ್ಸ್ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ (ಅಡುಗೆ ಸಿಬ್ಬಂದಿ) ಸುನೀತಾ ದೇವಿ ಅವರು ತಯಾರಿಸಿದ ಬಿಸಿಯೂಟವನ್ನು ಸೇವಿಸಲು ಏಳರಿಂದ ಎಂಟು ವಿದ್ಯಾರ್ಥಿಗಳು ಮತ್ತೆ ನಿರಾಕರಿಸಿದ್ದಾರೆ.

ಡಿಸೆಂಬರ್‌ 2021ರಲ್ಲಿ ದಲಿತ ಮಹಿಳೆಯನ್ನು ವಜಾಗೊಳಿಸಿದಾಗ ವಿವಾದ ಸೃಷ್ಟಿಯಾಗಿತ್ತು. ದಲಿತ ವಿದ್ಯಾರ್ಥಿಗಳು ಸವರ್ಣೀಯರು ತಯಾರಿಸಿದ ಊಟವನ್ನು ಸೇವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ದಲಿತ ಮಹಿಳೆಯನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ‘ಈಗ ಮತ್ತೆ ವಿವಾದ ಶುರುವಾಗಿದೆ’ ಎಂದು ಶಾಲೆಯ ಪ್ರಾಂಶುಪಾಲರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ನಂತರ ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ನರೇಂದ್ರ ಸಿಂಗ್ ಭಂಡಾರಿ ಅವರು ಮೇ 20ರಂದು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿದ್ದಾರೆ. ಜೌಲ್‌ನಲ್ಲಿರುವ ಸ್ವತಂತ್ರ ಸಂಗ್ರಾಮ ಸೇನಾನಿ ದಿವಂಗತ ಶ್ರೀ ರಾಮಚಂದ್ರ ಸರ್ಕಾರಿ ಅಂತರ ಕಾಲೇಜಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಬೇಕು ಎಂದು ಸೂಚಿಸಿದ್ದಾರೆ.

“ಇಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌, ಕೆಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಭೆ ನಡೆಸಿದರು. ಊಟವನ್ನು ಬಹಿಷ್ಕರಿಸುವುದನ್ನು ನಿಲ್ಲಿಸುವಂತೆ ಮನವೊಲಿಸಲು ಪ್ರಯತ್ನಿಸಿದರು. ಅಧಿಕಾರಿಗಳೇ ಶಾಲೆಯಲ್ಲಿ ಊಟ ಮಾಡಿದರು. ಆದಾಗ್ಯೂ, ಈ 7-8 ವಿದ್ಯಾರ್ಥಿಗಳು ಊಟ ತಿನ್ನಲು ನಿರಾಕರಿಸಿದರು. ಅನ್ನವನ್ನು ತಿನ್ನುವುದಿಲ್ಲ ಎಂದು ಈ ವಿದ್ಯಾರ್ಥಿಗಳು ಹೇಳಿಕೊಂಡರು” ಎಂದು ಪ್ರಾಂಶುಪಾಲರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ..

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

ದಲಿತ ಮಹಿಳೆಯನ್ನು ವಜಾಗೊಳಿಸಿ ಮರುನೇಮಕ ಮಾಡಲಾಗಿದೆ. ಅದೇ ಶಾಲೆಯಲ್ಲಿ ಆರರಿಂದ ಎಂಟನೇ ತರಗತಿಗಳಲ್ಲಿ ಓದುತ್ತಿರುವ ಸವರ್ಣೀಯ ಸಮುದಾಯಕ್ಕೆ ಸೇರಿದ ಸುಮಾರು 43 ವಿದ್ಯಾರ್ಥಿಗಳು ದೇವಿ ಬೇಯಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದರು.

23 ಡಿಸೆಂಬರ್ 2021ರಂದು, ಚಂಪಾವತ್ ಶಿಕ್ಷಣ ಇಲಾಖೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದ್ದರು. ನೇಮಕಾತಿಯಲ್ಲಿನ ಕಾರ್ಯವಿಧಾನದಲ್ಲಿ ಲೋಪವಾಗಿದೆ ಎಂದು ಕಾರಣ ನೀಡಿದ್ದರು. ದಲಿತ ಮಹಿಳೆಯ ಬದಲಿಗೆ ಸವರ್ಣೀಯ ಜಾತಿಗೆ ಸೇರಿದವರನ್ನು ನೇಮಿಸಲಾಗಿತ್ತು. ಇದಕ್ಕೆ ಪ್ರತಿರೋಧವಾಗಿ ಶಾಲೆಯ 23 ದಲಿತ ವಿದ್ಯಾರ್ಥಿಗಳು ಸವರ್ಣೀಯ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ಸೇವಿಸಲು ನಿರಾಕರಿಸಿದರು.

ಇದನ್ನೂ ಓದಿರಿ: #RejectBrahminTextBooks ಟ್ವಿಟರ್‌ ಅಭಿಯಾನ ಇಂದು

ದೇವಿ ಅವರನ್ನು ವಜಾಗೊಳಿಸಿದ ನಂತರ, ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರದೀಪ್ ತಮ್ತಾ ಅವರು ಧ್ವನಿ ಎತ್ತಿ, “ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಮರುಸ್ಥಾಪಿಸಲು” ಕಾಂಗ್ರೆಸ್ ಆಂದೋಲನವನ್ನು ಪ್ರಾರಂಭಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಕ್ರಿಯೆ ನೀಡಿ, “ಸುನೀತಾ ದೇವಿಯವರನ್ನು ಮರುಸೇರ್ಪಡೆ ಮಾಡದಿದ್ದರೆ, ನಮ್ಮ ಸಂಘಟನೆಯು ಉತ್ತರಾಖಂಡ್ ಮುಖ್ಯಮಂತ್ರಿ ಸಚಿವ ಪುಷ್ಕರ್ ಸಿಂಗ್ ಧಾಮಿಗೆ ಘೇರಾವ್ ಹಾಕಲಿದೆ” ಎಂದಿದ್ದರು.

ದೇವಿಯವರನ್ನು ಜನವರಿ 1 ರಂದು ಮರು ನೇಮಕ ಮಾಡಲಾಯಿತು. ಮಾರ್ಚ್‌ ತಿಂಗಳಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಅಡುಗೆ ಮಾಡಲು ದೇವಿ ಆರಂಭಿಸಿದರು.

ತಮ್ಮನ್ನು ವಜಾಗೊಳಿಸಿದ ನಂತರ ಉತ್ತರಾಖಂಡ ಪೊಲೀಸರಿಗೆ ದೇವಿ ದೂರು ನೀಡಿದ್ದರು. ದೇವಿಯವರಿಗೆ ಜಾತಿ ನಿಂದನೆ ಹಾಗೂ ಕ್ರಿಮಿನಲ್ ಬೆದರಿಕೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಲಿತ ಮಹಿಳೆಗೆ ಸರ್ಕಾರ ನೀಡಿರುವ ಪರಿಶುದ್ದತೆಯ ನಿರ್ವಹಣೆಯ ತರಪೇತಿ, ಅಡುಗೆ ತರಪೇತಿಯ ವಿವರಗಳನ್ನು ಮತ್ತು ಆಕೆ ತರಪೇತಿಯ ಕೊನೆಯಲ್ಲಿ ಜನರ ಆರೋಗ್ಯದ ಮತ್ತು ಯೋಗಕ್ಷೇಮದ ಬಗ್ಗೆ ತೆಗೆದುಕೊಂಡ ಪ್ರತಿಜ್ಞೆಯನ್ನು ಜನರಿಗೆ ಮತ್ತು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಅಲ್ಲದೆ ಈ ಸಮಸ್ಯೆಗೆ ಉತ್ತರಿಸಲಾಗದಿರುವ ಇನ್ನೂ ಹಲವಾರು ವಿಷಯಗಳಿವೆ. ಅದನ್ನು ಸರ್ಕಾರ ಒಂದು ನಿಯೋಗದ ಮುಖಾಂತರ ಅಧ್ಯಯನ ಮಾಡಿ ಜನರು ಕೇಳುವ ಮತ್ತು ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವ ಎಲ್ಲಾ ವಿಷಯಗಳಿಗೂ ಕೇವಲ ಮಾತಿನಲ್ಲಲ್ಲದೆ ಕಾರ್ಯತಹ: ಪರಿಹರಿಸುವ ಪ್ರಯತ್ನವನ್ನು ಮಾಡಬೇಕು. ಉದಾಹರಣೆಗೆ : ಒಬ್ಬ ಮ್ಯಾನ್‌ಹೋಲ್‌ ಕ್ಲೀನ್‌ ಮಾಡುವವನ ಹೆಂಡತಿ ಕುಕ್‌ ಆದರೆ ಪರಿಶುದ್ದತೆಯ ಬಗ್ಗೆ ಅನುಮಾನಗಳು ಸಹಜವಾಗಿರುತ್ತವೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....