Homeದಲಿತ್ ಫೈಲ್ಸ್ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ (ಅಡುಗೆ ಸಿಬ್ಬಂದಿ) ಸುನೀತಾ ದೇವಿ ಅವರು ತಯಾರಿಸಿದ ಬಿಸಿಯೂಟವನ್ನು ಸೇವಿಸಲು ಏಳರಿಂದ ಎಂಟು ವಿದ್ಯಾರ್ಥಿಗಳು ಮತ್ತೆ ನಿರಾಕರಿಸಿದ್ದಾರೆ.

ಡಿಸೆಂಬರ್‌ 2021ರಲ್ಲಿ ದಲಿತ ಮಹಿಳೆಯನ್ನು ವಜಾಗೊಳಿಸಿದಾಗ ವಿವಾದ ಸೃಷ್ಟಿಯಾಗಿತ್ತು. ದಲಿತ ವಿದ್ಯಾರ್ಥಿಗಳು ಸವರ್ಣೀಯರು ತಯಾರಿಸಿದ ಊಟವನ್ನು ಸೇವಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ದಲಿತ ಮಹಿಳೆಯನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ‘ಈಗ ಮತ್ತೆ ವಿವಾದ ಶುರುವಾಗಿದೆ’ ಎಂದು ಶಾಲೆಯ ಪ್ರಾಂಶುಪಾಲರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ನಂತರ ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ನರೇಂದ್ರ ಸಿಂಗ್ ಭಂಡಾರಿ ಅವರು ಮೇ 20ರಂದು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿದ್ದಾರೆ. ಜೌಲ್‌ನಲ್ಲಿರುವ ಸ್ವತಂತ್ರ ಸಂಗ್ರಾಮ ಸೇನಾನಿ ದಿವಂಗತ ಶ್ರೀ ರಾಮಚಂದ್ರ ಸರ್ಕಾರಿ ಅಂತರ ಕಾಲೇಜಿನ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಬೇಕು ಎಂದು ಸೂಚಿಸಿದ್ದಾರೆ.

“ಇಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌, ಕೆಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರೊಂದಿಗೆ ಸಭೆ ನಡೆಸಿದರು. ಊಟವನ್ನು ಬಹಿಷ್ಕರಿಸುವುದನ್ನು ನಿಲ್ಲಿಸುವಂತೆ ಮನವೊಲಿಸಲು ಪ್ರಯತ್ನಿಸಿದರು. ಅಧಿಕಾರಿಗಳೇ ಶಾಲೆಯಲ್ಲಿ ಊಟ ಮಾಡಿದರು. ಆದಾಗ್ಯೂ, ಈ 7-8 ವಿದ್ಯಾರ್ಥಿಗಳು ಊಟ ತಿನ್ನಲು ನಿರಾಕರಿಸಿದರು. ಅನ್ನವನ್ನು ತಿನ್ನುವುದಿಲ್ಲ ಎಂದು ಈ ವಿದ್ಯಾರ್ಥಿಗಳು ಹೇಳಿಕೊಂಡರು” ಎಂದು ಪ್ರಾಂಶುಪಾಲರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ..

ಊಟ ಬಹಿಷ್ಕರಿಸುವವರನ್ನು ಶಾಲೆಯಿಂದ ಹೊರಹಾಕಲಾಗುವುದು ಎಂದು ವಿದ್ಯಾರ್ಥಿಗಳ ಪೋಷಕರಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನರೇಂದ್ರ ಸಿಂಗ್ ಎಚ್ಚರಿಕೆಯನ್ನು ನೀಡಿದ್ದಾರೆ.

ದಲಿತ ಮಹಿಳೆಯನ್ನು ವಜಾಗೊಳಿಸಿ ಮರುನೇಮಕ ಮಾಡಲಾಗಿದೆ. ಅದೇ ಶಾಲೆಯಲ್ಲಿ ಆರರಿಂದ ಎಂಟನೇ ತರಗತಿಗಳಲ್ಲಿ ಓದುತ್ತಿರುವ ಸವರ್ಣೀಯ ಸಮುದಾಯಕ್ಕೆ ಸೇರಿದ ಸುಮಾರು 43 ವಿದ್ಯಾರ್ಥಿಗಳು ದೇವಿ ಬೇಯಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದ್ದರು.

23 ಡಿಸೆಂಬರ್ 2021ರಂದು, ಚಂಪಾವತ್ ಶಿಕ್ಷಣ ಇಲಾಖೆಯ ಅಧಿಕಾರಿಗಳು ದಲಿತ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದ್ದರು. ನೇಮಕಾತಿಯಲ್ಲಿನ ಕಾರ್ಯವಿಧಾನದಲ್ಲಿ ಲೋಪವಾಗಿದೆ ಎಂದು ಕಾರಣ ನೀಡಿದ್ದರು. ದಲಿತ ಮಹಿಳೆಯ ಬದಲಿಗೆ ಸವರ್ಣೀಯ ಜಾತಿಗೆ ಸೇರಿದವರನ್ನು ನೇಮಿಸಲಾಗಿತ್ತು. ಇದಕ್ಕೆ ಪ್ರತಿರೋಧವಾಗಿ ಶಾಲೆಯ 23 ದಲಿತ ವಿದ್ಯಾರ್ಥಿಗಳು ಸವರ್ಣೀಯ ಮಹಿಳೆ ತಯಾರಿಸಿದ ಮಧ್ಯಾಹ್ನದ ಊಟವನ್ನು ಸೇವಿಸಲು ನಿರಾಕರಿಸಿದರು.

ಇದನ್ನೂ ಓದಿರಿ: #RejectBrahminTextBooks ಟ್ವಿಟರ್‌ ಅಭಿಯಾನ ಇಂದು

ದೇವಿ ಅವರನ್ನು ವಜಾಗೊಳಿಸಿದ ನಂತರ, ಕಾಂಗ್ರೆಸ್ ರಾಜ್ಯಸಭಾ ಸಂಸದ ಪ್ರದೀಪ್ ತಮ್ತಾ ಅವರು ಧ್ವನಿ ಎತ್ತಿ, “ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಮರುಸ್ಥಾಪಿಸಲು” ಕಾಂಗ್ರೆಸ್ ಆಂದೋಲನವನ್ನು ಪ್ರಾರಂಭಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಪ್ರತಿಕ್ರಿಯೆ ನೀಡಿ, “ಸುನೀತಾ ದೇವಿಯವರನ್ನು ಮರುಸೇರ್ಪಡೆ ಮಾಡದಿದ್ದರೆ, ನಮ್ಮ ಸಂಘಟನೆಯು ಉತ್ತರಾಖಂಡ್ ಮುಖ್ಯಮಂತ್ರಿ ಸಚಿವ ಪುಷ್ಕರ್ ಸಿಂಗ್ ಧಾಮಿಗೆ ಘೇರಾವ್ ಹಾಕಲಿದೆ” ಎಂದಿದ್ದರು.

ದೇವಿಯವರನ್ನು ಜನವರಿ 1 ರಂದು ಮರು ನೇಮಕ ಮಾಡಲಾಯಿತು. ಮಾರ್ಚ್‌ ತಿಂಗಳಿನಿಂದ ಶಾಲೆಯಲ್ಲಿ ಮಧ್ಯಾಹ್ನದ ಅಡುಗೆ ಮಾಡಲು ದೇವಿ ಆರಂಭಿಸಿದರು.

ತಮ್ಮನ್ನು ವಜಾಗೊಳಿಸಿದ ನಂತರ ಉತ್ತರಾಖಂಡ ಪೊಲೀಸರಿಗೆ ದೇವಿ ದೂರು ನೀಡಿದ್ದರು. ದೇವಿಯವರಿಗೆ ಜಾತಿ ನಿಂದನೆ ಹಾಗೂ ಕ್ರಿಮಿನಲ್ ಬೆದರಿಕೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಲಿತ ಮಹಿಳೆಗೆ ಸರ್ಕಾರ ನೀಡಿರುವ ಪರಿಶುದ್ದತೆಯ ನಿರ್ವಹಣೆಯ ತರಪೇತಿ, ಅಡುಗೆ ತರಪೇತಿಯ ವಿವರಗಳನ್ನು ಮತ್ತು ಆಕೆ ತರಪೇತಿಯ ಕೊನೆಯಲ್ಲಿ ಜನರ ಆರೋಗ್ಯದ ಮತ್ತು ಯೋಗಕ್ಷೇಮದ ಬಗ್ಗೆ ತೆಗೆದುಕೊಂಡ ಪ್ರತಿಜ್ಞೆಯನ್ನು ಜನರಿಗೆ ಮತ್ತು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಅಲ್ಲದೆ ಈ ಸಮಸ್ಯೆಗೆ ಉತ್ತರಿಸಲಾಗದಿರುವ ಇನ್ನೂ ಹಲವಾರು ವಿಷಯಗಳಿವೆ. ಅದನ್ನು ಸರ್ಕಾರ ಒಂದು ನಿಯೋಗದ ಮುಖಾಂತರ ಅಧ್ಯಯನ ಮಾಡಿ ಜನರು ಕೇಳುವ ಮತ್ತು ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವ ಎಲ್ಲಾ ವಿಷಯಗಳಿಗೂ ಕೇವಲ ಮಾತಿನಲ್ಲಲ್ಲದೆ ಕಾರ್ಯತಹ: ಪರಿಹರಿಸುವ ಪ್ರಯತ್ನವನ್ನು ಮಾಡಬೇಕು. ಉದಾಹರಣೆಗೆ : ಒಬ್ಬ ಮ್ಯಾನ್‌ಹೋಲ್‌ ಕ್ಲೀನ್‌ ಮಾಡುವವನ ಹೆಂಡತಿ ಕುಕ್‌ ಆದರೆ ಪರಿಶುದ್ದತೆಯ ಬಗ್ಗೆ ಅನುಮಾನಗಳು ಸಹಜವಾಗಿರುತ್ತವೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...