Homeಕರ್ನಾಟಕಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ...

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

13ಕ್ಕೂ ಹೆಚ್ಚು ಸವರ್ಣಿಯ ಮಂದಿಯ ಮೇಲೆ ತಾಳಿಕೋಟಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಒಬ್ಬನ್ನನ್ನು ಮಾತ್ರ ವಿಚಾರಣೆ ನಡೆಸಿರುವುದರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

- Advertisement -
- Advertisement -

ಬೈಕ್ ಮುಟ್ಟಿದ್ದನ್ನೆ ನೆಪವಾಗಿಟ್ಟುಕೊಂಡು ದಲಿತ ಯುವಕನನ್ನು ಸವರ್ಣಿಯ ಗುಂಪೊಂದು ಅರೆಬೆತ್ತಲುಗೊಳಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮಿಣಜಗಿ ಗ್ರಾಮದಲ್ಲಿ ಜರುಗಿದೆ.

ಜುಲೈ 18ರ ಶನಿವಾರ ಘಟನೆ ನಡೆದಿದ್ದು, ಸಂತ್ರಸ್ತನ ತಂದೆ ಯಂಕಪ್ಪ ಹುಸೇನಪ್ಪ ತಳವಾರರವರ ನೀಡಿದ ದೂರಿನ ಮೇರೆಗೆ 13ಕ್ಕೂ ಹೆಚ್ಚು ಸವರ್ಣಿಯ ಮಂದಿಯ ಮೇಲೆ ತಾಳಿಕೋಟಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಒಬ್ಬನ್ನನ್ನು ಮಾತ್ರ ವಿಚಾರಣೆ ನಡೆಸಿರುವುದರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

ಘಟನೆಯ ವಿವರ: 28 ವರ್ಷದ ದಲಿತ ಯುವಕ ಕಾಶಿನಾಥ ತಳವಾರ ತನ್ನ ತಂದೆ ಯಂಕಪ್ಪ ಹುಸೇನಪ್ಪ ತಳವಾರರವರ ಜೊತೆ ಜುಲೈ 18ರಂದು ಬೆಳಿಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ 25ಕ್ಕೂ ಹೆಚ್ಚು ಜನರಿದ್ದ ಸವರ್ಣಿಯರ ಗುಂಪು ಆತನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ.

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: ಬಂಧನಕ್ಕೆ ಒತ್ತಾಯ

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

Posted by Naanu Gauri on Monday, July 20, 2020

ವೈರಲ್ ಆಗಿರುವ ಮನಕಲಕುವ ವಿಡಿಯೋದಲ್ಲಿರುವಂತೆ, ಕಾಶಿನಾಥನನ್ನು ಪ್ಯಾಂಟ್ ಕಿತ್ತು ಆತನ ಮೇಲೆ ಕೋಲು ಮತ್ತು ಚಪ್ಪಲಿಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಆತ ಸಹಾಯಕ್ಕಾಗಿ ಅಂಗಲಾಚುತ್ತಿದ್ದರೂ ಸಹ 30ಕ್ಕೂ ಹೆಚ್ಚು ಜನ ಹಲ್ಲೆಯನ್ನು ನಿಂತು ನೋಡುತ್ತಿದ್ದಾರೆಯೇ ಹೊರತು ಯಾರೋಬ್ಬರೂ ಸಹ ಸಹಾಯಕ್ಕೆ ಬಂದಿಲ್ಲ. ಮುಂದೆ ಹೋಗುತ್ತಿದ್ದ ಯುವಕನ ತಂದೆ ಓಡಿಬಂದು ತನ್ನ ಮಗನ್ನನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸವರ್ಣಿಯ ಜಾತಿಗೆ ಸೇರಿದ ಮಹಾಂತೇಶ, ಮುತ್ತಣ್ಣ ಮಹಾದೇವಪ್ಪ, ಶರಣಗೌಡ, ಸಂಗನಗೌಡ ಮುಂತಾದವರು ತನ್ನ ಗಾಡಿ ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂಬ ನೆಪವಿಟ್ಟುಕೊಂಡು ಸಣ್ಣ ಜಾತಿಯವರು ನೀವು, ಕೆಟ್ಟದಾಗಿ ನಿಂದಿಸಿ ಜಾತಿನಿಂದನೆ ಮಾಡಿದ್ದಾರೆ, ನಿಮ್ಮನ್ನು ಜೀವ ಸಹಿತ ಇರಲು ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದಾರೆ, ನನ್ನ ಮಗನನ್ನು ಬಿಡಿಸಿಕೊಳ್ಳಲು ಹೋದಾಗ ನನ್ನ ಮತ್ತು ನನ್ನ ಕುಟುಂಬದವರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ಯಂಕಪ್ಪ ಹುಸೇನಪ್ಪ ತಳವಾರ ಆರೋಪಿಸಿದ್ದಾರೆ.

ಆ ಸಮಯದಲ್ಲಿ ಅದೇ ದಾರಿಯಲ್ಲಿ ಮುದ್ದೇಬಿಹಾಳ ಸಿಪಿಐರವರು ಬಂದ ಕಾರಣ ಆರೋಪಿಗಳು ಓಡಿ ಹೋದರು. ನಂತರ ಆಂಬುಲೆನ್ಸ್‌ನಲ್ಲಿ ನನ್ನ ಮಗನನ್ನು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೂರಿನ ಆಧಾರದಲ್ಲಿ ಸೆಕ್ಷನ್ 143,147, 324, 354, 504, 506, 149 ಮತ್ತು  ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಸೆಕ್ಷನ್‌ಗಳಡಿಯಲ್ಲಿ ತಾಳಿಕೋಟೆ ಪೊಲೀಸರು 13ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅಧಿಕೃತವಾಗಿ ಯಾರನ್ನು ಬಂಧಿಸದಿರುವುದು ದಲಿತ ಮುಖಂಡರಲ್ಲಿ ಆಕ್ರೋಶ ಹುಟ್ಟುಹಾಕಿದೆ.

 

 

 

 

 

 

ವಕೀಲರು ಮತ್ತು ದಲಿತ ವಿದ್ಯಾರ್ಥಿ ಪರಿಷತ್‌ನ ಅಧ್ಯಕ್ಷರಾದ ಶ್ರೀನಾಥ್ ಪೂಜಾರಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ “ದಲಿತ ಯುವಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳೆಲ್ಲರೂ ಮುದ್ದೇಬಿಹಾಳ ಬಿಜೆಪಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿಯವರ ಹಿಂಬಾಲಕರಾಗಿದ್ದಾರೆ. ಶಾಸಕರ ಬೆಂಬಲದಿಂದಲೇ ರಾಜರೋಷವಾಗಿ ಇಂತಹ ಕುಕೃತ್ಯಗಳಲ್ಲಿ ತೊಡಗಿದ್ದಾರೆ. ಈ ಹಿಂದೆಯೂ ಜಾತಿ ವಿಚಾರಕ್ಕೆ ಜಗಳ ನಡೆದಿತ್ತು. ಈಗ ಬೈಕ್ ನೆಪದಲ್ಲಿ ಅಮಾನವೀಯವಾಗಿ ಥಳಿಸಿ, ಓಡಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಬಂಧಿಸಿ ಕಾನೂನುರೀತ್ಯಾ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ವಿಜಯಪುರ ಸಮಾನತೆಯನ್ನು ಸಾರಿದ ಬಸವಣ್ಣನವರ ನಾಡು. ಇಲ್ಲಿ ದಿನನಿತ್ಯ ದಲಿತರ ಮೇಲೆ ದೌರ್ಜನ್ಯ, ಕೊಲೆಗಳು ನಡೆಯುತ್ತಲೇ ಇವೆ. ಕೆಲವು ಮಾತ್ರ ಮಾಧ್ಯಮಗಳ ಕಣ್ಣಿವೆ ಬೀಳುತ್ತಿವೆ. ಇದರ ಕುರಿತು ಪ್ರಜ್ಞಾವಂತರು ದೊಡ್ಡ ಮಟ್ಟದ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ- ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದೇ ರೀತಿ ಅವರಿಗೂ ರೊಡಲ್ಲಿ ಹಾಕಿ ಬಾರಿಸಬೇಕು.
    ಅವಾಗ ಅವರಿಗೆ ಬುದ್ದಿಬರಬಹುದು.

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...