Homeದಲಿತ್ ಫೈಲ್ಸ್ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

- Advertisement -
- Advertisement -

ಪುಣೆಯಲ್ಲಿ ನಾನು ಅಧ್ಯಯನ ಮಾಡಿದ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡಿದ್ದೇನೆ ಎಂದು ದಲಿತ ಯುವಕನೋರ್ವ ಆರೋಪಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ದಲಿತ ಯುವಕ ಪ್ರೇಮ್ ಬಿರ್ಹಾಡೆ, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್‌ ಕಾಲೇಜಿನ ಕಾರಣದಿಂದಾಗಿ ನಾನು ನನ್ನ ಕೆಲಸವನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

“ನಾನು ಕಾಲೇಜಿನಲ್ಲಿ ಓದಿರುವ ಬಗ್ಗೆ ಕಂಪನಿ ದೃಢೀಕರಣ ಕೇಳಿತ್ತು. ಆದರೆ, ಕಾಲೇಜಿನವರು ಪ್ರತಿಕ್ರಿಯಿಸಿಲ್ಲ. ಕಾರಣ ಅವರಿಗೆ ನಾವು ಜೀವನದಲ್ಲಿ ಮುಂದೆ ಬರುವುದು ಇಷ್ಟ ಇಲ್ಲ. ಇದು ನನ್ನ, ನನ್ನ ಕುಟುಂಬದ, ನನ್ನ ಸಮುದಾಯದ ಹೋರಾಟ” ಎಂದು ಪ್ರೇಮ್ ಬಿರ್ಹಾಡೆ ಅಳಲು ತೋಡಿಕೊಂಡಿದ್ದಾರೆ.

ಕಾಲೇಜು ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಅಕ್ಟೋಬರ್ 14ರಂದು ನೀಡಿದ ಪ್ರಮಾಣಪತ್ರದ ಪ್ರತಿಯನ್ನು ಹಂಚಿಕೊಂಡಿದೆ. ಕಾಲೇಜು ಅಥವಾ ಯಾವುದೇ ಸಿಬ್ಬಂದಿಗಳು ಅವರ ಜಾತಿ ಬಗ್ಗೆ ಚರ್ಚಿಸಿಲ್ಲ. ಎಜ್ಯುಕೇಶನ್ ರೆಫೆರೆನ್ಸ್ ನೀಡದಿರುವುದು ಸಂಸ್ಥೆಯ ನಿಯಮಗಳು ಮತ್ತು ಶಿಸ್ತಿನ ಕಾರಣದಿಂದಾಗಿ ಎಂದು ತಿಳಿಸಿದೆ.

ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ) ಈ ಕುರಿತು ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿದೆ.

ವಿಬಿಎ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಶುಕ್ರವಾರ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್ ಕಾಲೇಜು ದಲಿತ ಯುವಕನೋರ್ವನ ಶೈಕ್ಷಣಿಕ ವಿದ್ಯಾರ್ಹತೆಗಳನ್ನು ದೃಢಪಡಿಸಲು ನಿರಾಕರಿಸಿದ್ದರಿಂದ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶವನ್ನು ಕಳೆದುಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.

ಕಂಪನಿ ಕಳಿಸಿದ್ದ ಈ ಮೇಲ್‌ಗೆ ಪ್ರತಿಕ್ರಿಯಿಸಲು ಕಾಲೇಜಿನವರು ತಡ ಮಾಡಿದ್ದು ಏಕೆ? ಏಕೆಂದೆ, ಪ್ರೇಮ್ ಬಿರ್ಹಾಡೆ ಓರ್ವ ದಲಿತ ಯುವಕ ಎಂದು ಹೇಳಿದ್ದಾರೆ.

ಕಾಲೇಜಿನ ಕಾರಣಕ್ಕೆ ಕೆಲಸದ ಅವಕಾಶ ಕಳೆದುಕೊಂಡ ಹಿನ್ನೆಲೆ ಬಿರ್ಹಾಡೆ ಅವರ ಕುಟುಂಬವು ಕಾಲೇಜಿನ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಉದ್ದೇಶಿಸಿದೆ ಎಂದು ವಿಬಿಎ ನಾಯಕರು ಹೇಳಿದ್ದಾರೆ. ಈ ನಡುವೆ ಮಹಿಳಾ ಶಿಕ್ಷಕರನ್ನು ನಿಂದಿಸಿದ್ದಕ್ಕಾಗಿ ಯುವಕನ ವಿರುದ್ಧ ದೂರು ನೀಡಿರುವುದಾಗಿ ಕಾಲೇಜು ತಿಳಿಸಿದೆ.

ವಿವಾದದ ಕುರಿತು ಪ್ರತಿಕ್ರಿಯಿಸಿರುವ ಕಾಲೇಜನ್ನು ನಡೆಸುತ್ತಿರುವ ಪ್ರೋಗ್ರೆಸಿವ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಗಜಾನನ್ ಎಕ್ಬೋಟೆ, “ಕಂಪನಿಯು ನಮಗೆ ಎರಡು ಇ-ಮೇಲ್‌ಗಳನ್ನು ಕಳುಹಿಸಿತ್ತು. ಒಂದು ಸೆಪ್ಟೆಂಬರ್ 30 ರಂದು, ಇನ್ನೊಂದು ಶುಕ್ರವಾರ ಬೆಳಿಗ್ಗೆ. ಇ-ಮೇಲ್‌ಗಳಿಗೆ ಪ್ರತಿಕ್ರಿಯಿಸಲು ಯಾವುದೇ ಸಮಯದ ಅವಧಿಯನ್ನು ಉಲ್ಲೇಖಿಸಿರಲಿಲ್ಲ. ವಿದ್ಯಾರ್ಥಿಯು ಶಿಫಾರಸು ಪತ್ರ ಮತ್ತು ಒರಿಜಿನಲ್ ಸರ್ಟಿಫಿಕೇಟ್‌ಗಾಗಿ ಕೋರಿದ್ದರು. ಪೊಲೀಸ್ ತನಿಖೆ ಇನ್ನೂ ಬಾಕಿ ಇರುವುದರಿಂದ ಶಿಫಾರಸು ಪತ್ರವನ್ನು ನೀಡಲು ಸಾಧ್ಯವಾಗಿಲ್ಲ. ಆದರೆ, ಕಂಪನಿಯು ಎರಡನೇ ಬಾರಿಗೆ ಇ-ಮೇಲ್ ಕಳುಹಿಸಿದ 10 ನಿಮಿಷಗಳ ಒಳಗೆ ನಾವು ಸರ್ಟಿಫಿಕೇಟ್ ಅನ್ನು ಒದಗಿಸಿದ್ದೇವೆ” ಎಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...