Homeಮುಖಪುಟಮತಾಂತರದ ಆರೋಪ: ದಲಿತ ಯುವಕನಿಗೆ ಥಳಿಸಿ, ತಲೆ ಬೋಳಿಸಿ, ತಲೆಕೆಳಗಾಗಿಸಿ ಮೆರವಣಿಗೆ

ಮತಾಂತರದ ಆರೋಪ: ದಲಿತ ಯುವಕನಿಗೆ ಥಳಿಸಿ, ತಲೆ ಬೋಳಿಸಿ, ತಲೆಕೆಳಗಾಗಿಸಿ ಮೆರವಣಿಗೆ

- Advertisement -
- Advertisement -

ಖಗಾ (ಫತೇಪುರ್):  ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾನೆ ಎಂದು ಆರೋಪಿಸಿ ದಲಿತ ಯುವಕನಿಗೆ ಥಳಿಸಿ, ಬೆದರಿಕೆ ಹಾಕಿ, ತಲೆಕೆಳಗಾಗಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಪ್ರಕರಣ ಉತ್ತರಪ್ರದೇಶದ ಫತೇಪುರ್ ನಲ್ಲಿ ಬೆಳಕಿಗೆ ಬಂದಿದೆ. ಇದರ ವಿಡಿಯೋ ಕೂಡ ಮಾಡಲಾಗಿದ್ದು, ವೈರಲ್ ಆಗಿದೆ.

ಖಗಾ ಕೊತ್ವಾಲಿಯ ಅಲೈ ಗ್ರಾಮದಿಂದ ಈ ಘಟನೆ ವರದಿಯಾಗಿದೆ. ಸಂತ್ರಸ್ತ ಯುವಕ ಭಜರಂಗದಳದ ಕಾರ್ಯಕರ್ತರ ವಿರುದ್ಧ ಆರೋಪಿಸಿ ದೂರು ನೀಡಿದ್ದಾನೆ. ಶುಕ್ರವಾರ ಸಂಜೆ ಈ ವೀಡಿಯೊ ವೈರಲ್ ಆಗಿದೆ.  ವೈರಲ್ ಆಗಿರುವ ವಿಡಿಯೋ ತನ್ನ ಗಮನಕ್ಕೆ ಬಂದಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಅಲೈ ಗ್ರಾಮದ ಶಿವಬರನ್ ಪಾಸ್ವಾನ್ ಅವರು, ಗುರುವಾರ ತಮ್ಮ ಮಗನ ಚಿಕಿತ್ಸೆಗೆ ಹೋಗುತ್ತಿದ್ದಾಗ, ಆ ಪ್ರದೇಶದ ಬಜರಂಗದಳದ ಕಾರ್ಯಕರ್ತ ರೋಹಿತ್ ಕೆಲವು ಸ್ನೇಹಿತರೊಂದಿಗೆ ನನ್ನನ್ನು ಸುತ್ತುವರೆದರು. ಧಾರ್ಮಿಕ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪ ಮಾಡುತ್ತಾ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಶುಕ್ರವಾರ ಬೆಳಗ್ಗೆ ಉನ್ನಾವೊದಿಂದ ಹಿಂತಿರುಗಿದಾಗ ಬಜರಂಗದಳ ಕಾರ್ಯಕರ್ತರು ನನ್ನನ್ನು ಹಿಡಿದು ಈ ಕೃತ್ಯ ಎಸೆಗಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನ ಹೆಂಡತಿ ಮತ್ತು ಮಕ್ಕಳಿಗೆ ಹೊಡೆದು, ಬಲವಂತವಾಗಿ ನನ್ನ ತಲೆ ಬೋಳಿಸಿ ಊರೆಲ್ಲ ಸುತ್ತಿ ಥಳಿಸಿದರು.  ಹಲವಾರು ಗಂಟೆಗಳ ಕಾಲ ಸುತ್ತಾಡಿಸಿದ ನಂತರ, ಅವರು ನನ್ನನ್ನು ಗ್ರಾಮದ ಹೊರಗಿನ ದೇವಸ್ಥಾನಕ್ಕೆ ಕರೆದೊಯ್ದರು. ಬಲವಂತವಾಗಿ ತಲೆಬಾಗಿಸಿ, ಪೂಜೆ ಮಾಡುವಂತೆ ಒತ್ತಾಯಿಸಿದರು. ಪೊಲೀಸರಿಗೆ ದೂರು ನೀಡಿದರೂ ವರದಿ ಕ್ರಮಕೈಗೊಂಡಿಲ್ಲ. ಪೊಲೀಸ್ ಠಾಣೆಯ ಹೊರಗೂ ಬಜರಂಗದಳದವರು ನನ್ನನ್ನು ಸುತ್ತುವರಿದಿದ್ದರು ಎಂದು ಪಾಸ್ವಾನ್ ಹೇಳಿದ್ದಾರೆ.

ಘಟನೆಯಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದೆ. ಎರಡು ವರ್ಷಗಳ ಹಿಂದೆ ಸಂತ್ರಸ್ತ ಯುವಕನ ವಿರುದ್ಧ ಧರ್ಮ ಮತಾಂತರ ಪ್ರಕರಣ ದಾಖಲಾಗಿತ್ತು ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ, ಬಜರಂಗದಳದ ಜಿಲ್ಲಾ ಸಂಚಾಲಕ ರಾಜು ಸೋನಕರ್ ಮಾತನಾಡಿ, ಅಲೈ ಗ್ರಾಮದಲ್ಲಿ ಈ ರೀತಿಯ ಘಟನೆ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ. ನಾನು ವೈಯಕ್ತಿಕ ಕಾರಣಗಳಿಂದ ಫತೇಪುರದಿಂದ ಹೊರಗಿದ್ದೇನೆ ಎಂದು ಹೇಳಿದ್ದಾರೆ. ವಿಎಚ್‌ಪಿ ಜಿಲ್ಲಾಧ್ಯಕ್ಷ ಕೆ.ಕೆ. ಮಿಶ್ರಾ ಹಲ್ಲೆ ಆರೋಪವನ್ನು ತಳ್ಳಿಹಾಕಿದ್ದು, ಯುವಕನನ್ನು ಮನೆಗೆ ಮರಳುವಂತೆ ಮಾಡಲಾಗಿದೆ. ಅವರು ತಮ್ಮ ಸ್ವಂತ ಇಚ್ಛೆಯ ಮೇರೆಗೆ ಹಿಂದೂ ಧರ್ಮಕ್ಕೆ ಮರಳಿದ್ದಾರೆ ಮತ್ತು ಎಲ್ಲಾ ಹಿಂದೂ ಆಚರಣೆಗಳನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಯುವಕನು ಥಳಿಸಲಾಗಿದೆ ಮತ್ತು ಬಲವಂತವಾಗಿ ಗ್ರಾಮದ ಸುತ್ತಲೂ ಕರೆದೊಯ್ಯಲಾಗಿದೆ ಎಂದು ಫತೇಪುರ್ ಎಸ್ಪಿ ಧವಲ್ ಜೈಸ್ವಾಲ್ ಆರೋಪಿಸಿದ್ದಾರೆ.

ಯುವಕನ ಆಸೆಯಂತೆ ಮನೆಗೆ ಮರಳಿ ಅಂದರೆ ಕ್ರಿಶ್ಚಿಯನ್ ಧರ್ಮದಿಂದ ಹಿಂದೂ ಧರ್ಮಕ್ಕೆ ಕರೆತರಲಾಗಿದೆ ಎಂದು ಒಂದು ಕಡೆ ಹೇಳುತ್ತಾರೆ. ಯುವಕನ ವಿರುದ್ಧ 2022ರಲ್ಲಿ ಧಾರ್ಮಿಕ ಮತಾಂತರ ಪ್ರಕರಣ ದಾಖಲಾಗಿದೆ. ದೂರಿನ ತನಿಖೆ ನಡೆಯುತ್ತಿದೆ. ಇದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹೇಳಿದ್ದಾರೆ.

ಹವ್ಯಕರು  ಎರಡಕ್ಕಿಂತ ಹೆಚ್ಚು ಮಕ್ಕಳು ಹೊಂದಿ: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...