Homeದಲಿತ್ ಫೈಲ್ಸ್ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ (ಅಡುಗೆ ಸಿಬ್ಬಂದಿ) ಸುನೀತಾ ದೇವಿ ಅವರು ತಯಾರಿಸಿದ ಬಿಸಿಯೂಟವನ್ನು ಸೇವಿಸಲು ಏಳರಿಂದ ಎಂಟು ವಿದ್ಯಾರ್ಥಿಗಳು ಮತ್ತೆ ನಿರಾಕರಿಸಿದ್ದಾರೆ.

ಡಿಸೆಂಬರ್‌ 2021ರಲ್ಲಿ ದಲಿತ ಮಹಿಳೆಯನ್ನು ವಜಾಗೊಳಿಸಿದಾಗ ವಿವಾದ ಸೃಷ್ಟಿಯಾಗಿತ್ತು. ದಲಿತ ವಿದ್ಯಾರ್ಥಿಗಳು ಸವರ್ಣೀಯರು ತಯಾರಿಸಿದ ಊಟವನ್ನು ಸೇವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ದಲಿತ ಮಹಿಳೆಯನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ‘ಈಗ ಮತ್ತೆ ವಿವಾದ ಶುರುವಾಗಿದೆ’ ಎಂದು ಶಾಲೆಯ ಪ್ರಾಂಶುಪಾಲರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ನಂತರ ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ನರೇಂದ್ರ ಸಿಂಗ್ ಭಂಡಾರಿ ಅವರು ಮೇ 20ರಂದು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿದ್ದಾರೆ. ಜೌಲ್‌ನಲ್ಲಿರುವ ಸ್ವತಂತ್ರ ಸಂಗ್ರಾಮ ಸೇನಾನಿ ದಿವಂಗತ ಶ್ರೀ ರಾಮಚಂದ್ರ ಸರ್ಕಾರಿ ಅಂತರ ಕಾಲೇಜಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಬೇಕು ಎಂದು ಸೂಚಿಸಿದ್ದಾರೆ.

“ಇಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌, ಕೆಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಭೆ ನಡೆಸಿದರು. ಊಟವನ್ನು ಬಹಿಷ್ಕರಿಸುವುದನ್ನು ನಿಲ್ಲಿಸುವಂತೆ ಮನವೊಲಿಸಲು ಪ್ರಯತ್ನಿಸಿದರು. ಅಧಿಕಾರಿಗಳೇ ಶಾಲೆಯಲ್ಲಿ ಊಟ ಮಾಡಿದರು. ಆದಾಗ್ಯೂ, ಈ 7-8 ವಿದ್ಯಾರ್ಥಿಗಳು ಊಟ ತಿನ್ನಲು ನಿರಾಕರಿಸಿದರು. ಅನ್ನವನ್ನು ತಿನ್ನುವುದಿಲ್ಲ ಎಂದು ಈ ವಿದ್ಯಾರ್ಥಿಗಳು ಹೇಳಿಕೊಂಡರು” ಎಂದು ಪ್ರಾಂಶುಪಾಲರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ..

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

ದಲಿತ ಮಹಿಳೆಯನ್ನು ವಜಾಗೊಳಿಸಿ ಮರುನೇಮಕ ಮಾಡಲಾಗಿದೆ. ಅದೇ ಶಾಲೆಯಲ್ಲಿ ಆರರಿಂದ ಎಂಟನೇ ತರಗತಿಗಳಲ್ಲಿ ಓದುತ್ತಿರುವ ಸವರ್ಣೀಯ ಸಮುದಾಯಕ್ಕೆ ಸೇರಿದ ಸುಮಾರು 43 ವಿದ್ಯಾರ್ಥಿಗಳು ದೇವಿ ಬೇಯಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದರು.

23 ಡಿಸೆಂಬರ್ 2021ರಂದು, ಚಂಪಾವತ್ ಶಿಕ್ಷಣ ಇಲಾಖೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದ್ದರು. ನೇಮಕಾತಿಯಲ್ಲಿನ ಕಾರ್ಯವಿಧಾನದಲ್ಲಿ ಲೋಪವಾಗಿದೆ ಎಂದು ಕಾರಣ ನೀಡಿದ್ದರು. ದಲಿತ ಮಹಿಳೆಯ ಬದಲಿಗೆ ಸವರ್ಣೀಯ ಜಾತಿಗೆ ಸೇರಿದವರನ್ನು ನೇಮಿಸಲಾಗಿತ್ತು. ಇದಕ್ಕೆ ಪ್ರತಿರೋಧವಾಗಿ ಶಾಲೆಯ 23 ದಲಿತ ವಿದ್ಯಾರ್ಥಿಗಳು ಸವರ್ಣೀಯ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ಸೇವಿಸಲು ನಿರಾಕರಿಸಿದರು.

ಇದನ್ನೂ ಓದಿರಿ: #RejectBrahminTextBooks ಟ್ವಿಟರ್‌ ಅಭಿಯಾನ ಇಂದು

ದೇವಿ ಅವರನ್ನು ವಜಾಗೊಳಿಸಿದ ನಂತರ, ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರದೀಪ್ ತಮ್ತಾ ಅವರು ಧ್ವನಿ ಎತ್ತಿ, “ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಮರುಸ್ಥಾಪಿಸಲು” ಕಾಂಗ್ರೆಸ್ ಆಂದೋಲನವನ್ನು ಪ್ರಾರಂಭಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಕ್ರಿಯೆ ನೀಡಿ, “ಸುನೀತಾ ದೇವಿಯವರನ್ನು ಮರುಸೇರ್ಪಡೆ ಮಾಡದಿದ್ದರೆ, ನಮ್ಮ ಸಂಘಟನೆಯು ಉತ್ತರಾಖಂಡ್ ಮುಖ್ಯಮಂತ್ರಿ ಸಚಿವ ಪುಷ್ಕರ್ ಸಿಂಗ್ ಧಾಮಿಗೆ ಘೇರಾವ್ ಹಾಕಲಿದೆ” ಎಂದಿದ್ದರು.

ದೇವಿಯವರನ್ನು ಜನವರಿ 1 ರಂದು ಮರು ನೇಮಕ ಮಾಡಲಾಯಿತು. ಮಾರ್ಚ್‌ ತಿಂಗಳಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಅಡುಗೆ ಮಾಡಲು ದೇವಿ ಆರಂಭಿಸಿದರು.

ತಮ್ಮನ್ನು ವಜಾಗೊಳಿಸಿದ ನಂತರ ಉತ್ತರಾಖಂಡ ಪೊಲೀಸರಿಗೆ ದೇವಿ ದೂರು ನೀಡಿದ್ದರು. ದೇವಿಯವರಿಗೆ ಜಾತಿ ನಿಂದನೆ ಹಾಗೂ ಕ್ರಿಮಿನಲ್ ಬೆದರಿಕೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಲಿತ ಮಹಿಳೆಗೆ ಸರ್ಕಾರ ನೀಡಿರುವ ಪರಿಶುದ್ದತೆಯ ನಿರ್ವಹಣೆಯ ತರಪೇತಿ, ಅಡುಗೆ ತರಪೇತಿಯ ವಿವರಗಳನ್ನು ಮತ್ತು ಆಕೆ ತರಪೇತಿಯ ಕೊನೆಯಲ್ಲಿ ಜನರ ಆರೋಗ್ಯದ ಮತ್ತು ಯೋಗಕ್ಷೇಮದ ಬಗ್ಗೆ ತೆಗೆದುಕೊಂಡ ಪ್ರತಿಜ್ಞೆಯನ್ನು ಜನರಿಗೆ ಮತ್ತು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಅಲ್ಲದೆ ಈ ಸಮಸ್ಯೆಗೆ ಉತ್ತರಿಸಲಾಗದಿರುವ ಇನ್ನೂ ಹಲವಾರು ವಿಷಯಗಳಿವೆ. ಅದನ್ನು ಸರ್ಕಾರ ಒಂದು ನಿಯೋಗದ ಮುಖಾಂತರ ಅಧ್ಯಯನ ಮಾಡಿ ಜನರು ಕೇಳುವ ಮತ್ತು ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವ ಎಲ್ಲಾ ವಿಷಯಗಳಿಗೂ ಕೇವಲ ಮಾತಿನಲ್ಲಲ್ಲದೆ ಕಾರ್ಯತಹ: ಪರಿಹರಿಸುವ ಪ್ರಯತ್ನವನ್ನು ಮಾಡಬೇಕು. ಉದಾಹರಣೆಗೆ : ಒಬ್ಬ ಮ್ಯಾನ್‌ಹೋಲ್‌ ಕ್ಲೀನ್‌ ಮಾಡುವವನ ಹೆಂಡತಿ ಕುಕ್‌ ಆದರೆ ಪರಿಶುದ್ದತೆಯ ಬಗ್ಗೆ ಅನುಮಾನಗಳು ಸಹಜವಾಗಿರುತ್ತವೆ.

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...