Homeಕರ್ನಾಟಕಗೊಲ್ಲರ ಬೀದಿಗೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ; ದಂಡ ಕಟ್ಟಿಸಿಕೊಂಡ ಮುಖಂಡರು

ಗೊಲ್ಲರ ಬೀದಿಗೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ; ದಂಡ ಕಟ್ಟಿಸಿಕೊಂಡ ಮುಖಂಡರು

- Advertisement -
- Advertisement -

ಹಳೆ ಮನೆ ಕೆಡವಲು ಗೊಲ್ಲರಟ್ಟಿಗೆ ತೆರಳಿದ್ದ ದಲಿತ ಸಮುದಾಯದ ಜೆಸಿಬಿ ಆಪರೇಟರ್ ಯುವಕನನ್ನು, ಗೊಲ್ಲ ಸಮುದಾಯದ ಜನರು ಅಮಾನವೀಯವಾಗಿ ಥಳಿಸಿ, ದಂಡ ಕಟ್ಟಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದಲ್ಲಿ ಹೊಸ ವರ್ಷದ ದಿನದಂದೆ ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆದಿದ್ದು, ದಲಿತ ಸಂಘರ್ಷ ಸಮಿತಿ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಗೊಲ್ಲರ ಬೀದಿಯಲ್ಲಿರುವ ಗ್ರಾಮದ ದೇವಸ್ಥಾನಕ್ಕೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದಾಗ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಆದರೆ, ಹಿರಿಯ ದಲಿತ ಮುಖಂಡರು ಹಾಗೂ ಪೊಲೀಸರು ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೆಸಿಬಿ ಆಪರೇಟರ್ ಮಾರುತಿ ಗೇರಮರಡಿ ಗ್ರಾಮದಲ್ಲಿ ಹಳೆ ಮನೆ ಕೆಡವಲು ತೆರಳಿದ್ದರು.

ನಡೆದದ್ದೇನು?

ತರೀಕೆರೆ ತಾಲೂಕಿನ ಎಚ್. ರಂಗಾಪುರ ಗ್ರಾಮದ ನಿವಾಸಿ, ಮಾದಿಗ ಸಮುದಾಯದ ಮಾರುತಿ ಎಂಬ ಜೆಸಿಬಿ ಆಪರೇಟರ್‌ನನ್ನು ಗೇರಮರಡಿ ಗ್ರಾಮದಲ್ಲಿ ಮನೆ ಕೆಡವುದಕ್ಕೆಂದು ಜನವರಿ 1ರಂದು ಕರೆಸಿಕೊಂಡಿದ್ದರು. ಆತ ತನ್ನ ಕೆಲಸ ಮುಗಿಸುವವರೆಗೂ ಸುಮ್ಮನಿದ್ದ ಗೊಲ್ಲ ಸಮುದಾಯದ ವ್ಯಕ್ತಿಗಳು, ಹಣ ನೀಡುವಾಗ ಆತನ ಹಿನ್ನೆಲೆ ಕೇಳಿದ್ದಾರೆ. ಸಹಜವಾಗಿಯೇ ಆತ ತನ್ನ ಊರು ಹಾಗೂ ಜಾತಿಯ ಗುರುತನ್ನು ಅವರ ಮುಂದೆ ಹೇಳಿದ್ದಾರೆ. ಮಾರುತಿ ಮಾದಿಗ ಸಮುದಾಯಕ್ಕೆ ಸೇರಿದವನು ಎಂದು ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಸೇರಿ ಆತನನ್ನು ಥಳಿಸಿದ್ದಾರೆ. ‘ಮಾದಿಗ ಸಮುದಾಯದ ನೀನು ನಮ್ಮ ಬೀದಿಗೆ ಯಾಕೆ ಬಂದಿದ್ದೀಯಾ’ ಎಂದು ಸ್ಥಳದಲ್ಲೇ ಕೂರಿಸಿಕೊಂಡು ಪಂಚಾಯಿತಿ ಮಾಡಿ, ಆತನಿಂದ ದಂಡ ಕಟ್ಟಿಸಿಕೊಂಡಿದ್ದಾರೆ ಎಂದು ದಸಂಸ ಮುಖಂಡರು ‘ನಾನುಗೌರಿ.ಕಾಂ‘ಗೆ ಮಾಹಿತಿ ನೀಡಿದ್ದಾರೆ.

ದಂಡ ಕಟ್ಟಿ ಗ್ರಾಮದಿಂದ ಹೊರಬಂದ ಮಾರುತಿ, ತನ್ನ ಮೇಲೆ ನಡೆದ ಹಲ್ಲೆ ಹಾಗೂ ದಂಡ ಕಟ್ಟಿದ್ದರ ಬಗ್ಗೆ ತನ್ನ ಆಪ್ತರು ಹಾಗೂ ದಸಂಸ ಮುಖಂಡರ ಬಳಿ ಹೇಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆ ಕುರಿತು ‘ನಾನುಗೌರಿ.ಕಾಂ’ ಜತೆಗೆ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಅಣ್ಣಯ್ಯ ಮರ್ಲೆ, ‘ಗ್ರಾಮದಲ್ಲಿ ದಲಿತರ ಮೇಲೆ ಹೇರಲಾಗಿರುವ ಸಾಮಾಜಿಕ ಬಹಿಷ್ಕಾರವನ್ನು ಈ ಕೂಡಲೇ ತೆಗೆಯಬೇಕು. ಗ್ರಾಮಕ್ಕೆ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಬೇಕು. ಹಲ್ಲೆ ಮಾಡಿದವರಿಗೆ ಶಾಸಕರ ಬೆಂಬಲ ಇದೆ, ಅವರು ಸಾಮಾಜಿಕ ನ್ಯಾಯಯದ ಪರವಾಗಿ ಇರಬೇಕು. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಂಡು, ಥಳಿತಕ್ಕೆ ಒಳಗಾದ ದಲಿತ ಯುವಕನಿಗೆ ಸರ್ಕಾರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

‘ಹೊಸ ವರ್ಷದ ದಿನದಂದು ಗ್ರಾಮದ ಗೊಲ್ಲ ಬೀದಿಯ ನಿವಾಸಿಗಳು ಮಾರುತಿ (34) ಎಂಬ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ತರೀಕೆರೆ ವೃತ್ತ ನಿರೀಕ್ಷಕ ವೀರೇಂದ್ರ ತಿಳಿಸಿದ್ದಾರೆ.

‘ನಾವು 30-35 ಜನರ ವಿರುದ್ಧ ಭಾರತೀಯ ದಂಡನೆಯ ಸೆಕ್ಷನ್ 143 (ಕಾನೂನುಬಾಹಿರ ಸಭೆ), 149 (ಕಾನೂನುಬಾಹಿರ ಸಭೆ), 504 (ಉದ್ದೇಶಪೂರ್ವಕ ಅವಮಾನ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಜೀವ ಬೆದರಿಕೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದೇವೆ. ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿಯೂ ತನಿಖೆ ನಡೆಯುತ್ತಿದೆ’ ಎಂದು ವೀರೇಂದ್ರ ಹೇಳಿದರು.

‘ಗೊಲ್ಲ ಸಮುದಾಯದ ಜನರು ಮಾರುತಿಯವರ ದಲಿತ ಗುರುತನ್ನು ಆಧರಿಸಿ, ಧಾರ್ಮಿಕ ಭಾವನೆಗಳನ್ನು ಕೆರಳಿಸಿದ್ದಾರೆ. ದಲಿತರು ದೇವಸ್ಥಾನದ ಬಳಿ ಬುರುವುದು ಸೂಕ್ತವಲ್ಲ ಎಂದು ಹಲ್ಲೆ ಮಾಡಿದ್ದಾರೆ’ ಎಂದು ದಸಂಸ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಮಾರುತಿ ಮೇಲಿನ ಹಲ್ಲೆಗೆ ಪ್ರತಿಯಾಗಿ ದಲಿತ ಮುಖಂಡರು ಗ್ರಾಮದಲ್ಲಿ ಮೆರವಣಿಗೆ ನಡೆಸಿದ್ದಾರೆ. ದಲಿತರ ಮೇಲಿನ ಹಿಂಸಾಚಾರವನ್ನು ವಿರೋಧಿಸಿ, ಸಂತ್ರಸ್ತ ಮಾರುತಿಗೆ ನ್ಯಾಯಕ್ಕಾಗಿ ಒತ್ತಾಯಿಸಿದರು. ಕೆಲವು ದಲಿತ ಮುಖಂಡರು ದೇವಸ್ಥಾನವನ್ನು ಪ್ರವೇಶಿಸಲು ಮುಂದಾದರು; ಕೂಡಲೇ ದೇವಾಲಯವನ್ನು ಮುಚ್ಚಲಾಯಿತು. ತಹಶೀಲ್ದಾರ್ ರಾಜೀವ್ ಮತ್ತು ಪೊಲೀಸರ ಮಧ್ಯಪ್ರವೇಶದಿಂದ ಮುಖಂಡರು ತಣ್ಣಗಾಗಿದ್ದಾರೆ.

ಹಲ್ಲೆಗೊಳಗಾದ ಮಾರುತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಹಿಂದಿನ ದಿನಗಳಲ್ಲಿ, ದಲಿತರಿಗೆ ಗೊಲ್ಲರ ಬೀದಿಗೆ ಪ್ರವೇಶಿಸಲು ಅವಕಾಶವಿರಲಿಲ್ಲ. ಆದರೆ ಈಗ ಪರಿಸ್ಥಿತಿ ಸಾಕಷ್ಟು ಬದಲಾಗಿದ್ದು, ಜಾತಿ ಆಧಾರಿತ ತಾರತಮ್ಯವಿಲ್ಲ’ ಎಂದು ಗೊಲ್ಲ ಸಮುದಾಯದ ಮುಖಂಡ ಹನುಮಪ್ಪ ಸುದ್ದಿಗಾರರಿಗೆ ತಿಳಿಸಿದರು. ದಲಿತ ಯುವಕನ ಮೇಲಿನ ಹಲ್ಲೆಯು ಕೇವಲ ವೈಯಕ್ತಿಕ ನೆಲೆಯಲ್ಲಿ ಆಗಿದೆಯೇ ಹೊರತು ಜಾತಿ ಆಧಾರಿತ ತಾರತಮ್ಯವಲ್ಲ. ಆದರೆ ದಲಿತ ಸಮುದಾಯವು ಸುಳ್ಳು ಆರೋಪ ಹೊರಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...