Homeಕರ್ನಾಟಕಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

- Advertisement -
- Advertisement -

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕವಣದಾಲ ಗ್ರಾಮದಲ್ಲಿ ಪೂಜೆ ಮಾಡಿಸಲು ರಾಮಾಂಜನೇಯ ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಸವರ್ಣೀಯರು ಹೊರಗಡೆ ಕಳುಹಿಸಿದ ಆರೋಪ ಕೇಳಿ ಬಂದಿದೆ.

ಮೇ 10, ಶನಿವಾರ ಈ ಘಟನೆ ನಡೆದಿದೆ. ಗ್ರಾಮದ ಮಾದಿಗ ಸಮುದಾಯದ ಯುವಕ ಸ್ವಾಮಿನಾಥ ಎಂಬವರು ಪೂಜೆ ಮಾಡಿಸಲು ದೇವಾಲಯದ ಒಳಗೆ ಹೋಗಿದ್ದರು. ಅದನ್ನು ಕಂಡ ಸವರ್ಣೀಯರು ಅವರನ್ನು ಹೊರಗಡೆ ಬರುವಂತೆ ತಾಕೀತು ಮಾಡಿದ್ದಲ್ಲದೆ, ನೀನು ದೇವಾಲಯದ ಒಳಗೆ ಪ್ರವೇಶಿಸುವಂತಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದೇ ವಿಷಯವಾಗಿ ದೇವಾಲಯದ ಮುಂಭಾಗದಲ್ಲಿ ಯುವಕ ಮತ್ತು ಸವರ್ಣೀಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ ಯುವಕ “ನನಗೆ ದೇವಸ್ಥಾನದ ಒಳಗಡೆ ಹೋಗಿ ಪೂಜೆ ಮಾಡಲು ಅವಕಾಶ ಕೊಡಿ” ಎಂದು ಮನವಿ ಮಾಡುತ್ತಿರುವುದು ಮತ್ತು ಅದಕ್ಕೆ ಅಲ್ಲಿ ಗುಂಪು ಸೇರಿದ್ದ ಜನರು ವಿರೋಧ ವ್ಯಕ್ತಪಡಿಸಿ ವಾಗ್ವಾದ ನಡೆಸುತ್ತಿರುವುದನ್ನು ನೋಡಬಹುದು.

“ನನ್ನನ್ನು ಮಾತ್ರ ಗುರಿಯಾಗಿಸಿ ದೇವಸ್ಥಾನದಿಂದ ಹೊರಗಡೆ ಏಕೆ ಕರೆದ್ರಿ? ನಿಮ್ಮ ಜನರೆಲ್ಲ ಒಳಗೆ ಹೋಗುವಾಗ ನಾನೇಕೆ ಹೋಗಬಾರದು? ನಾನು ಈ ಊರಿನಲ್ಲೇ ಹುಟ್ಟಿ ಬೆಳೆದವ ಮತ್ತು ದೇವಸ್ಥಾನ ನಿರ್ಮಾಣಕ್ಕೆ ನಾನೂ ವಂತಿಗೆ ಕೊಟ್ಟಿದ್ದೇನೆ. ನೀವು ಮಾತ್ರ ಹೋಗಬೇಕು ನಾವು ದೇವಸ್ಥಾನದ ಒಳಗಡೆ ಹೋಗಬಾರದು ಎಂದರೆ, ಅಂಬೇಡ್ಕರ್ ಕೊಟ್ಟ ಸಂವಿಧಾನ, ಅದರಲ್ಲಿ ಹೇಳಿರುವ ಸಮಾನತೆಯ ತತ್ವಕ್ಕೆ ಬೆಲೆ ಇಲ್ವಾ? ಎಂದು ಯುವಕ ಪ್ರಶ್ನಿಸಿರುವುದು ಮತ್ತು “ಅನಾದಿ ಕಾಲದಿಂದಲೂ ನಿಮ್ಮ ಜಾತಿಯವರು (ಪರಿಶಿಷ್ಟ ಜಾತಿಯವರು) ಯಾರೂ ದೇಗುಲದ ಒಳಗಡೆ ಬಂದಿಲ್ಲ. ಈಗಲೂ ಬರುವುದು ಬೇಡ” ಎಂದು ಗುಂಪು ಸೇರಿದ ಜನರು ಹೇಳಿರುವುದು ವಿಡಿಯೋದಲ್ಲಿ ಇದೆ.

ಘಟನೆ ಕುರಿತು ಯುವಕ ಭಾನುವಾರ (ಮೇ.11) ಬಡವನಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬಳಿಕ ಗ್ರಾಮಸ್ಥರ ಒತ್ತಾಯದ ಮೇರೆಗೆ ದೂರು ವಾಪಸ್‌ ಪಡೆದು ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಸಮ್ಮುಖದಲ್ಲಿ ದೇವಾಲಯ ಪ್ರವೇಶ: 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ತುಮಕೂರು ಎಸ್ಪಿ, “ದೇವಾಲಯ ಪ್ರವೇಶಿಸಲು ಅವಕಾಶ ನೀಡದ ಬಗ್ಗೆ ಸ್ವಾಮಿನಾಥ ಅವರು ವಿಚಾರ ತಿಳಿಸಿದ್ದರು. ಈ ಹಿನ್ನೆಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗೋಪಾಲ್ ಅವರ ನೇತೃತ್ವದಲ್ಲಿ ಮಧುಗಿರಿ ಪೊಲೀಸ್ ಉಪಾಧೀಕ್ಷ, ಮಧುಗಿರಿ ತಾಲೂಕು ದಂಡಾಧಿಕಾರಿ, ಮಧುಗಿರಿ ವೃತ್ತ ನಿರೀಕ್ಷಕ, ಬಡವನಹಳ್ಳಿ ಪೊಲೀಸ್ ಸಬ್ ಇನ್ಸ್‌ಪೆಕ್ಟ‌ರ್ ಮತ್ತು ಸಿಬ್ಬಂದಿ ಕವಣದಾಲ ಗ್ರಾಮಕ್ಕೆ ಭೇಟಿ ನೀಡಿ ಕವಣದಾಲ ಹಾಗೂ ಸುತ್ತ ಮುತ್ತಲ ಗ್ರಾಮಸ್ಥರನ್ನು ಒಗ್ಗೂಡಿಸಿ ಶಾಂತಿ ಸಭೆ ಮಾಡಿ ಅಸ್ಪೃಶ್ಯತೆ ಆಚರಣೆ ಮಾಡದಂತೆ ಹಾಗೂ ಗ್ರಾಮದಲ್ಲಿ ಎಲ್ಲಾ ಜನಾಂಗದವರು ಅನೂನ್ಯವಾಗಿ ದೇವಸ್ಥಾನದ ಪೂಜಾ ಕೈoಕಾರ್ಯಗಳಲ್ಲಿ ಭಾಗವಹಿಸುವಂತೆ ತಿಳುವಳಿಕೆ ನೀಡಿದ್ದೇವೆ. ನಂತರ ಗ್ರಾಮದ ಎಲ್ಲಾ ಸಮುದಾಯದವರ ಸಮಕ್ಷಮ ನೊಂದ ಸ್ವಾಮಿನಾಥರವರಿಗೆ ಹಾಗೂ ಅವರ ಸಮುದಾಯದವರಿಗೆ ಶ್ರೀರಾಮಾಂಜನೇಯ ಸ್ವಾಮಿ ದೇವಸ್ಥಾನದ ಪ್ರವೇಶ ಮಾಡಿಸಿ ಪೂಜೆ ಮಾಡಿಸಿರುತ್ತೇವೆ” ಎಂದು ತಿಳಿಸಿದ್ದಾರೆ.

ಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...