ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕವಣದಾಲ ಗ್ರಾಮದಲ್ಲಿ ಪೂಜೆ ಮಾಡಿಸಲು ರಾಮಾಂಜನೇಯ ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಸವರ್ಣೀಯರು ಹೊರಗಡೆ ಕಳುಹಿಸಿದ ಆರೋಪ ಕೇಳಿ ಬಂದಿದೆ. ಮೇ 10, ಶನಿವಾರ ಈ ಘಟನೆ ನಡೆದಿದೆ. ಗ್ರಾಮದ ಮಾದಿಗ ಸಮುದಾಯದ ಯುವಕ ಸ್ವಾಮಿನಾಥ ಎಂಬವರು ಪೂಜೆ ಮಾಡಿಸಲು ದೇವಾಲಯದ ಒಳಗೆ ಹೋಗಿದ್ದರು. ಅದನ್ನು ಕಂಡ ಸವರ್ಣೀಯರು ಅವರನ್ನು ಹೊರಗಡೆ ಬರುವಂತೆ ತಾಕೀತು ಮಾಡಿದ್ದಲ್ಲದೆ, ನೀನು ದೇವಾಲಯದ ಒಳಗೆ ಪ್ರವೇಶಿಸುವಂತಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಇದೇ ವಿಷಯವಾಗಿ ದೇವಾಲಯದ … Continue reading ಮಧುಗಿರಿ| ದೇವಾಲಯ ಪ್ರವೇಶಿಸಿದ ದಲಿತ ಯುವಕನನ್ನು ಹೊರಗಡೆ ಕಳುಹಿಸಿದ ಸವರ್ಣೀಯರು