Homeಕರ್ನಾಟಕಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ...

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

13ಕ್ಕೂ ಹೆಚ್ಚು ಸವರ್ಣಿಯ ಮಂದಿಯ ಮೇಲೆ ತಾಳಿಕೋಟಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಒಬ್ಬನ್ನನ್ನು ಮಾತ್ರ ವಿಚಾರಣೆ ನಡೆಸಿರುವುದರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

- Advertisement -
- Advertisement -

ಬೈಕ್ ಮುಟ್ಟಿದ್ದನ್ನೆ ನೆಪವಾಗಿಟ್ಟುಕೊಂಡು ದಲಿತ ಯುವಕನನ್ನು ಸವರ್ಣಿಯ ಗುಂಪೊಂದು ಅರೆಬೆತ್ತಲುಗೊಳಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮಿಣಜಗಿ ಗ್ರಾಮದಲ್ಲಿ ಜರುಗಿದೆ.

ಜುಲೈ 18ರ ಶನಿವಾರ ಘಟನೆ ನಡೆದಿದ್ದು, ಸಂತ್ರಸ್ತನ ತಂದೆ ಯಂಕಪ್ಪ ಹುಸೇನಪ್ಪ ತಳವಾರರವರ ನೀಡಿದ ದೂರಿನ ಮೇರೆಗೆ 13ಕ್ಕೂ ಹೆಚ್ಚು ಸವರ್ಣಿಯ ಮಂದಿಯ ಮೇಲೆ ತಾಳಿಕೋಟಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಒಬ್ಬನ್ನನ್ನು ಮಾತ್ರ ವಿಚಾರಣೆ ನಡೆಸಿರುವುದರಿಂದ ಆರೋಪಿಗಳನ್ನು ಬಂಧಿಸುವಂತೆ ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

ಘಟನೆಯ ವಿವರ: 28 ವರ್ಷದ ದಲಿತ ಯುವಕ ಕಾಶಿನಾಥ ತಳವಾರ ತನ್ನ ತಂದೆ ಯಂಕಪ್ಪ ಹುಸೇನಪ್ಪ ತಳವಾರರವರ ಜೊತೆ ಜುಲೈ 18ರಂದು ಬೆಳಿಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ 25ಕ್ಕೂ ಹೆಚ್ಚು ಜನರಿದ್ದ ಸವರ್ಣಿಯರ ಗುಂಪು ಆತನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ.

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: ಬಂಧನಕ್ಕೆ ಒತ್ತಾಯ

ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

Posted by Naanu Gauri on Monday, July 20, 2020

ವೈರಲ್ ಆಗಿರುವ ಮನಕಲಕುವ ವಿಡಿಯೋದಲ್ಲಿರುವಂತೆ, ಕಾಶಿನಾಥನನ್ನು ಪ್ಯಾಂಟ್ ಕಿತ್ತು ಆತನ ಮೇಲೆ ಕೋಲು ಮತ್ತು ಚಪ್ಪಲಿಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಆತ ಸಹಾಯಕ್ಕಾಗಿ ಅಂಗಲಾಚುತ್ತಿದ್ದರೂ ಸಹ 30ಕ್ಕೂ ಹೆಚ್ಚು ಜನ ಹಲ್ಲೆಯನ್ನು ನಿಂತು ನೋಡುತ್ತಿದ್ದಾರೆಯೇ ಹೊರತು ಯಾರೋಬ್ಬರೂ ಸಹ ಸಹಾಯಕ್ಕೆ ಬಂದಿಲ್ಲ. ಮುಂದೆ ಹೋಗುತ್ತಿದ್ದ ಯುವಕನ ತಂದೆ ಓಡಿಬಂದು ತನ್ನ ಮಗನ್ನನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸವರ್ಣಿಯ ಜಾತಿಗೆ ಸೇರಿದ ಮಹಾಂತೇಶ, ಮುತ್ತಣ್ಣ ಮಹಾದೇವಪ್ಪ, ಶರಣಗೌಡ, ಸಂಗನಗೌಡ ಮುಂತಾದವರು ತನ್ನ ಗಾಡಿ ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂಬ ನೆಪವಿಟ್ಟುಕೊಂಡು ಸಣ್ಣ ಜಾತಿಯವರು ನೀವು, ಕೆಟ್ಟದಾಗಿ ನಿಂದಿಸಿ ಜಾತಿನಿಂದನೆ ಮಾಡಿದ್ದಾರೆ, ನಿಮ್ಮನ್ನು ಜೀವ ಸಹಿತ ಇರಲು ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದಾರೆ, ನನ್ನ ಮಗನನ್ನು ಬಿಡಿಸಿಕೊಳ್ಳಲು ಹೋದಾಗ ನನ್ನ ಮತ್ತು ನನ್ನ ಕುಟುಂಬದವರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ಯಂಕಪ್ಪ ಹುಸೇನಪ್ಪ ತಳವಾರ ಆರೋಪಿಸಿದ್ದಾರೆ.

ಆ ಸಮಯದಲ್ಲಿ ಅದೇ ದಾರಿಯಲ್ಲಿ ಮುದ್ದೇಬಿಹಾಳ ಸಿಪಿಐರವರು ಬಂದ ಕಾರಣ ಆರೋಪಿಗಳು ಓಡಿ ಹೋದರು. ನಂತರ ಆಂಬುಲೆನ್ಸ್‌ನಲ್ಲಿ ನನ್ನ ಮಗನನ್ನು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೂರಿನ ಆಧಾರದಲ್ಲಿ ಸೆಕ್ಷನ್ 143,147, 324, 354, 504, 506, 149 ಮತ್ತು  ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಸೆಕ್ಷನ್‌ಗಳಡಿಯಲ್ಲಿ ತಾಳಿಕೋಟೆ ಪೊಲೀಸರು 13ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಇದುವರೆಗೂ ಅಧಿಕೃತವಾಗಿ ಯಾರನ್ನು ಬಂಧಿಸದಿರುವುದು ದಲಿತ ಮುಖಂಡರಲ್ಲಿ ಆಕ್ರೋಶ ಹುಟ್ಟುಹಾಕಿದೆ.

 

 

 

 

 

 

ವಕೀಲರು ಮತ್ತು ದಲಿತ ವಿದ್ಯಾರ್ಥಿ ಪರಿಷತ್‌ನ ಅಧ್ಯಕ್ಷರಾದ ಶ್ರೀನಾಥ್ ಪೂಜಾರಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ “ದಲಿತ ಯುವಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳೆಲ್ಲರೂ ಮುದ್ದೇಬಿಹಾಳ ಬಿಜೆಪಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿಯವರ ಹಿಂಬಾಲಕರಾಗಿದ್ದಾರೆ. ಶಾಸಕರ ಬೆಂಬಲದಿಂದಲೇ ರಾಜರೋಷವಾಗಿ ಇಂತಹ ಕುಕೃತ್ಯಗಳಲ್ಲಿ ತೊಡಗಿದ್ದಾರೆ. ಈ ಹಿಂದೆಯೂ ಜಾತಿ ವಿಚಾರಕ್ಕೆ ಜಗಳ ನಡೆದಿತ್ತು. ಈಗ ಬೈಕ್ ನೆಪದಲ್ಲಿ ಅಮಾನವೀಯವಾಗಿ ಥಳಿಸಿ, ಓಡಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಬಂಧಿಸಿ ಕಾನೂನುರೀತ್ಯಾ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ವಿಜಯಪುರ ಸಮಾನತೆಯನ್ನು ಸಾರಿದ ಬಸವಣ್ಣನವರ ನಾಡು. ಇಲ್ಲಿ ದಿನನಿತ್ಯ ದಲಿತರ ಮೇಲೆ ದೌರ್ಜನ್ಯ, ಕೊಲೆಗಳು ನಡೆಯುತ್ತಲೇ ಇವೆ. ಕೆಲವು ಮಾತ್ರ ಮಾಧ್ಯಮಗಳ ಕಣ್ಣಿವೆ ಬೀಳುತ್ತಿವೆ. ಇದರ ಕುರಿತು ಪ್ರಜ್ಞಾವಂತರು ದೊಡ್ಡ ಮಟ್ಟದ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ- ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಅದೇ ರೀತಿ ಅವರಿಗೂ ರೊಡಲ್ಲಿ ಹಾಕಿ ಬಾರಿಸಬೇಕು.
    ಅವಾಗ ಅವರಿಗೆ ಬುದ್ದಿಬರಬಹುದು.

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...