Homeಮುಖಪುಟದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ: ಮಧ್ಯಪ್ರದೇಶದಲ್ಲಿ ಮುಂದುವರೆದ ಜಾತಿ ದೌರ್ಜನ್ಯ

ದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ: ಮಧ್ಯಪ್ರದೇಶದಲ್ಲಿ ಮುಂದುವರೆದ ಜಾತಿ ದೌರ್ಜನ್ಯ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಇತ್ತಿಚೆಗೆ ಆದಿವಾಸಿ ವ್ಯಕ್ತಿ ಮೇಲೆ ಬಿಜೆಪಿ ಮುಖಂಡನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಮತ್ತೊಂದು ಆಘಾತಕಾರಿ, ಹೇಯ ಕೃತ್ಯ ಬಹಿರಂಗವಾಗಿದೆ. ಇಬ್ಬರು ದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ ಮಾಡಲಾಗಿದೆ.

ಮಧ್ಯಪ್ರದೇಶದ ಶಿವಗಿರಿ ಎಂಬಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತ ಯುವಕರ ಮುಖಕ್ಕೆ ಮಸಿ ಬಳಿದು, ಮಲ ತಿನಿಸಿ, ಚಪ್ಪಲಿ ಹಾರ ಹಾಕಿ ಊರೆಲ್ಲಾ ಮೆರವಣಿಗೆ ಮಾಡಲಾಗಿದೆ. ಅಲ್ಲದೆ ಅವರ ಮನೆಯನ್ನೂ ದ್ವಂಸ ಮಾಡಲಾಗಿದೆ.

ಈ ಘಟನೆ ಜೂನ್​ 30ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 7 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಶಿವಪುರಿ ಎಸ್‌ಪಿ ರಘುವಂಶ್ ಸಿಂಗ್ ಭಡೋರಿಯಾ, ಜೂನ್ 30 ರಂದು ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ದಲಿತ ಯುವಕರ ಮೇಲೆ ದೌರ್ಜನ್ಯ ನಡೆದಿತ್ತು. ದೌರ್ಜನ್ಯ ನಡೆಸಿರುವ ವಿಡಿಯೋ ಬುಧವಾರ ವೈರಲ್ ಆದ ಬಳಿಕ ಕೃತ್ಯ ಬೆಳಕಿಗೆ ಬಂದಿದೆ” ಎಂದು ತಿಳಿಸಿದ್ದಾರೆ.

”ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ನಿರ್ದೇಶನದ ಮೇರೆಗೆ ಯುವಕರ ಮೇಲೆ ದೌರ್ಜನ್ಯ ನಡೆಸಿದ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣದಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿ ಕೇಸ್ ಹಾಕಲಾಗಿದೆ” ಎಂದು ತಿಳಿಸಿದರು.

”ಆರೋಪಿ ಕುಟುಂಬದ ಯುವತಿ(26)ಯೊಂದಿಗೆ 23 ಮತ್ತು 24 ವರ್ಷ ವಯಸ್ಸಿನ ಇಬ್ಬರು ದಲಿತ ಯುವಕರು ಫೋನ್‌ನಲ್ಲಿ ಮಾತನಾಡಿದ್ದಾರೆ. ಈ ವಿಷಯ ತಿಳಿದ ಮನೆಯವರು ಆ ಇಬ್ಬರು ಯುವಕರನ್ನು ಮನೆಗೆ ಕರೆಸುವಂತೆ ಯುವತಿಗೆ ಒತ್ತಾಯಿಸಿದ್ದಾರೆ. ಅದರಂತೆ ಯುವಕರ ಜೂನ್ 30ರಂದು ಯುವತಿಯ ಮನೆಗೆ ಬಂದಾಗ ಕುಟುಂಬಸ್ಥರೆಲ್ಲ ಸೇರಿಕೊಂಡು ಯುವಕರ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಕಪ್ಪು ಮಸಿ ಬಳಿದು, ಮಲವನ್ನು ತಿನ್ನುವಂತೆ ಒತ್ತಾಯಿಸಿದ್ದಾರೆ. ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ” ಎಂದು ಎಸ್​ಪಿ ಭಡೋರಿಯಾ ಹೇಳಿದ್ದಾರೆ.

”ತಮ್ಮ ಮನೆಯ ಯುವತಿಗೆ ಕಿರುಕುಳ ನೀಡಿದ್ದಕ್ಕಾಗಿ ಮತ್ತು ಅನುಚಿತವಾಗಿ ಸ್ಪರ್ಶಿಸಿದ್ದಕ್ಕಾಗಿ ಇಬ್ಬರು ಯುವಕರನ್ನು ಥಳಿಸಿದ್ದಾಗಿ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ತನಿಖೆಯ ಸಂದರ್ಭದಲ್ಲಿ ಕುಟುಂಬದವರ ಹೇಳಿಕೆಗಳು ಸುಳ್ಳು ಎಂದು ಸಾಬೀತಾಗಿದ್ದು ಆರೋಪಿಗಳು ತಮ್ಮನ್ನು ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾರೆ” ಎಂದು ದಲಿತ ಯುವಕರು ಕಣ್ಣೀರಿಟ್ಟಿದ್ದಾರೆ.

”ನಮ್ಮನ್ನು ಭೇಟಿಯಾಗಲು ಕರೆದ ನಂತರ ನಾವು ಅವರ ಮನೆಗೆ ಹೋದೆವು. ನಾವು ಯಾವುದೇ ಅಪರಾಧ ಮಾಡಿಲ್ಲ” ಎಂದು ದೌರ್ಜನ್ಯಕ್ಕೊಳಗಾದ ಇಬ್ಬರು ಯುವಕರು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಆದಿವಾಸಿ ಯುವಕನ ಮುಖದ ಮೇಲೆ ಬಿಜೆಪಿ ಮುಖಂಡನಿಂದ ಮೂತ್ರ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...