Homeಕರ್ನಾಟಕಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ...

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

13ಕ್ಕೂ ಹೆಚ್ಚು ಸವರ್ಣಿಯ ಮಂದಿಯ ಮೇಲೆ ತಾಳಿಕೋಟಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಒಬ್ಬನ್ನನ್ನು ಮಾತ್ರ ವಿಚಾರಣೆ ನಡೆಸಿರುವುದರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

- Advertisement -
- Advertisement -

ಬೈಕ್ ಮುಟ್ಟಿದ್ದನ್ನೆ ನೆಪವಾಗಿಟ್ಟುಕೊಂಡು ದಲಿತ ಯುವಕನನ್ನು ಸವರ್ಣಿಯ ಗುಂಪೊಂದು ಅರೆಬೆತ್ತಲುಗೊಳಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮಿಣಜಗಿ ಗ್ರಾಮದಲ್ಲಿ ಜರುಗಿದೆ.

ಜುಲೈ 18ರ ಶನಿವಾರ ಘಟನೆ ನಡೆದಿದ್ದು, ಸಂತ್ರಸ್ತನ ತಂದೆ ಯಂಕಪ್ಪ ಹುಸೇನಪ್ಪ ತಳವಾರರವರ ನೀಡಿದ ದೂರಿನ ಮೇರೆಗೆ 13ಕ್ಕೂ ಹೆಚ್ಚು ಸವರ್ಣಿಯ ಮಂದಿಯ ಮೇಲೆ ತಾಳಿಕೋಟಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಒಬ್ಬನ್ನನ್ನು ಮಾತ್ರ ವಿಚಾರಣೆ ನಡೆಸಿರುವುದರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

ಘಟನೆಯ ವಿವರ: 28 ವರ್ಷದ ದಲಿತ ಯುವಕ ಕಾಶಿನಾಥ ತಳವಾರ ತನ್ನ ತಂದೆ ಯಂಕಪ್ಪ ಹುಸೇನಪ್ಪ ತಳವಾರರವರ ಜೊತೆ ಜುಲೈ 18ರಂದು ಬೆಳಿಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ 25ಕ್ಕೂ ಹೆಚ್ಚು ಜನರಿದ್ದ ಸವರ್ಣಿಯರ ಗುಂಪು ಆತನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ.

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: ಬಂಧನಕ್ಕೆ ಒತ್ತಾಯ

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

Posted by Naanu Gauri on Monday, July 20, 2020

ವೈರಲ್ ಆಗಿರುವ ಮನಕಲಕುವ ವಿಡಿಯೋದಲ್ಲಿರುವಂತೆ, ಕಾಶಿನಾಥನನ್ನು ಪ್ಯಾಂಟ್ ಕಿತ್ತು ಆತನ ಮೇಲೆ ಕೋಲು ಮತ್ತು ಚಪ್ಪಲಿಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಆತ ಸಹಾಯಕ್ಕಾಗಿ ಅಂಗಲಾಚುತ್ತಿದ್ದರೂ ಸಹ 30ಕ್ಕೂ ಹೆಚ್ಚು ಜನ ಹಲ್ಲೆಯನ್ನು ನಿಂತು ನೋಡುತ್ತಿದ್ದಾರೆಯೇ ಹೊರತು ಯಾರೋಬ್ಬರೂ ಸಹ ಸಹಾಯಕ್ಕೆ ಬಂದಿಲ್ಲ. ಮುಂದೆ ಹೋಗುತ್ತಿದ್ದ ಯುವಕನ ತಂದೆ ಓಡಿಬಂದು ತನ್ನ ಮಗನ್ನನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸವರ್ಣಿಯ ಜಾತಿಗೆ ಸೇರಿದ ಮಹಾಂತೇಶ, ಮುತ್ತಣ್ಣ ಮಹಾದೇವಪ್ಪ, ಶರಣಗೌಡ, ಸಂಗನಗೌಡ ಮುಂತಾದವರು ತನ್ನ ಗಾಡಿ ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂಬ ನೆಪವಿಟ್ಟುಕೊಂಡು ಸಣ್ಣ ಜಾತಿಯವರು ನೀವು, ಕೆಟ್ಟದಾಗಿ ನಿಂದಿಸಿ ಜಾತಿನಿಂದನೆ ಮಾಡಿದ್ದಾರೆ, ನಿಮ್ಮನ್ನು ಜೀವ ಸಹಿತ ಇರಲು ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದಾರೆ, ನನ್ನ ಮಗನನ್ನು ಬಿಡಿಸಿಕೊಳ್ಳಲು ಹೋದಾಗ ನನ್ನ ಮತ್ತು ನನ್ನ ಕುಟುಂಬದವರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ಯಂಕಪ್ಪ ಹುಸೇನಪ್ಪ ತಳವಾರ ಆರೋಪಿಸಿದ್ದಾರೆ.

ಆ ಸಮಯದಲ್ಲಿ ಅದೇ ದಾರಿಯಲ್ಲಿ ಮುದ್ದೇಬಿಹಾಳ ಸಿಪಿಐರವರು ಬಂದ ಕಾರಣ ಆರೋಪಿಗಳು ಓಡಿ ಹೋದರು. ನಂತರ ಆಂಬುಲೆನ್ಸ್‌ನಲ್ಲಿ ನನ್ನ ಮಗನನ್ನು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೂರಿನ ಆಧಾರದಲ್ಲಿ ಸೆಕ್ಷನ್ 143,147, 324, 354, 504, 506, 149 ಮತ್ತು  ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಸೆಕ್ಷನ್‌ಗಳಡಿಯಲ್ಲಿ ತಾಳಿಕೋಟೆ ಪೊಲೀಸರು 13ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅಧಿಕೃತವಾಗಿ ಯಾರನ್ನು ಬಂಧಿಸದಿರುವುದು ದಲಿತ ಮುಖಂಡರಲ್ಲಿ ಆಕ್ರೋಶ ಹುಟ್ಟುಹಾಕಿದೆ.

 

 

 

 

 

 

ವಕೀಲರು ಮತ್ತು ದಲಿತ ವಿದ್ಯಾರ್ಥಿ ಪರಿಷತ್‌ನ ಅಧ್ಯಕ್ಷರಾದ ಶ್ರೀನಾಥ್ ಪೂಜಾರಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ “ದಲಿತ ಯುವಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳೆಲ್ಲರೂ ಮುದ್ದೇಬಿಹಾಳ ಬಿಜೆಪಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿಯವರ ಹಿಂಬಾಲಕರಾಗಿದ್ದಾರೆ. ಶಾಸಕರ ಬೆಂಬಲದಿಂದಲೇ ರಾಜರೋಷವಾಗಿ ಇಂತಹ ಕುಕೃತ್ಯಗಳಲ್ಲಿ ತೊಡಗಿದ್ದಾರೆ. ಈ ಹಿಂದೆಯೂ ಜಾತಿ ವಿಚಾರಕ್ಕೆ ಜಗಳ ನಡೆದಿತ್ತು. ಈಗ ಬೈಕ್ ನೆಪದಲ್ಲಿ ಅಮಾನವೀಯವಾಗಿ ಥಳಿಸಿ, ಓಡಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಬಂಧಿಸಿ ಕಾನೂನುರೀತ್ಯಾ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ವಿಜಯಪುರ ಸಮಾನತೆಯನ್ನು ಸಾರಿದ ಬಸವಣ್ಣನವರ ನಾಡು. ಇಲ್ಲಿ ದಿನನಿತ್ಯ ದಲಿತರ ಮೇಲೆ ದೌರ್ಜನ್ಯ, ಕೊಲೆಗಳು ನಡೆಯುತ್ತಲೇ ಇವೆ. ಕೆಲವು ಮಾತ್ರ ಮಾಧ್ಯಮಗಳ ಕಣ್ಣಿವೆ ಬೀಳುತ್ತಿವೆ. ಇದರ ಕುರಿತು ಪ್ರಜ್ಞಾವಂತರು ದೊಡ್ಡ ಮಟ್ಟದ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ- ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದೇ ರೀತಿ ಅವರಿಗೂ ರೊಡಲ್ಲಿ ಹಾಕಿ ಬಾರಿಸಬೇಕು.
    ಅವಾಗ ಅವರಿಗೆ ಬುದ್ದಿಬರಬಹುದು.

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...