Homeದಲಿತ್ ಫೈಲ್ಸ್ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

- Advertisement -
- Advertisement -

ಪುಣೆಯಲ್ಲಿ ನಾನು ಅಧ್ಯಯನ ಮಾಡಿದ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡಿದ್ದೇನೆ ಎಂದು ದಲಿತ ಯುವಕನೋರ್ವ ಆರೋಪಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ದಲಿತ ಯುವಕ ಪ್ರೇಮ್ ಬಿರ್ಹಾಡೆ, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್‌ ಕಾಲೇಜಿನ ಕಾರಣದಿಂದಾಗಿ ನಾನು ನನ್ನ ಕೆಲಸವನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

“ನಾನು ಕಾಲೇಜಿನಲ್ಲಿ ಓದಿರುವ ಬಗ್ಗೆ ಕಂಪನಿ ದೃಢೀಕರಣ ಕೇಳಿತ್ತು. ಆದರೆ, ಕಾಲೇಜಿನವರು ಪ್ರತಿಕ್ರಿಯಿಸಿಲ್ಲ. ಕಾರಣ ಅವರಿಗೆ ನಾವು ಜೀವನದಲ್ಲಿ ಮುಂದೆ ಬರುವುದು ಇಷ್ಟ ಇಲ್ಲ. ಇದು ನನ್ನ, ನನ್ನ ಕುಟುಂಬದ, ನನ್ನ ಸಮುದಾಯದ ಹೋರಾಟ” ಎಂದು ಪ್ರೇಮ್ ಬಿರ್ಹಾಡೆ ಅಳಲು ತೋಡಿಕೊಂಡಿದ್ದಾರೆ.

ಕಾಲೇಜು ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಅಕ್ಟೋಬರ್ 14ರಂದು ನೀಡಿದ ಪ್ರಮಾಣಪತ್ರದ ಪ್ರತಿಯನ್ನು ಹಂಚಿಕೊಂಡಿದೆ. ಕಾಲೇಜು ಅಥವಾ ಯಾವುದೇ ಸಿಬ್ಬಂದಿಗಳು ಅವರ ಜಾತಿ ಬಗ್ಗೆ ಚರ್ಚಿಸಿಲ್ಲ. ಎಜ್ಯುಕೇಶನ್ ರೆಫೆರೆನ್ಸ್ ನೀಡದಿರುವುದು ಸಂಸ್ಥೆಯ ನಿಯಮಗಳು ಮತ್ತು ಶಿಸ್ತಿನ ಕಾರಣದಿಂದಾಗಿ ಎಂದು ತಿಳಿಸಿದೆ.

ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ) ಈ ಕುರಿತು ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿದೆ.

ವಿಬಿಎ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಶುಕ್ರವಾರ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್ ಕಾಲೇಜು ದಲಿತ ಯುವಕನೋರ್ವನ ಶೈಕ್ಷಣಿಕ ವಿದ್ಯಾರ್ಹತೆಗಳನ್ನು ದೃಢಪಡಿಸಲು ನಿರಾಕರಿಸಿದ್ದರಿಂದ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶವನ್ನು ಕಳೆದುಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.

ಕಂಪನಿ ಕಳಿಸಿದ್ದ ಈ ಮೇಲ್‌ಗೆ ಪ್ರತಿಕ್ರಿಯಿಸಲು ಕಾಲೇಜಿನವರು ತಡ ಮಾಡಿದ್ದು ಏಕೆ? ಏಕೆಂದೆ, ಪ್ರೇಮ್ ಬಿರ್ಹಾಡೆ ಓರ್ವ ದಲಿತ ಯುವಕ ಎಂದು ಹೇಳಿದ್ದಾರೆ.

ಕಾಲೇಜಿನ ಕಾರಣಕ್ಕೆ ಕೆಲಸದ ಅವಕಾಶ ಕಳೆದುಕೊಂಡ ಹಿನ್ನೆಲೆ ಬಿರ್ಹಾಡೆ ಅವರ ಕುಟುಂಬವು ಕಾಲೇಜಿನ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಉದ್ದೇಶಿಸಿದೆ ಎಂದು ವಿಬಿಎ ನಾಯಕರು ಹೇಳಿದ್ದಾರೆ. ಈ ನಡುವೆ ಮಹಿಳಾ ಶಿಕ್ಷಕರನ್ನು ನಿಂದಿಸಿದ್ದಕ್ಕಾಗಿ ಯುವಕನ ವಿರುದ್ಧ ದೂರು ನೀಡಿರುವುದಾಗಿ ಕಾಲೇಜು ತಿಳಿಸಿದೆ.

ವಿವಾದದ ಕುರಿತು ಪ್ರತಿಕ್ರಿಯಿಸಿರುವ ಕಾಲೇಜನ್ನು ನಡೆಸುತ್ತಿರುವ ಪ್ರೋಗ್ರೆಸಿವ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಗಜಾನನ್ ಎಕ್ಬೋಟೆ, “ಕಂಪನಿಯು ನಮಗೆ ಎರಡು ಇ-ಮೇಲ್‌ಗಳನ್ನು ಕಳುಹಿಸಿತ್ತು. ಒಂದು ಸೆಪ್ಟೆಂಬರ್ 30 ರಂದು, ಇನ್ನೊಂದು ಶುಕ್ರವಾರ ಬೆಳಿಗ್ಗೆ. ಇ-ಮೇಲ್‌ಗಳಿಗೆ ಪ್ರತಿಕ್ರಿಯಿಸಲು ಯಾವುದೇ ಸಮಯದ ಅವಧಿಯನ್ನು ಉಲ್ಲೇಖಿಸಿರಲಿಲ್ಲ. ವಿದ್ಯಾರ್ಥಿಯು ಶಿಫಾರಸು ಪತ್ರ ಮತ್ತು ಒರಿಜಿನಲ್ ಸರ್ಟಿಫಿಕೇಟ್‌ಗಾಗಿ ಕೋರಿದ್ದರು. ಪೊಲೀಸ್ ತನಿಖೆ ಇನ್ನೂ ಬಾಕಿ ಇರುವುದರಿಂದ ಶಿಫಾರಸು ಪತ್ರವನ್ನು ನೀಡಲು ಸಾಧ್ಯವಾಗಿಲ್ಲ. ಆದರೆ, ಕಂಪನಿಯು ಎರಡನೇ ಬಾರಿಗೆ ಇ-ಮೇಲ್ ಕಳುಹಿಸಿದ 10 ನಿಮಿಷಗಳ ಒಳಗೆ ನಾವು ಸರ್ಟಿಫಿಕೇಟ್ ಅನ್ನು ಒದಗಿಸಿದ್ದೇವೆ” ಎಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...