Homeಕರ್ನಾಟಕಗೊಲ್ಲರ ಬೀದಿಗೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ; ದಂಡ ಕಟ್ಟಿಸಿಕೊಂಡ ಮುಖಂಡರು

ಗೊಲ್ಲರ ಬೀದಿಗೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ; ದಂಡ ಕಟ್ಟಿಸಿಕೊಂಡ ಮುಖಂಡರು

- Advertisement -
- Advertisement -

ಹಳೆ ಮನೆ ಕೆಡವಲು ಗೊಲ್ಲರಟ್ಟಿಗೆ ತೆರಳಿದ್ದ ದಲಿತ ಸಮುದಾಯದ ಜೆಸಿಬಿ ಆಪರೇಟರ್ ಯುವಕನನ್ನು, ಗೊಲ್ಲ ಸಮುದಾಯದ ಜನರು ಅಮಾನವೀಯವಾಗಿ ಥಳಿಸಿ, ದಂಡ ಕಟ್ಟಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದಲ್ಲಿ ಹೊಸ ವರ್ಷದ ದಿನದಂದೆ ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆದಿದ್ದು, ದಲಿತ ಸಂಘರ್ಷ ಸಮಿತಿ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಗೊಲ್ಲರ ಬೀದಿಯಲ್ಲಿರುವ ಗ್ರಾಮದ ದೇವಸ್ಥಾನಕ್ಕೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದಾಗ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಆದರೆ, ಹಿರಿಯ ದಲಿತ ಮುಖಂಡರು ಹಾಗೂ ಪೊಲೀಸರು ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೆಸಿಬಿ ಆಪರೇಟರ್ ಮಾರುತಿ ಗೇರಮರಡಿ ಗ್ರಾಮದಲ್ಲಿ ಹಳೆ ಮನೆ ಕೆಡವಲು ತೆರಳಿದ್ದರು.

ನಡೆದದ್ದೇನು?

ತರೀಕೆರೆ ತಾಲೂಕಿನ ಎಚ್. ರಂಗಾಪುರ ಗ್ರಾಮದ ನಿವಾಸಿ, ಮಾದಿಗ ಸಮುದಾಯದ ಮಾರುತಿ ಎಂಬ ಜೆಸಿಬಿ ಆಪರೇಟರ್‌ನನ್ನು ಗೇರಮರಡಿ ಗ್ರಾಮದಲ್ಲಿ ಮನೆ ಕೆಡವುದಕ್ಕೆಂದು ಜನವರಿ 1ರಂದು ಕರೆಸಿಕೊಂಡಿದ್ದರು. ಆತ ತನ್ನ ಕೆಲಸ ಮುಗಿಸುವವರೆಗೂ ಸುಮ್ಮನಿದ್ದ ಗೊಲ್ಲ ಸಮುದಾಯದ ವ್ಯಕ್ತಿಗಳು, ಹಣ ನೀಡುವಾಗ ಆತನ ಹಿನ್ನೆಲೆ ಕೇಳಿದ್ದಾರೆ. ಸಹಜವಾಗಿಯೇ ಆತ ತನ್ನ ಊರು ಹಾಗೂ ಜಾತಿಯ ಗುರುತನ್ನು ಅವರ ಮುಂದೆ ಹೇಳಿದ್ದಾರೆ. ಮಾರುತಿ ಮಾದಿಗ ಸಮುದಾಯಕ್ಕೆ ಸೇರಿದವನು ಎಂದು ಗೊತ್ತಾಗುತ್ತಿದ್ದಂತೆಯೇ ಎಲ್ಲರೂ ಸೇರಿ ಆತನನ್ನು ಥಳಿಸಿದ್ದಾರೆ. ‘ಮಾದಿಗ ಸಮುದಾಯದ ನೀನು ನಮ್ಮ ಬೀದಿಗೆ ಯಾಕೆ ಬಂದಿದ್ದೀಯಾ’ ಎಂದು ಸ್ಥಳದಲ್ಲೇ ಕೂರಿಸಿಕೊಂಡು ಪಂಚಾಯಿತಿ ಮಾಡಿ, ಆತನಿಂದ ದಂಡ ಕಟ್ಟಿಸಿಕೊಂಡಿದ್ದಾರೆ ಎಂದು ದಸಂಸ ಮುಖಂಡರು ‘ನಾನುಗೌರಿ.ಕಾಂ‘ಗೆ ಮಾಹಿತಿ ನೀಡಿದ್ದಾರೆ.

ದಂಡ ಕಟ್ಟಿ ಗ್ರಾಮದಿಂದ ಹೊರಬಂದ ಮಾರುತಿ, ತನ್ನ ಮೇಲೆ ನಡೆದ ಹಲ್ಲೆ ಹಾಗೂ ದಂಡ ಕಟ್ಟಿದ್ದರ ಬಗ್ಗೆ ತನ್ನ ಆಪ್ತರು ಹಾಗೂ ದಸಂಸ ಮುಖಂಡರ ಬಳಿ ಹೇಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆ ಕುರಿತು ‘ನಾನುಗೌರಿ.ಕಾಂ’ ಜತೆಗೆ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಅಣ್ಣಯ್ಯ ಮರ್ಲೆ, ‘ಗ್ರಾಮದಲ್ಲಿ ದಲಿತರ ಮೇಲೆ ಹೇರಲಾಗಿರುವ ಸಾಮಾಜಿಕ ಬಹಿಷ್ಕಾರವನ್ನು ಈ ಕೂಡಲೇ ತೆಗೆಯಬೇಕು. ಗ್ರಾಮಕ್ಕೆ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಬೇಕು. ಹಲ್ಲೆ ಮಾಡಿದವರಿಗೆ ಶಾಸಕರ ಬೆಂಬಲ ಇದೆ, ಅವರು ಸಾಮಾಜಿಕ ನ್ಯಾಯಯದ ಪರವಾಗಿ ಇರಬೇಕು. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಂಡು, ಥಳಿತಕ್ಕೆ ಒಳಗಾದ ದಲಿತ ಯುವಕನಿಗೆ ಸರ್ಕಾರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

‘ಹೊಸ ವರ್ಷದ ದಿನದಂದು ಗ್ರಾಮದ ಗೊಲ್ಲ ಬೀದಿಯ ನಿವಾಸಿಗಳು ಮಾರುತಿ (34) ಎಂಬ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ತರೀಕೆರೆ ವೃತ್ತ ನಿರೀಕ್ಷಕ ವೀರೇಂದ್ರ ತಿಳಿಸಿದ್ದಾರೆ.

‘ನಾವು 30-35 ಜನರ ವಿರುದ್ಧ ಭಾರತೀಯ ದಂಡನೆಯ ಸೆಕ್ಷನ್ 143 (ಕಾನೂನುಬಾಹಿರ ಸಭೆ), 149 (ಕಾನೂನುಬಾಹಿರ ಸಭೆ), 504 (ಉದ್ದೇಶಪೂರ್ವಕ ಅವಮಾನ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಜೀವ ಬೆದರಿಕೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದೇವೆ. ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿಯೂ ತನಿಖೆ ನಡೆಯುತ್ತಿದೆ’ ಎಂದು ವೀರೇಂದ್ರ ಹೇಳಿದರು.

‘ಗೊಲ್ಲ ಸಮುದಾಯದ ಜನರು ಮಾರುತಿಯವರ ದಲಿತ ಗುರುತನ್ನು ಆಧರಿಸಿ, ಧಾರ್ಮಿಕ ಭಾವನೆಗಳನ್ನು ಕೆರಳಿಸಿದ್ದಾರೆ. ದಲಿತರು ದೇವಸ್ಥಾನದ ಬಳಿ ಬುರುವುದು ಸೂಕ್ತವಲ್ಲ ಎಂದು ಹಲ್ಲೆ ಮಾಡಿದ್ದಾರೆ’ ಎಂದು ದಸಂಸ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಮಾರುತಿ ಮೇಲಿನ ಹಲ್ಲೆಗೆ ಪ್ರತಿಯಾಗಿ ದಲಿತ ಮುಖಂಡರು ಗ್ರಾಮದಲ್ಲಿ ಮೆರವಣಿಗೆ ನಡೆಸಿದ್ದಾರೆ. ದಲಿತರ ಮೇಲಿನ ಹಿಂಸಾಚಾರವನ್ನು ವಿರೋಧಿಸಿ, ಸಂತ್ರಸ್ತ ಮಾರುತಿಗೆ ನ್ಯಾಯಕ್ಕಾಗಿ ಒತ್ತಾಯಿಸಿದರು. ಕೆಲವು ದಲಿತ ಮುಖಂಡರು ದೇವಸ್ಥಾನವನ್ನು ಪ್ರವೇಶಿಸಲು ಮುಂದಾದರು; ಕೂಡಲೇ ದೇವಾಲಯವನ್ನು ಮುಚ್ಚಲಾಯಿತು. ತಹಶೀಲ್ದಾರ್ ರಾಜೀವ್ ಮತ್ತು ಪೊಲೀಸರ ಮಧ್ಯಪ್ರವೇಶದಿಂದ ಮುಖಂಡರು ತಣ್ಣಗಾಗಿದ್ದಾರೆ.

ಹಲ್ಲೆಗೊಳಗಾದ ಮಾರುತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಹಿಂದಿನ ದಿನಗಳಲ್ಲಿ, ದಲಿತರಿಗೆ ಗೊಲ್ಲರ ಬೀದಿಗೆ ಪ್ರವೇಶಿಸಲು ಅವಕಾಶವಿರಲಿಲ್ಲ. ಆದರೆ ಈಗ ಪರಿಸ್ಥಿತಿ ಸಾಕಷ್ಟು ಬದಲಾಗಿದ್ದು, ಜಾತಿ ಆಧಾರಿತ ತಾರತಮ್ಯವಿಲ್ಲ’ ಎಂದು ಗೊಲ್ಲ ಸಮುದಾಯದ ಮುಖಂಡ ಹನುಮಪ್ಪ ಸುದ್ದಿಗಾರರಿಗೆ ತಿಳಿಸಿದರು. ದಲಿತ ಯುವಕನ ಮೇಲಿನ ಹಲ್ಲೆಯು ಕೇವಲ ವೈಯಕ್ತಿಕ ನೆಲೆಯಲ್ಲಿ ಆಗಿದೆಯೇ ಹೊರತು ಜಾತಿ ಆಧಾರಿತ ತಾರತಮ್ಯವಲ್ಲ. ಆದರೆ ದಲಿತ ಸಮುದಾಯವು ಸುಳ್ಳು ಆರೋಪ ಹೊರಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...