Homeಮುಖಪುಟಮೇಲ್ಜಾತಿ ಗೆಳೆಯರ ಊಟದ ತಟ್ಟೆ ಮುಟ್ಟಿದ್ದಕ್ಕೆ ದಲಿತ ಯುವಕನ ಹತ್ಯೆ!

ಮೇಲ್ಜಾತಿ ಗೆಳೆಯರ ಊಟದ ತಟ್ಟೆ ಮುಟ್ಟಿದ್ದಕ್ಕೆ ದಲಿತ ಯುವಕನ ಹತ್ಯೆ!

ಪರಿಶಿಷ್ಟ ಜಾತಿಗೆ ಸೇರಿದ ಕೃಷಿ ಕಾರ್ಮಿಕ ದೇವರಾಜ್ ಅನುರಾಜಿ, ತನ್ನ ಇಬ್ಬರು ಮೇಲ್ಜಾತಿಯ ಗೆಳೆಯರಾದ ಅಪೂರ್ವಾ ಸೋನಿ ಮತ್ತು ಸಂತೋಷ್ ಪಾಲ್ ಅವರ ಊಟವಿದ್ದ ತಟ್ಟೆಯನ್ನು ಮುಟ್ಟಿದ ನಂತರ ಥಳಿತಕ್ಕೆ ಒಳಗಾಗಿದ್ದಾನೆ.

- Advertisement -
- Advertisement -

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಸಮಾರಂಭವೊಂದರಲ್ಲಿ ಮೇಲ್ಜಾತಿ ಗೆಳೆಯರ ಊಟದ ತಟ್ಟೆಯನ್ನು ಮುಟ್ಟಿದನೆಂದು 25 ವರ್ಷದ ದಲಿತ ಯುವಕನನ್ನು ಥಳಿಸಿ ಹತ್ಯೆ ಮಾಡಲಾಗಿದೆ.

ಈ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಕೃಷಿ ಕಾರ್ಮಿಕ ದೇವರಾಜ್ ಅನುರಾಜಿ, ತನ್ನ ಇಬ್ಬರು ಮೇಲ್ಜಾತಿಯ ಗೆಳೆಯರಾದ ಅಪೂರ್ವಾ ಸೋನಿ ಮತ್ತು ಸಂತೋಷ್ ಪಾಲ್ ಅವರ ಊಟದ ತಟ್ಟೆಯನ್ನು ಮುಟ್ಟಿದ ನಂತರ ಥಳಿತಕ್ಕೆ ಒಳಗಾಗಿದ್ದಾನೆ.

ಇದನ್ನೂ ಓದಿ: ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ದೇವರಾಜ್‌ಗೆ ರಕ್ತಸ್ರಾವವಾಗುವವರೆಗೂ ಕೋಲುಗಳಿಂದ ಹೊಡೆಯಲಾಗಿದೆ. ಆತ ಮೂರ್ಛೆ ಹೋದ ನಂತರ ‘ಈತ ಗಾಯಗೊಂಡಿದ್ದಾನೆ’ ಎಂದು ಆತನ ಮನೆಗೆ ಸಾಗಿಸಿದರು. ನಂತರ ಸಂಜೆ 7 ರ ಸುಮಾರಿಗೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಒತ್ತಾಯ: ದಲಿತರ ಗುಡಿಸಲು ಸುಟ್ಟ ಮೇಲ್ಜಾತಿಯವರು!

“ಮೃತ ಮತ್ತು ಆರೋಪಿಗಳು ಒಂದೇ ಹಳ್ಳಿಯವರು. ಪಾರ್ಟಿಯಲ್ಲಿ ತಮ್ಮ ಸ್ನೇಹಿತರ ಊಟದ ತಟ್ಟೆಯನ್ನು ಮುಟ್ಟಿದ್ದಕ್ಕಾಗಿ ಅವರು ದೇವರಾಜ್‌ನನ್ನು ಕೊಂದಿದ್ದಾರೆ” ಎಂದು ಗೌರಿಹಾರ್ ಪೊಲೀಸ್ ಠಾಣೆಯ ಟೌನ್ ಇನ್ಸ್‌ಪೆಕ್ಟರ್ ಜಸ್ವಂತ್ ಸಿಂಗ್ ರಜಪೂತ್ ಹೇಳಿದ್ದಾರೆ.

ಪರಾರಿಯಾಗಿದ್ದ ಆರೋಪಿಗಳ ಮೇಲೆ ಗೌರಿಹಾರ್ ಪೊಲೀಸರು ಕೊಲೆ ಮತ್ತು ದಲಿತರ ಮೇಲಿನ ದೌರ್ಜನ್ಯದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ಇದು ಯಡಿಯೂರಪ್ಪನವರ ’ಜಾತಿಗೊಂದು ನಿಗಮ’ವಷ್ಟೇ ಅಲ್ಲ, ಬಿಜೆಪಿಯ ಅಪಾಯಕಾರಿ ವೈದಿಕಶಾಹಿ ವರಸೆ!

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302, 34 ಮತ್ತು ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ರಜಪೂತ್ ತಿಳಿಸಿದ್ದಾರೆ.

“ಆರೋಪಿಗಳನ್ನು ಹುಡುಕಲಾಗುತ್ತಿದೆ. ಅತೀ ಶೀಘ್ರದಲ್ಲಿ ಅವರನ್ನು ಜೈಲಿಗೆ ಕಳುಹಿಸಲಾಗುವುದು. ಜೊತೆಗೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯನ್ವಯ ಸಂತ್ರಸ್ತರ ಕುಟುಂಬಕ್ಕೆ 8.25 ಲಕ್ಷ ರೂ. ಪರಿಹಾರ ಧನ ಸೇರಿದಂತೆ ಇತರ ಪ್ರಯೋಜನಗಳು ಸಿಗಲಿವೆ” ಎಂದು ಛತ್ತರ್‌ಪುರ ಜಿಲ್ಲೆಯ ಎಎಸ್‌ಪಿ ಹೇಳಿದರು.

ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ಮಧ್ಯಪ್ರದೇಶದಲ್ಲಿ ದಲಿತರ ವಿರುದ್ಧದ ಅಪರಾಧ ಹೊಸದೇನಲ್ಲ.

ಕೇವಲ ಹದಿನೈದು ದಿನಗಳ ಹಿಂದೆ, ಸಿಗರೇಟ್ ಹಚ್ಚಲು ಬೆಂಕಿಕಡ್ಡಿ ನೀಡಲು ನಿರಾಕರಿಸಿದ ಕಾರಣಕ್ಕೆ ಗುನಾ ಜಿಲ್ಲೆಯ ಕರೋಡ್ ಗ್ರಾಮದ ನಿವಾಸಿ 50 ವರ್ಷದ ದಲಿತ ಲಾಲ್ಜಿರಾಮ್ ಅಹಿರ್ವಾರ್ ಅವರ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ.


ಇದನ್ನೂ ಓದಿ: ಜಾತಿ ದ್ವೇಷ: ದಲಿತ ಕುಟುಂಬವನ್ನು ಕೊಲ್ಲಲು ತಂದೆಯಿಂದಲೇ ಮಗನಿಗೆ ಪ್ರಚೋದನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...