Homeದಲಿತ್ ಫೈಲ್ಸ್ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

- Advertisement -
- Advertisement -

ಪುಣೆಯಲ್ಲಿ ನಾನು ಅಧ್ಯಯನ ಮಾಡಿದ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡಿದ್ದೇನೆ ಎಂದು ದಲಿತ ಯುವಕನೋರ್ವ ಆರೋಪಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ದಲಿತ ಯುವಕ ಪ್ರೇಮ್ ಬಿರ್ಹಾಡೆ, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್‌ ಕಾಲೇಜಿನ ಕಾರಣದಿಂದಾಗಿ ನಾನು ನನ್ನ ಕೆಲಸವನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

“ನಾನು ಕಾಲೇಜಿನಲ್ಲಿ ಓದಿರುವ ಬಗ್ಗೆ ಕಂಪನಿ ದೃಢೀಕರಣ ಕೇಳಿತ್ತು. ಆದರೆ, ಕಾಲೇಜಿನವರು ಪ್ರತಿಕ್ರಿಯಿಸಿಲ್ಲ. ಕಾರಣ ಅವರಿಗೆ ನಾವು ಜೀವನದಲ್ಲಿ ಮುಂದೆ ಬರುವುದು ಇಷ್ಟ ಇಲ್ಲ. ಇದು ನನ್ನ, ನನ್ನ ಕುಟುಂಬದ, ನನ್ನ ಸಮುದಾಯದ ಹೋರಾಟ” ಎಂದು ಪ್ರೇಮ್ ಬಿರ್ಹಾಡೆ ಅಳಲು ತೋಡಿಕೊಂಡಿದ್ದಾರೆ.

ಕಾಲೇಜು ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಅಕ್ಟೋಬರ್ 14ರಂದು ನೀಡಿದ ಪ್ರಮಾಣಪತ್ರದ ಪ್ರತಿಯನ್ನು ಹಂಚಿಕೊಂಡಿದೆ. ಕಾಲೇಜು ಅಥವಾ ಯಾವುದೇ ಸಿಬ್ಬಂದಿಗಳು ಅವರ ಜಾತಿ ಬಗ್ಗೆ ಚರ್ಚಿಸಿಲ್ಲ. ಎಜ್ಯುಕೇಶನ್ ರೆಫೆರೆನ್ಸ್ ನೀಡದಿರುವುದು ಸಂಸ್ಥೆಯ ನಿಯಮಗಳು ಮತ್ತು ಶಿಸ್ತಿನ ಕಾರಣದಿಂದಾಗಿ ಎಂದು ತಿಳಿಸಿದೆ.

ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ) ಈ ಕುರಿತು ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿದೆ.

ವಿಬಿಎ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಶುಕ್ರವಾರ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್ ಕಾಲೇಜು ದಲಿತ ಯುವಕನೋರ್ವನ ಶೈಕ್ಷಣಿಕ ವಿದ್ಯಾರ್ಹತೆಗಳನ್ನು ದೃಢಪಡಿಸಲು ನಿರಾಕರಿಸಿದ್ದರಿಂದ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶವನ್ನು ಕಳೆದುಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.

ಕಂಪನಿ ಕಳಿಸಿದ್ದ ಈ ಮೇಲ್‌ಗೆ ಪ್ರತಿಕ್ರಿಯಿಸಲು ಕಾಲೇಜಿನವರು ತಡ ಮಾಡಿದ್ದು ಏಕೆ? ಏಕೆಂದೆ, ಪ್ರೇಮ್ ಬಿರ್ಹಾಡೆ ಓರ್ವ ದಲಿತ ಯುವಕ ಎಂದು ಹೇಳಿದ್ದಾರೆ.

ಕಾಲೇಜಿನ ಕಾರಣಕ್ಕೆ ಕೆಲಸದ ಅವಕಾಶ ಕಳೆದುಕೊಂಡ ಹಿನ್ನೆಲೆ ಬಿರ್ಹಾಡೆ ಅವರ ಕುಟುಂಬವು ಕಾಲೇಜಿನ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಉದ್ದೇಶಿಸಿದೆ ಎಂದು ವಿಬಿಎ ನಾಯಕರು ಹೇಳಿದ್ದಾರೆ. ಈ ನಡುವೆ ಮಹಿಳಾ ಶಿಕ್ಷಕರನ್ನು ನಿಂದಿಸಿದ್ದಕ್ಕಾಗಿ ಯುವಕನ ವಿರುದ್ಧ ದೂರು ನೀಡಿರುವುದಾಗಿ ಕಾಲೇಜು ತಿಳಿಸಿದೆ.

ವಿವಾದದ ಕುರಿತು ಪ್ರತಿಕ್ರಿಯಿಸಿರುವ ಕಾಲೇಜನ್ನು ನಡೆಸುತ್ತಿರುವ ಪ್ರೋಗ್ರೆಸಿವ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಗಜಾನನ್ ಎಕ್ಬೋಟೆ, “ಕಂಪನಿಯು ನಮಗೆ ಎರಡು ಇ-ಮೇಲ್‌ಗಳನ್ನು ಕಳುಹಿಸಿತ್ತು. ಒಂದು ಸೆಪ್ಟೆಂಬರ್ 30 ರಂದು, ಇನ್ನೊಂದು ಶುಕ್ರವಾರ ಬೆಳಿಗ್ಗೆ. ಇ-ಮೇಲ್‌ಗಳಿಗೆ ಪ್ರತಿಕ್ರಿಯಿಸಲು ಯಾವುದೇ ಸಮಯದ ಅವಧಿಯನ್ನು ಉಲ್ಲೇಖಿಸಿರಲಿಲ್ಲ. ವಿದ್ಯಾರ್ಥಿಯು ಶಿಫಾರಸು ಪತ್ರ ಮತ್ತು ಒರಿಜಿನಲ್ ಸರ್ಟಿಫಿಕೇಟ್‌ಗಾಗಿ ಕೋರಿದ್ದರು. ಪೊಲೀಸ್ ತನಿಖೆ ಇನ್ನೂ ಬಾಕಿ ಇರುವುದರಿಂದ ಶಿಫಾರಸು ಪತ್ರವನ್ನು ನೀಡಲು ಸಾಧ್ಯವಾಗಿಲ್ಲ. ಆದರೆ, ಕಂಪನಿಯು ಎರಡನೇ ಬಾರಿಗೆ ಇ-ಮೇಲ್ ಕಳುಹಿಸಿದ 10 ನಿಮಿಷಗಳ ಒಳಗೆ ನಾವು ಸರ್ಟಿಫಿಕೇಟ್ ಅನ್ನು ಒದಗಿಸಿದ್ದೇವೆ” ಎಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...