Homeದಲಿತ್ ಫೈಲ್ಸ್ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ (ಅಡುಗೆ ಸಿಬ್ಬಂದಿ) ಸುನೀತಾ ದೇವಿ ಅವರು ತಯಾರಿಸಿದ ಬಿಸಿಯೂಟವನ್ನು ಸೇವಿಸಲು ಏಳರಿಂದ ಎಂಟು ವಿದ್ಯಾರ್ಥಿಗಳು ಮತ್ತೆ ನಿರಾಕರಿಸಿದ್ದಾರೆ.

ಡಿಸೆಂಬರ್‌ 2021ರಲ್ಲಿ ದಲಿತ ಮಹಿಳೆಯನ್ನು ವಜಾಗೊಳಿಸಿದಾಗ ವಿವಾದ ಸೃಷ್ಟಿಯಾಗಿತ್ತು. ದಲಿತ ವಿದ್ಯಾರ್ಥಿಗಳು ಸವರ್ಣೀಯರು ತಯಾರಿಸಿದ ಊಟವನ್ನು ಸೇವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ದಲಿತ ಮಹಿಳೆಯನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ‘ಈಗ ಮತ್ತೆ ವಿವಾದ ಶುರುವಾಗಿದೆ’ ಎಂದು ಶಾಲೆಯ ಪ್ರಾಂಶುಪಾಲರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ನಂತರ ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ನರೇಂದ್ರ ಸಿಂಗ್ ಭಂಡಾರಿ ಅವರು ಮೇ 20ರಂದು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿದ್ದಾರೆ. ಜೌಲ್‌ನಲ್ಲಿರುವ ಸ್ವತಂತ್ರ ಸಂಗ್ರಾಮ ಸೇನಾನಿ ದಿವಂಗತ ಶ್ರೀ ರಾಮಚಂದ್ರ ಸರ್ಕಾರಿ ಅಂತರ ಕಾಲೇಜಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಬೇಕು ಎಂದು ಸೂಚಿಸಿದ್ದಾರೆ.

“ಇಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌, ಕೆಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಭೆ ನಡೆಸಿದರು. ಊಟವನ್ನು ಬಹಿಷ್ಕರಿಸುವುದನ್ನು ನಿಲ್ಲಿಸುವಂತೆ ಮನವೊಲಿಸಲು ಪ್ರಯತ್ನಿಸಿದರು. ಅಧಿಕಾರಿಗಳೇ ಶಾಲೆಯಲ್ಲಿ ಊಟ ಮಾಡಿದರು. ಆದಾಗ್ಯೂ, ಈ 7-8 ವಿದ್ಯಾರ್ಥಿಗಳು ಊಟ ತಿನ್ನಲು ನಿರಾಕರಿಸಿದರು. ಅನ್ನವನ್ನು ತಿನ್ನುವುದಿಲ್ಲ ಎಂದು ಈ ವಿದ್ಯಾರ್ಥಿಗಳು ಹೇಳಿಕೊಂಡರು” ಎಂದು ಪ್ರಾಂಶುಪಾಲರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ..

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

ದಲಿತ ಮಹಿಳೆಯನ್ನು ವಜಾಗೊಳಿಸಿ ಮರುನೇಮಕ ಮಾಡಲಾಗಿದೆ. ಅದೇ ಶಾಲೆಯಲ್ಲಿ ಆರರಿಂದ ಎಂಟನೇ ತರಗತಿಗಳಲ್ಲಿ ಓದುತ್ತಿರುವ ಸವರ್ಣೀಯ ಸಮುದಾಯಕ್ಕೆ ಸೇರಿದ ಸುಮಾರು 43 ವಿದ್ಯಾರ್ಥಿಗಳು ದೇವಿ ಬೇಯಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದರು.

23 ಡಿಸೆಂಬರ್ 2021ರಂದು, ಚಂಪಾವತ್ ಶಿಕ್ಷಣ ಇಲಾಖೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದ್ದರು. ನೇಮಕಾತಿಯಲ್ಲಿನ ಕಾರ್ಯವಿಧಾನದಲ್ಲಿ ಲೋಪವಾಗಿದೆ ಎಂದು ಕಾರಣ ನೀಡಿದ್ದರು. ದಲಿತ ಮಹಿಳೆಯ ಬದಲಿಗೆ ಸವರ್ಣೀಯ ಜಾತಿಗೆ ಸೇರಿದವರನ್ನು ನೇಮಿಸಲಾಗಿತ್ತು. ಇದಕ್ಕೆ ಪ್ರತಿರೋಧವಾಗಿ ಶಾಲೆಯ 23 ದಲಿತ ವಿದ್ಯಾರ್ಥಿಗಳು ಸವರ್ಣೀಯ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ಸೇವಿಸಲು ನಿರಾಕರಿಸಿದರು.

ಇದನ್ನೂ ಓದಿರಿ: #RejectBrahminTextBooks ಟ್ವಿಟರ್‌ ಅಭಿಯಾನ ಇಂದು

ದೇವಿ ಅವರನ್ನು ವಜಾಗೊಳಿಸಿದ ನಂತರ, ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರದೀಪ್ ತಮ್ತಾ ಅವರು ಧ್ವನಿ ಎತ್ತಿ, “ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಮರುಸ್ಥಾಪಿಸಲು” ಕಾಂಗ್ರೆಸ್ ಆಂದೋಲನವನ್ನು ಪ್ರಾರಂಭಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಕ್ರಿಯೆ ನೀಡಿ, “ಸುನೀತಾ ದೇವಿಯವರನ್ನು ಮರುಸೇರ್ಪಡೆ ಮಾಡದಿದ್ದರೆ, ನಮ್ಮ ಸಂಘಟನೆಯು ಉತ್ತರಾಖಂಡ್ ಮುಖ್ಯಮಂತ್ರಿ ಸಚಿವ ಪುಷ್ಕರ್ ಸಿಂಗ್ ಧಾಮಿಗೆ ಘೇರಾವ್ ಹಾಕಲಿದೆ” ಎಂದಿದ್ದರು.

ದೇವಿಯವರನ್ನು ಜನವರಿ 1 ರಂದು ಮರು ನೇಮಕ ಮಾಡಲಾಯಿತು. ಮಾರ್ಚ್‌ ತಿಂಗಳಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಅಡುಗೆ ಮಾಡಲು ದೇವಿ ಆರಂಭಿಸಿದರು.

ತಮ್ಮನ್ನು ವಜಾಗೊಳಿಸಿದ ನಂತರ ಉತ್ತರಾಖಂಡ ಪೊಲೀಸರಿಗೆ ದೇವಿ ದೂರು ನೀಡಿದ್ದರು. ದೇವಿಯವರಿಗೆ ಜಾತಿ ನಿಂದನೆ ಹಾಗೂ ಕ್ರಿಮಿನಲ್ ಬೆದರಿಕೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಲಿತ ಮಹಿಳೆಗೆ ಸರ್ಕಾರ ನೀಡಿರುವ ಪರಿಶುದ್ದತೆಯ ನಿರ್ವಹಣೆಯ ತರಪೇತಿ, ಅಡುಗೆ ತರಪೇತಿಯ ವಿವರಗಳನ್ನು ಮತ್ತು ಆಕೆ ತರಪೇತಿಯ ಕೊನೆಯಲ್ಲಿ ಜನರ ಆರೋಗ್ಯದ ಮತ್ತು ಯೋಗಕ್ಷೇಮದ ಬಗ್ಗೆ ತೆಗೆದುಕೊಂಡ ಪ್ರತಿಜ್ಞೆಯನ್ನು ಜನರಿಗೆ ಮತ್ತು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಅಲ್ಲದೆ ಈ ಸಮಸ್ಯೆಗೆ ಉತ್ತರಿಸಲಾಗದಿರುವ ಇನ್ನೂ ಹಲವಾರು ವಿಷಯಗಳಿವೆ. ಅದನ್ನು ಸರ್ಕಾರ ಒಂದು ನಿಯೋಗದ ಮುಖಾಂತರ ಅಧ್ಯಯನ ಮಾಡಿ ಜನರು ಕೇಳುವ ಮತ್ತು ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವ ಎಲ್ಲಾ ವಿಷಯಗಳಿಗೂ ಕೇವಲ ಮಾತಿನಲ್ಲಲ್ಲದೆ ಕಾರ್ಯತಹ: ಪರಿಹರಿಸುವ ಪ್ರಯತ್ನವನ್ನು ಮಾಡಬೇಕು. ಉದಾಹರಣೆಗೆ : ಒಬ್ಬ ಮ್ಯಾನ್‌ಹೋಲ್‌ ಕ್ಲೀನ್‌ ಮಾಡುವವನ ಹೆಂಡತಿ ಕುಕ್‌ ಆದರೆ ಪರಿಶುದ್ದತೆಯ ಬಗ್ಗೆ ಅನುಮಾನಗಳು ಸಹಜವಾಗಿರುತ್ತವೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...