Homeಕರ್ನಾಟಕಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

- Advertisement -
- Advertisement -

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕವಣದಾಲ ಗ್ರಾಮದಲ್ಲಿ ಪೂಜೆ ಮಾಡಿಸಲು ರಾಮಾಂಜನೇಯ ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಸವರ್ಣೀಯರು ಹೊರಗಡೆ ಕಳುಹಿಸಿದ ಆರೋಪ ಕೇಳಿ ಬಂದಿದೆ.

ಮೇ 10, ಶನಿವಾರ ಈ ಘಟನೆ ನಡೆದಿದೆ. ಗ್ರಾಮದ ಮಾದಿಗ ಸಮುದಾಯದ ಯುವಕ ಸ್ವಾಮಿನಾಥ ಎಂಬವರು ಪೂಜೆ ಮಾಡಿಸಲು ದೇವಾಲಯದ ಒಳಗೆ ಹೋಗಿದ್ದರು. ಅದನ್ನು ಕಂಡ ಸವರ್ಣೀಯರು ಅವರನ್ನು ಹೊರಗಡೆ ಬರುವಂತೆ ತಾಕೀತು ಮಾಡಿದ್ದಲ್ಲದೆ, ನೀನು ದೇವಾಲಯದ ಒಳಗೆ ಪ್ರವೇಶಿಸುವಂತಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದೇ ವಿಷಯವಾಗಿ ದೇವಾಲಯದ ಮುಂಭಾಗದಲ್ಲಿ ಯುವಕ ಮತ್ತು ಸವರ್ಣೀಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ ಯುವಕ “ನನಗೆ ದೇವಸ್ಥಾನದ ಒಳಗಡೆ ಹೋಗಿ ಪೂಜೆ ಮಾಡಲು ಅವಕಾಶ ಕೊಡಿ” ಎಂದು ಮನವಿ ಮಾಡುತ್ತಿರುವುದು ಮತ್ತು ಅದಕ್ಕೆ ಅಲ್ಲಿ ಗುಂಪು ಸೇರಿದ್ದ ಜನರು ವಿರೋಧ ವ್ಯಕ್ತಪಡಿಸಿ ವಾಗ್ವಾದ ನಡೆಸುತ್ತಿರುವುದನ್ನು ನೋಡಬಹುದು.

“ನನ್ನನ್ನು ಮಾತ್ರ ಗುರಿಯಾಗಿಸಿ ದೇವಸ್ಥಾನದಿಂದ ಹೊರಗಡೆ ಏಕೆ ಕರೆದ್ರಿ? ನಿಮ್ಮ ಜನರೆಲ್ಲ ಒಳಗೆ ಹೋಗುವಾಗ ನಾನೇಕೆ ಹೋಗಬಾರದು? ನಾನು ಈ ಊರಿನಲ್ಲೇ ಹುಟ್ಟಿ ಬೆಳೆದವ ಮತ್ತು ದೇವಸ್ಥಾನ ನಿರ್ಮಾಣಕ್ಕೆ ನಾನೂ ವಂತಿಗೆ ಕೊಟ್ಟಿದ್ದೇನೆ. ನೀವು ಮಾತ್ರ ಹೋಗಬೇಕು ನಾವು ದೇವಸ್ಥಾನದ ಒಳಗಡೆ ಹೋಗಬಾರದು ಎಂದರೆ, ಅಂಬೇಡ್ಕರ್ ಕೊಟ್ಟ ಸಂವಿಧಾನ, ಅದರಲ್ಲಿ ಹೇಳಿರುವ ಸಮಾನತೆಯ ತತ್ವಕ್ಕೆ ಬೆಲೆ ಇಲ್ವಾ? ಎಂದು ಯುವಕ ಪ್ರಶ್ನಿಸಿರುವುದು ಮತ್ತು “ಅನಾದಿ ಕಾಲದಿಂದಲೂ ನಿಮ್ಮ ಜಾತಿಯವರು (ಪರಿಶಿಷ್ಟ ಜಾತಿಯವರು) ಯಾರೂ ದೇಗುಲದ ಒಳಗಡೆ ಬಂದಿಲ್ಲ. ಈಗಲೂ ಬರುವುದು ಬೇಡ” ಎಂದು ಗುಂಪು ಸೇರಿದ ಜನರು ಹೇಳಿರುವುದು ವಿಡಿಯೋದಲ್ಲಿ ಇದೆ.

ಘಟನೆ ಕುರಿತು ಯುವಕ ಭಾನುವಾರ (ಮೇ.11) ಬಡವನಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬಳಿಕ ಗ್ರಾಮಸ್ಥರ ಒತ್ತಾಯದ ಮೇರೆಗೆ ದೂರು ವಾಪಸ್‌ ಪಡೆದು ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಸಮ್ಮುಖದಲ್ಲಿ ದೇವಾಲಯ ಪ್ರವೇಶ: 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ತುಮಕೂರು ಎಸ್ಪಿ, “ದೇವಾಲಯ ಪ್ರವೇಶಿಸಲು ಅವಕಾಶ ನೀಡದ ಬಗ್ಗೆ ಸ್ವಾಮಿನಾಥ ಅವರು ವಿಚಾರ ತಿಳಿಸಿದ್ದರು. ಈ ಹಿನ್ನೆಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗೋಪಾಲ್ ಅವರ ನೇತೃತ್ವದಲ್ಲಿ ಮಧುಗಿರಿ ಪೊಲೀಸ್ ಉಪಾಧೀಕ್ಷ, ಮಧುಗಿರಿ ತಾಲೂಕು ದಂಡಾಧಿಕಾರಿ, ಮಧುಗಿರಿ ವೃತ್ತ ನಿರೀಕ್ಷಕ, ಬಡವನಹಳ್ಳಿ ಪೊಲೀಸ್ ಸಬ್ ಇನ್ಸ್‌ಪೆಕ್ಟ‌ರ್ ಮತ್ತು ಸಿಬ್ಬಂದಿ ಕವಣದಾಲ ಗ್ರಾಮಕ್ಕೆ ಭೇಟಿ ನೀಡಿ ಕವಣದಾಲ ಹಾಗೂ ಸುತ್ತ ಮುತ್ತಲ ಗ್ರಾಮಸ್ಥರನ್ನು ಒಗ್ಗೂಡಿಸಿ ಶಾಂತಿ ಸಭೆ ಮಾಡಿ ಅಸ್ಪೃಶ್ಯತೆ ಆಚರಣೆ ಮಾಡದಂತೆ ಹಾಗೂ ಗ್ರಾಮದಲ್ಲಿ ಎಲ್ಲಾ ಜನಾಂಗದವರು ಅನೂನ್ಯವಾಗಿ ದೇವಸ್ಥಾನದ ಪೂಜಾ ಕೈoಕಾರ್ಯಗಳಲ್ಲಿ ಭಾಗವಹಿಸುವಂತೆ ತಿಳುವಳಿಕೆ ನೀಡಿದ್ದೇವೆ. ನಂತರ ಗ್ರಾಮದ ಎಲ್ಲಾ ಸಮುದಾಯದವರ ಸಮಕ್ಷಮ ನೊಂದ ಸ್ವಾಮಿನಾಥರವರಿಗೆ ಹಾಗೂ ಅವರ ಸಮುದಾಯದವರಿಗೆ ಶ್ರೀರಾಮಾಂಜನೇಯ ಸ್ವಾಮಿ ದೇವಸ್ಥಾನದ ಪ್ರವೇಶ ಮಾಡಿಸಿ ಪೂಜೆ ಮಾಡಿಸಿರುತ್ತೇವೆ” ಎಂದು ತಿಳಿಸಿದ್ದಾರೆ.

ಮೇ 20 ಸಾರ್ವತ್ರಿಕ ಮುಷ್ಕರ | ಬೀದಿಗಿಳಿಯಲಿರುವ ರಾಜ್ಯದ ಲಕ್ಷಾಂತರ ರೈತ, ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...