Homeದಲಿತ್ ಫೈಲ್ಸ್ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

- Advertisement -
- Advertisement -

ಪುಣೆಯಲ್ಲಿ ನಾನು ಅಧ್ಯಯನ ಮಾಡಿದ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡಿದ್ದೇನೆ ಎಂದು ದಲಿತ ಯುವಕನೋರ್ವ ಆರೋಪಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ದಲಿತ ಯುವಕ ಪ್ರೇಮ್ ಬಿರ್ಹಾಡೆ, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್‌ ಕಾಲೇಜಿನ ಕಾರಣದಿಂದಾಗಿ ನಾನು ನನ್ನ ಕೆಲಸವನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

“ನಾನು ಕಾಲೇಜಿನಲ್ಲಿ ಓದಿರುವ ಬಗ್ಗೆ ಕಂಪನಿ ದೃಢೀಕರಣ ಕೇಳಿತ್ತು. ಆದರೆ, ಕಾಲೇಜಿನವರು ಪ್ರತಿಕ್ರಿಯಿಸಿಲ್ಲ. ಕಾರಣ ಅವರಿಗೆ ನಾವು ಜೀವನದಲ್ಲಿ ಮುಂದೆ ಬರುವುದು ಇಷ್ಟ ಇಲ್ಲ. ಇದು ನನ್ನ, ನನ್ನ ಕುಟುಂಬದ, ನನ್ನ ಸಮುದಾಯದ ಹೋರಾಟ” ಎಂದು ಪ್ರೇಮ್ ಬಿರ್ಹಾಡೆ ಅಳಲು ತೋಡಿಕೊಂಡಿದ್ದಾರೆ.

ಕಾಲೇಜು ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಅಕ್ಟೋಬರ್ 14ರಂದು ನೀಡಿದ ಪ್ರಮಾಣಪತ್ರದ ಪ್ರತಿಯನ್ನು ಹಂಚಿಕೊಂಡಿದೆ. ಕಾಲೇಜು ಅಥವಾ ಯಾವುದೇ ಸಿಬ್ಬಂದಿಗಳು ಅವರ ಜಾತಿ ಬಗ್ಗೆ ಚರ್ಚಿಸಿಲ್ಲ. ಎಜ್ಯುಕೇಶನ್ ರೆಫೆರೆನ್ಸ್ ನೀಡದಿರುವುದು ಸಂಸ್ಥೆಯ ನಿಯಮಗಳು ಮತ್ತು ಶಿಸ್ತಿನ ಕಾರಣದಿಂದಾಗಿ ಎಂದು ತಿಳಿಸಿದೆ.

ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ) ಈ ಕುರಿತು ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿದೆ.

ವಿಬಿಎ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಶುಕ್ರವಾರ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್ ಕಾಲೇಜು ದಲಿತ ಯುವಕನೋರ್ವನ ಶೈಕ್ಷಣಿಕ ವಿದ್ಯಾರ್ಹತೆಗಳನ್ನು ದೃಢಪಡಿಸಲು ನಿರಾಕರಿಸಿದ್ದರಿಂದ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶವನ್ನು ಕಳೆದುಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.

ಕಂಪನಿ ಕಳಿಸಿದ್ದ ಈ ಮೇಲ್‌ಗೆ ಪ್ರತಿಕ್ರಿಯಿಸಲು ಕಾಲೇಜಿನವರು ತಡ ಮಾಡಿದ್ದು ಏಕೆ? ಏಕೆಂದೆ, ಪ್ರೇಮ್ ಬಿರ್ಹಾಡೆ ಓರ್ವ ದಲಿತ ಯುವಕ ಎಂದು ಹೇಳಿದ್ದಾರೆ.

ಕಾಲೇಜಿನ ಕಾರಣಕ್ಕೆ ಕೆಲಸದ ಅವಕಾಶ ಕಳೆದುಕೊಂಡ ಹಿನ್ನೆಲೆ ಬಿರ್ಹಾಡೆ ಅವರ ಕುಟುಂಬವು ಕಾಲೇಜಿನ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ಉದ್ದೇಶಿಸಿದೆ ಎಂದು ವಿಬಿಎ ನಾಯಕರು ಹೇಳಿದ್ದಾರೆ. ಈ ನಡುವೆ ಮಹಿಳಾ ಶಿಕ್ಷಕರನ್ನು ನಿಂದಿಸಿದ್ದಕ್ಕಾಗಿ ಯುವಕನ ವಿರುದ್ಧ ದೂರು ನೀಡಿರುವುದಾಗಿ ಕಾಲೇಜು ತಿಳಿಸಿದೆ.

ವಿವಾದದ ಕುರಿತು ಪ್ರತಿಕ್ರಿಯಿಸಿರುವ ಕಾಲೇಜನ್ನು ನಡೆಸುತ್ತಿರುವ ಪ್ರೋಗ್ರೆಸಿವ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಗಜಾನನ್ ಎಕ್ಬೋಟೆ, “ಕಂಪನಿಯು ನಮಗೆ ಎರಡು ಇ-ಮೇಲ್‌ಗಳನ್ನು ಕಳುಹಿಸಿತ್ತು. ಒಂದು ಸೆಪ್ಟೆಂಬರ್ 30 ರಂದು, ಇನ್ನೊಂದು ಶುಕ್ರವಾರ ಬೆಳಿಗ್ಗೆ. ಇ-ಮೇಲ್‌ಗಳಿಗೆ ಪ್ರತಿಕ್ರಿಯಿಸಲು ಯಾವುದೇ ಸಮಯದ ಅವಧಿಯನ್ನು ಉಲ್ಲೇಖಿಸಿರಲಿಲ್ಲ. ವಿದ್ಯಾರ್ಥಿಯು ಶಿಫಾರಸು ಪತ್ರ ಮತ್ತು ಒರಿಜಿನಲ್ ಸರ್ಟಿಫಿಕೇಟ್‌ಗಾಗಿ ಕೋರಿದ್ದರು. ಪೊಲೀಸ್ ತನಿಖೆ ಇನ್ನೂ ಬಾಕಿ ಇರುವುದರಿಂದ ಶಿಫಾರಸು ಪತ್ರವನ್ನು ನೀಡಲು ಸಾಧ್ಯವಾಗಿಲ್ಲ. ಆದರೆ, ಕಂಪನಿಯು ಎರಡನೇ ಬಾರಿಗೆ ಇ-ಮೇಲ್ ಕಳುಹಿಸಿದ 10 ನಿಮಿಷಗಳ ಒಳಗೆ ನಾವು ಸರ್ಟಿಫಿಕೇಟ್ ಅನ್ನು ಒದಗಿಸಿದ್ದೇವೆ” ಎಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...