Homeಕರ್ನಾಟಕಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

- Advertisement -
- Advertisement -

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕವಣದಾಲ ಗ್ರಾಮದಲ್ಲಿ ಪೂಜೆ ಮಾಡಿಸಲು ರಾಮಾಂಜನೇಯ ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಸವರ್ಣೀಯರು ಹೊರಗಡೆ ಕಳುಹಿಸಿದ ಆರೋಪ ಕೇಳಿ ಬಂದಿದೆ.

ಮೇ 10, ಶನಿವಾರ ಈ ಘಟನೆ ನಡೆದಿದೆ. ಗ್ರಾಮದ ಮಾದಿಗ ಸಮುದಾಯದ ಯುವಕ ಸ್ವಾಮಿನಾಥ ಎಂಬವರು ಪೂಜೆ ಮಾಡಿಸಲು ದೇವಾಲಯದ ಒಳಗೆ ಹೋಗಿದ್ದರು. ಅದನ್ನು ಕಂಡ ಸವರ್ಣೀಯರು ಅವರನ್ನು ಹೊರಗಡೆ ಬರುವಂತೆ ತಾಕೀತು ಮಾಡಿದ್ದಲ್ಲದೆ, ನೀನು ದೇವಾಲಯದ ಒಳಗೆ ಪ್ರವೇಶಿಸುವಂತಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದೇ ವಿಷಯವಾಗಿ ದೇವಾಲಯದ ಮುಂಭಾಗದಲ್ಲಿ ಯುವಕ ಮತ್ತು ಸವರ್ಣೀಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ ಯುವಕ “ನನಗೆ ದೇವಸ್ಥಾನದ ಒಳಗಡೆ ಹೋಗಿ ಪೂಜೆ ಮಾಡಲು ಅವಕಾಶ ಕೊಡಿ” ಎಂದು ಮನವಿ ಮಾಡುತ್ತಿರುವುದು ಮತ್ತು ಅದಕ್ಕೆ ಅಲ್ಲಿ ಗುಂಪು ಸೇರಿದ್ದ ಜನರು ವಿರೋಧ ವ್ಯಕ್ತಪಡಿಸಿ ವಾಗ್ವಾದ ನಡೆಸುತ್ತಿರುವುದನ್ನು ನೋಡಬಹುದು.

“ನನ್ನನ್ನು ಮಾತ್ರ ಗುರಿಯಾಗಿಸಿ ದೇವಸ್ಥಾನದಿಂದ ಹೊರಗಡೆ ಏಕೆ ಕರೆದ್ರಿ? ನಿಮ್ಮ ಜನರೆಲ್ಲ ಒಳಗೆ ಹೋಗುವಾಗ ನಾನೇಕೆ ಹೋಗಬಾರದು? ನಾನು ಈ ಊರಿನಲ್ಲೇ ಹುಟ್ಟಿ ಬೆಳೆದವ ಮತ್ತು ದೇವಸ್ಥಾನ ನಿರ್ಮಾಣಕ್ಕೆ ನಾನೂ ವಂತಿಗೆ ಕೊಟ್ಟಿದ್ದೇನೆ. ನೀವು ಮಾತ್ರ ಹೋಗಬೇಕು ನಾವು ದೇವಸ್ಥಾನದ ಒಳಗಡೆ ಹೋಗಬಾರದು ಎಂದರೆ, ಅಂಬೇಡ್ಕರ್ ಕೊಟ್ಟ ಸಂವಿಧಾನ, ಅದರಲ್ಲಿ ಹೇಳಿರುವ ಸಮಾನತೆಯ ತತ್ವಕ್ಕೆ ಬೆಲೆ ಇಲ್ವಾ? ಎಂದು ಯುವಕ ಪ್ರಶ್ನಿಸಿರುವುದು ಮತ್ತು “ಅನಾದಿ ಕಾಲದಿಂದಲೂ ನಿಮ್ಮ ಜಾತಿಯವರು (ಪರಿಶಿಷ್ಟ ಜಾತಿಯವರು) ಯಾರೂ ದೇಗುಲದ ಒಳಗಡೆ ಬಂದಿಲ್ಲ. ಈಗಲೂ ಬರುವುದು ಬೇಡ” ಎಂದು ಗುಂಪು ಸೇರಿದ ಜನರು ಹೇಳಿರುವುದು ವಿಡಿಯೋದಲ್ಲಿ ಇದೆ.

ಘಟನೆ ಕುರಿತು ಯುವಕ ಭಾನುವಾರ (ಮೇ.11) ಬಡವನಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬಳಿಕ ಗ್ರಾಮಸ್ಥರ ಒತ್ತಾಯದ ಮೇರೆಗೆ ದೂರು ವಾಪಸ್‌ ಪಡೆದು ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಸಮ್ಮುಖದಲ್ಲಿ ದೇವಾಲಯ ಪ್ರವೇಶ: 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ತುಮಕೂರು ಎಸ್ಪಿ, “ದೇವಾಲಯ ಪ್ರವೇಶಿಸಲು ಅವಕಾಶ ನೀಡದ ಬಗ್ಗೆ ಸ್ವಾಮಿನಾಥ ಅವರು ವಿಚಾರ ತಿಳಿಸಿದ್ದರು. ಈ ಹಿನ್ನೆಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗೋಪಾಲ್ ಅವರ ನೇತೃತ್ವದಲ್ಲಿ ಮಧುಗಿರಿ ಪೊಲೀಸ್ ಉಪಾಧೀಕ್ಷ, ಮಧುಗಿರಿ ತಾಲೂಕು ದಂಡಾಧಿಕಾರಿ, ಮಧುಗಿರಿ ವೃತ್ತ ನಿರೀಕ್ಷಕ, ಬಡವನಹಳ್ಳಿ ಪೊಲೀಸ್ ಸಬ್ ಇನ್ಸ್‌ಪೆಕ್ಟ‌ರ್ ಮತ್ತು ಸಿಬ್ಬಂದಿ ಕವಣದಾಲ ಗ್ರಾಮಕ್ಕೆ ಭೇಟಿ ನೀಡಿ ಕವಣದಾಲ ಹಾಗೂ ಸುತ್ತ ಮುತ್ತಲ ಗ್ರಾಮಸ್ಥರನ್ನು ಒಗ್ಗೂಡಿಸಿ ಶಾಂತಿ ಸಭೆ ಮಾಡಿ ಅಸ್ಪೃಶ್ಯತೆ ಆಚರಣೆ ಮಾಡದಂತೆ ಹಾಗೂ ಗ್ರಾಮದಲ್ಲಿ ಎಲ್ಲಾ ಜನಾಂಗದವರು ಅನೂನ್ಯವಾಗಿ ದೇವಸ್ಥಾನದ ಪೂಜಾ ಕೈoಕಾರ್ಯಗಳಲ್ಲಿ ಭಾಗವಹಿಸುವಂತೆ ತಿಳುವಳಿಕೆ ನೀಡಿದ್ದೇವೆ. ನಂತರ ಗ್ರಾಮದ ಎಲ್ಲಾ ಸಮುದಾಯದವರ ಸಮಕ್ಷಮ ನೊಂದ ಸ್ವಾಮಿನಾಥರವರಿಗೆ ಹಾಗೂ ಅವರ ಸಮುದಾಯದವರಿಗೆ ಶ್ರೀರಾಮಾಂಜನೇಯ ಸ್ವಾಮಿ ದೇವಸ್ಥಾನದ ಪ್ರವೇಶ ಮಾಡಿಸಿ ಪೂಜೆ ಮಾಡಿಸಿರುತ್ತೇವೆ” ಎಂದು ತಿಳಿಸಿದ್ದಾರೆ.

ಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...