Homeದಲಿತ್ ಫೈಲ್ಸ್ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

- Advertisement -
- Advertisement -

ಪುಣೆಯಲ್ಲಿ ನಾನು ಅಧ್ಯಯನ ಮಾಡಿದ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡಿದ್ದೇನೆ ಎಂದು ದಲಿತ ಯುವಕನೋರ್ವ ಆರೋಪಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ದಲಿತ ಯುವಕ ಪ್ರೇಮ್ ಬಿರ್ಹಾಡೆ, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್‌ ಕಾಲೇಜಿನ ಕಾರಣದಿಂದಾಗಿ ನಾನು ನನ್ನ ಕೆಲಸವನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

“ನಾನು ಕಾಲೇಜಿನಲ್ಲಿ ಓದಿರುವ ಬಗ್ಗೆ ಕಂಪನಿ ದೃಢೀಕರಣ ಕೇಳಿತ್ತು. ಆದರೆ, ಕಾಲೇಜಿನವರು ಪ್ರತಿಕ್ರಿಯಿಸಿಲ್ಲ. ಕಾರಣ ಅವರಿಗೆ ನಾವು ಜೀವನದಲ್ಲಿ ಮುಂದೆ ಬರುವುದು ಇಷ್ಟ ಇಲ್ಲ. ಇದು ನನ್ನ, ನನ್ನ ಕುಟುಂಬದ, ನನ್ನ ಸಮುದಾಯದ ಹೋರಾಟ” ಎಂದು ಪ್ರೇಮ್ ಬಿರ್ಹಾಡೆ ಅಳಲು ತೋಡಿಕೊಂಡಿದ್ದಾರೆ.

ಕಾಲೇಜು ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಅಕ್ಟೋಬರ್ 14ರಂದು ನೀಡಿದ ಪ್ರಮಾಣಪತ್ರದ ಪ್ರತಿಯನ್ನು ಹಂಚಿಕೊಂಡಿದೆ. ಕಾಲೇಜು ಅಥವಾ ಯಾವುದೇ ಸಿಬ್ಬಂದಿಗಳು ಅವರ ಜಾತಿ ಬಗ್ಗೆ ಚರ್ಚಿಸಿಲ್ಲ. ಎಜ್ಯುಕೇಶನ್ ರೆಫೆರೆನ್ಸ್ ನೀಡದಿರುವುದು ಸಂಸ್ಥೆಯ ನಿಯಮಗಳು ಮತ್ತು ಶಿಸ್ತಿನ ಕಾರಣದಿಂದಾಗಿ ಎಂದು ತಿಳಿಸಿದೆ.

ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ) ಈ ಕುರಿತು ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿದೆ.

ವಿಬಿಎ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಶುಕ್ರವಾರ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್ ಕಾಲೇಜು ದಲಿತ ಯುವಕನೋರ್ವನ ಶೈಕ್ಷಣಿಕ ವಿದ್ಯಾರ್ಹತೆಗಳನ್ನು ದೃಢಪಡಿಸಲು ನಿರಾಕರಿಸಿದ್ದರಿಂದ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶವನ್ನು ಕಳೆದುಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.

ಕಂಪನಿ ಕಳಿಸಿದ್ದ ಈ ಮೇಲ್‌ಗೆ ಪ್ರತಿಕ್ರಿಯಿಸಲು ಕಾಲೇಜಿನವರು ತಡ ಮಾಡಿದ್ದು ಏಕೆ? ಏಕೆಂದೆ, ಪ್ರೇಮ್ ಬಿರ್ಹಾಡೆ ಓರ್ವ ದಲಿತ ಯುವಕ ಎಂದು ಹೇಳಿದ್ದಾರೆ.

ಕಾಲೇಜಿನ ಕಾರಣಕ್ಕೆ ಕೆಲಸದ ಅವಕಾಶ ಕಳೆದುಕೊಂಡ ಹಿನ್ನೆಲೆ ಬಿರ್ಹಾಡೆ ಅವರ ಕುಟುಂಬವು ಕಾಲೇಜಿನ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಉದ್ದೇಶಿಸಿದೆ ಎಂದು ವಿಬಿಎ ನಾಯಕರು ಹೇಳಿದ್ದಾರೆ. ಈ ನಡುವೆ ಮಹಿಳಾ ಶಿಕ್ಷಕರನ್ನು ನಿಂದಿಸಿದ್ದಕ್ಕಾಗಿ ಯುವಕನ ವಿರುದ್ಧ ದೂರು ನೀಡಿರುವುದಾಗಿ ಕಾಲೇಜು ತಿಳಿಸಿದೆ.

ವಿವಾದದ ಕುರಿತು ಪ್ರತಿಕ್ರಿಯಿಸಿರುವ ಕಾಲೇಜನ್ನು ನಡೆಸುತ್ತಿರುವ ಪ್ರೋಗ್ರೆಸಿವ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಗಜಾನನ್ ಎಕ್ಬೋಟೆ, “ಕಂಪನಿಯು ನಮಗೆ ಎರಡು ಇ-ಮೇಲ್‌ಗಳನ್ನು ಕಳುಹಿಸಿತ್ತು. ಒಂದು ಸೆಪ್ಟೆಂಬರ್ 30 ರಂದು, ಇನ್ನೊಂದು ಶುಕ್ರವಾರ ಬೆಳಿಗ್ಗೆ. ಇ-ಮೇಲ್‌ಗಳಿಗೆ ಪ್ರತಿಕ್ರಿಯಿಸಲು ಯಾವುದೇ ಸಮಯದ ಅವಧಿಯನ್ನು ಉಲ್ಲೇಖಿಸಿರಲಿಲ್ಲ. ವಿದ್ಯಾರ್ಥಿಯು ಶಿಫಾರಸು ಪತ್ರ ಮತ್ತು ಒರಿಜಿನಲ್ ಸರ್ಟಿಫಿಕೇಟ್‌ಗಾಗಿ ಕೋರಿದ್ದರು. ಪೊಲೀಸ್ ತನಿಖೆ ಇನ್ನೂ ಬಾಕಿ ಇರುವುದರಿಂದ ಶಿಫಾರಸು ಪತ್ರವನ್ನು ನೀಡಲು ಸಾಧ್ಯವಾಗಿಲ್ಲ. ಆದರೆ, ಕಂಪನಿಯು ಎರಡನೇ ಬಾರಿಗೆ ಇ-ಮೇಲ್ ಕಳುಹಿಸಿದ 10 ನಿಮಿಷಗಳ ಒಳಗೆ ನಾವು ಸರ್ಟಿಫಿಕೇಟ್ ಅನ್ನು ಒದಗಿಸಿದ್ದೇವೆ” ಎಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...