Homeದಲಿತ್ ಫೈಲ್ಸ್ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ (ಅಡುಗೆ ಸಿಬ್ಬಂದಿ) ಸುನೀತಾ ದೇವಿ ಅವರು ತಯಾರಿಸಿದ ಬಿಸಿಯೂಟವನ್ನು ಸೇವಿಸಲು ಏಳರಿಂದ ಎಂಟು ವಿದ್ಯಾರ್ಥಿಗಳು ಮತ್ತೆ ನಿರಾಕರಿಸಿದ್ದಾರೆ.

ಡಿಸೆಂಬರ್‌ 2021ರಲ್ಲಿ ದಲಿತ ಮಹಿಳೆಯನ್ನು ವಜಾಗೊಳಿಸಿದಾಗ ವಿವಾದ ಸೃಷ್ಟಿಯಾಗಿತ್ತು. ದಲಿತ ವಿದ್ಯಾರ್ಥಿಗಳು ಸವರ್ಣೀಯರು ತಯಾರಿಸಿದ ಊಟವನ್ನು ಸೇವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ದಲಿತ ಮಹಿಳೆಯನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ‘ಈಗ ಮತ್ತೆ ವಿವಾದ ಶುರುವಾಗಿದೆ’ ಎಂದು ಶಾಲೆಯ ಪ್ರಾಂಶುಪಾಲರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ನಂತರ ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ನರೇಂದ್ರ ಸಿಂಗ್ ಭಂಡಾರಿ ಅವರು ಮೇ 20ರಂದು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿದ್ದಾರೆ. ಜೌಲ್‌ನಲ್ಲಿರುವ ಸ್ವತಂತ್ರ ಸಂಗ್ರಾಮ ಸೇನಾನಿ ದಿವಂಗತ ಶ್ರೀ ರಾಮಚಂದ್ರ ಸರ್ಕಾರಿ ಅಂತರ ಕಾಲೇಜಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಬೇಕು ಎಂದು ಸೂಚಿಸಿದ್ದಾರೆ.

“ಇಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌, ಕೆಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಭೆ ನಡೆಸಿದರು. ಊಟವನ್ನು ಬಹಿಷ್ಕರಿಸುವುದನ್ನು ನಿಲ್ಲಿಸುವಂತೆ ಮನವೊಲಿಸಲು ಪ್ರಯತ್ನಿಸಿದರು. ಅಧಿಕಾರಿಗಳೇ ಶಾಲೆಯಲ್ಲಿ ಊಟ ಮಾಡಿದರು. ಆದಾಗ್ಯೂ, ಈ 7-8 ವಿದ್ಯಾರ್ಥಿಗಳು ಊಟ ತಿನ್ನಲು ನಿರಾಕರಿಸಿದರು. ಅನ್ನವನ್ನು ತಿನ್ನುವುದಿಲ್ಲ ಎಂದು ಈ ವಿದ್ಯಾರ್ಥಿಗಳು ಹೇಳಿಕೊಂಡರು” ಎಂದು ಪ್ರಾಂಶುಪಾಲರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ..

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

ದಲಿತ ಮಹಿಳೆಯನ್ನು ವಜಾಗೊಳಿಸಿ ಮರುನೇಮಕ ಮಾಡಲಾಗಿದೆ. ಅದೇ ಶಾಲೆಯಲ್ಲಿ ಆರರಿಂದ ಎಂಟನೇ ತರಗತಿಗಳಲ್ಲಿ ಓದುತ್ತಿರುವ ಸವರ್ಣೀಯ ಸಮುದಾಯಕ್ಕೆ ಸೇರಿದ ಸುಮಾರು 43 ವಿದ್ಯಾರ್ಥಿಗಳು ದೇವಿ ಬೇಯಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದರು.

23 ಡಿಸೆಂಬರ್ 2021ರಂದು, ಚಂಪಾವತ್ ಶಿಕ್ಷಣ ಇಲಾಖೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದ್ದರು. ನೇಮಕಾತಿಯಲ್ಲಿನ ಕಾರ್ಯವಿಧಾನದಲ್ಲಿ ಲೋಪವಾಗಿದೆ ಎಂದು ಕಾರಣ ನೀಡಿದ್ದರು. ದಲಿತ ಮಹಿಳೆಯ ಬದಲಿಗೆ ಸವರ್ಣೀಯ ಜಾತಿಗೆ ಸೇರಿದವರನ್ನು ನೇಮಿಸಲಾಗಿತ್ತು. ಇದಕ್ಕೆ ಪ್ರತಿರೋಧವಾಗಿ ಶಾಲೆಯ 23 ದಲಿತ ವಿದ್ಯಾರ್ಥಿಗಳು ಸವರ್ಣೀಯ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ಸೇವಿಸಲು ನಿರಾಕರಿಸಿದರು.

ಇದನ್ನೂ ಓದಿರಿ: #RejectBrahminTextBooks ಟ್ವಿಟರ್‌ ಅಭಿಯಾನ ಇಂದು

ದೇವಿ ಅವರನ್ನು ವಜಾಗೊಳಿಸಿದ ನಂತರ, ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರದೀಪ್ ತಮ್ತಾ ಅವರು ಧ್ವನಿ ಎತ್ತಿ, “ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಮರುಸ್ಥಾಪಿಸಲು” ಕಾಂಗ್ರೆಸ್ ಆಂದೋಲನವನ್ನು ಪ್ರಾರಂಭಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಕ್ರಿಯೆ ನೀಡಿ, “ಸುನೀತಾ ದೇವಿಯವರನ್ನು ಮರುಸೇರ್ಪಡೆ ಮಾಡದಿದ್ದರೆ, ನಮ್ಮ ಸಂಘಟನೆಯು ಉತ್ತರಾಖಂಡ್ ಮುಖ್ಯಮಂತ್ರಿ ಸಚಿವ ಪುಷ್ಕರ್ ಸಿಂಗ್ ಧಾಮಿಗೆ ಘೇರಾವ್ ಹಾಕಲಿದೆ” ಎಂದಿದ್ದರು.

ದೇವಿಯವರನ್ನು ಜನವರಿ 1 ರಂದು ಮರು ನೇಮಕ ಮಾಡಲಾಯಿತು. ಮಾರ್ಚ್‌ ತಿಂಗಳಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಅಡುಗೆ ಮಾಡಲು ದೇವಿ ಆರಂಭಿಸಿದರು.

ತಮ್ಮನ್ನು ವಜಾಗೊಳಿಸಿದ ನಂತರ ಉತ್ತರಾಖಂಡ ಪೊಲೀಸರಿಗೆ ದೇವಿ ದೂರು ನೀಡಿದ್ದರು. ದೇವಿಯವರಿಗೆ ಜಾತಿ ನಿಂದನೆ ಹಾಗೂ ಕ್ರಿಮಿನಲ್ ಬೆದರಿಕೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಲಿತ ಮಹಿಳೆಗೆ ಸರ್ಕಾರ ನೀಡಿರುವ ಪರಿಶುದ್ದತೆಯ ನಿರ್ವಹಣೆಯ ತರಪೇತಿ, ಅಡುಗೆ ತರಪೇತಿಯ ವಿವರಗಳನ್ನು ಮತ್ತು ಆಕೆ ತರಪೇತಿಯ ಕೊನೆಯಲ್ಲಿ ಜನರ ಆರೋಗ್ಯದ ಮತ್ತು ಯೋಗಕ್ಷೇಮದ ಬಗ್ಗೆ ತೆಗೆದುಕೊಂಡ ಪ್ರತಿಜ್ಞೆಯನ್ನು ಜನರಿಗೆ ಮತ್ತು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಅಲ್ಲದೆ ಈ ಸಮಸ್ಯೆಗೆ ಉತ್ತರಿಸಲಾಗದಿರುವ ಇನ್ನೂ ಹಲವಾರು ವಿಷಯಗಳಿವೆ. ಅದನ್ನು ಸರ್ಕಾರ ಒಂದು ನಿಯೋಗದ ಮುಖಾಂತರ ಅಧ್ಯಯನ ಮಾಡಿ ಜನರು ಕೇಳುವ ಮತ್ತು ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವ ಎಲ್ಲಾ ವಿಷಯಗಳಿಗೂ ಕೇವಲ ಮಾತಿನಲ್ಲಲ್ಲದೆ ಕಾರ್ಯತಹ: ಪರಿಹರಿಸುವ ಪ್ರಯತ್ನವನ್ನು ಮಾಡಬೇಕು. ಉದಾಹರಣೆಗೆ : ಒಬ್ಬ ಮ್ಯಾನ್‌ಹೋಲ್‌ ಕ್ಲೀನ್‌ ಮಾಡುವವನ ಹೆಂಡತಿ ಕುಕ್‌ ಆದರೆ ಪರಿಶುದ್ದತೆಯ ಬಗ್ಗೆ ಅನುಮಾನಗಳು ಸಹಜವಾಗಿರುತ್ತವೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...