Homeಕರ್ನಾಟಕಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

- Advertisement -
- Advertisement -

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕವಣದಾಲ ಗ್ರಾಮದಲ್ಲಿ ಪೂಜೆ ಮಾಡಿಸಲು ರಾಮಾಂಜನೇಯ ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಸವರ್ಣೀಯರು ಹೊರಗಡೆ ಕಳುಹಿಸಿದ ಆರೋಪ ಕೇಳಿ ಬಂದಿದೆ.

ಮೇ 10, ಶನಿವಾರ ಈ ಘಟನೆ ನಡೆದಿದೆ. ಗ್ರಾಮದ ಮಾದಿಗ ಸಮುದಾಯದ ಯುವಕ ಸ್ವಾಮಿನಾಥ ಎಂಬವರು ಪೂಜೆ ಮಾಡಿಸಲು ದೇವಾಲಯದ ಒಳಗೆ ಹೋಗಿದ್ದರು. ಅದನ್ನು ಕಂಡ ಸವರ್ಣೀಯರು ಅವರನ್ನು ಹೊರಗಡೆ ಬರುವಂತೆ ತಾಕೀತು ಮಾಡಿದ್ದಲ್ಲದೆ, ನೀನು ದೇವಾಲಯದ ಒಳಗೆ ಪ್ರವೇಶಿಸುವಂತಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದೇ ವಿಷಯವಾಗಿ ದೇವಾಲಯದ ಮುಂಭಾಗದಲ್ಲಿ ಯುವಕ ಮತ್ತು ಸವರ್ಣೀಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ ಯುವಕ “ನನಗೆ ದೇವಸ್ಥಾನದ ಒಳಗಡೆ ಹೋಗಿ ಪೂಜೆ ಮಾಡಲು ಅವಕಾಶ ಕೊಡಿ” ಎಂದು ಮನವಿ ಮಾಡುತ್ತಿರುವುದು ಮತ್ತು ಅದಕ್ಕೆ ಅಲ್ಲಿ ಗುಂಪು ಸೇರಿದ್ದ ಜನರು ವಿರೋಧ ವ್ಯಕ್ತಪಡಿಸಿ ವಾಗ್ವಾದ ನಡೆಸುತ್ತಿರುವುದನ್ನು ನೋಡಬಹುದು.

“ನನ್ನನ್ನು ಮಾತ್ರ ಗುರಿಯಾಗಿಸಿ ದೇವಸ್ಥಾನದಿಂದ ಹೊರಗಡೆ ಏಕೆ ಕರೆದ್ರಿ? ನಿಮ್ಮ ಜನರೆಲ್ಲ ಒಳಗೆ ಹೋಗುವಾಗ ನಾನೇಕೆ ಹೋಗಬಾರದು? ನಾನು ಈ ಊರಿನಲ್ಲೇ ಹುಟ್ಟಿ ಬೆಳೆದವ ಮತ್ತು ದೇವಸ್ಥಾನ ನಿರ್ಮಾಣಕ್ಕೆ ನಾನೂ ವಂತಿಗೆ ಕೊಟ್ಟಿದ್ದೇನೆ. ನೀವು ಮಾತ್ರ ಹೋಗಬೇಕು ನಾವು ದೇವಸ್ಥಾನದ ಒಳಗಡೆ ಹೋಗಬಾರದು ಎಂದರೆ, ಅಂಬೇಡ್ಕರ್ ಕೊಟ್ಟ ಸಂವಿಧಾನ, ಅದರಲ್ಲಿ ಹೇಳಿರುವ ಸಮಾನತೆಯ ತತ್ವಕ್ಕೆ ಬೆಲೆ ಇಲ್ವಾ? ಎಂದು ಯುವಕ ಪ್ರಶ್ನಿಸಿರುವುದು ಮತ್ತು “ಅನಾದಿ ಕಾಲದಿಂದಲೂ ನಿಮ್ಮ ಜಾತಿಯವರು (ಪರಿಶಿಷ್ಟ ಜಾತಿಯವರು) ಯಾರೂ ದೇಗುಲದ ಒಳಗಡೆ ಬಂದಿಲ್ಲ. ಈಗಲೂ ಬರುವುದು ಬೇಡ” ಎಂದು ಗುಂಪು ಸೇರಿದ ಜನರು ಹೇಳಿರುವುದು ವಿಡಿಯೋದಲ್ಲಿ ಇದೆ.

ಘಟನೆ ಕುರಿತು ಯುವಕ ಭಾನುವಾರ (ಮೇ.11) ಬಡವನಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬಳಿಕ ಗ್ರಾಮಸ್ಥರ ಒತ್ತಾಯದ ಮೇರೆಗೆ ದೂರು ವಾಪಸ್‌ ಪಡೆದು ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಸಮ್ಮುಖದಲ್ಲಿ ದೇವಾಲಯ ಪ್ರವೇಶ: 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ತುಮಕೂರು ಎಸ್ಪಿ, “ದೇವಾಲಯ ಪ್ರವೇಶಿಸಲು ಅವಕಾಶ ನೀಡದ ಬಗ್ಗೆ ಸ್ವಾಮಿನಾಥ ಅವರು ವಿಚಾರ ತಿಳಿಸಿದ್ದರು. ಈ ಹಿನ್ನೆಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗೋಪಾಲ್ ಅವರ ನೇತೃತ್ವದಲ್ಲಿ ಮಧುಗಿರಿ ಪೊಲೀಸ್ ಉಪಾಧೀಕ್ಷ, ಮಧುಗಿರಿ ತಾಲೂಕು ದಂಡಾಧಿಕಾರಿ, ಮಧುಗಿರಿ ವೃತ್ತ ನಿರೀಕ್ಷಕ, ಬಡವನಹಳ್ಳಿ ಪೊಲೀಸ್ ಸಬ್ ಇನ್ಸ್‌ಪೆಕ್ಟ‌ರ್ ಮತ್ತು ಸಿಬ್ಬಂದಿ ಕವಣದಾಲ ಗ್ರಾಮಕ್ಕೆ ಭೇಟಿ ನೀಡಿ ಕವಣದಾಲ ಹಾಗೂ ಸುತ್ತ ಮುತ್ತಲ ಗ್ರಾಮಸ್ಥರನ್ನು ಒಗ್ಗೂಡಿಸಿ ಶಾಂತಿ ಸಭೆ ಮಾಡಿ ಅಸ್ಪೃಶ್ಯತೆ ಆಚರಣೆ ಮಾಡದಂತೆ ಹಾಗೂ ಗ್ರಾಮದಲ್ಲಿ ಎಲ್ಲಾ ಜನಾಂಗದವರು ಅನೂನ್ಯವಾಗಿ ದೇವಸ್ಥಾನದ ಪೂಜಾ ಕೈoಕಾರ್ಯಗಳಲ್ಲಿ ಭಾಗವಹಿಸುವಂತೆ ತಿಳುವಳಿಕೆ ನೀಡಿದ್ದೇವೆ. ನಂತರ ಗ್ರಾಮದ ಎಲ್ಲಾ ಸಮುದಾಯದವರ ಸಮಕ್ಷಮ ನೊಂದ ಸ್ವಾಮಿನಾಥರವರಿಗೆ ಹಾಗೂ ಅವರ ಸಮುದಾಯದವರಿಗೆ ಶ್ರೀರಾಮಾಂಜನೇಯ ಸ್ವಾಮಿ ದೇವಸ್ಥಾನದ ಪ್ರವೇಶ ಮಾಡಿಸಿ ಪೂಜೆ ಮಾಡಿಸಿರುತ್ತೇವೆ” ಎಂದು ತಿಳಿಸಿದ್ದಾರೆ.

ಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...