Homeಮುಖಪುಟಮೇಲ್ಜಾತಿ ಗೆಳೆಯರ ಊಟದ ತಟ್ಟೆ ಮುಟ್ಟಿದ್ದಕ್ಕೆ ದಲಿತ ಯುವಕನ ಹತ್ಯೆ!

ಮೇಲ್ಜಾತಿ ಗೆಳೆಯರ ಊಟದ ತಟ್ಟೆ ಮುಟ್ಟಿದ್ದಕ್ಕೆ ದಲಿತ ಯುವಕನ ಹತ್ಯೆ!

ಪರಿಶಿಷ್ಟ ಜಾತಿಗೆ ಸೇರಿದ ಕೃಷಿ ಕಾರ್ಮಿಕ ದೇವರಾಜ್ ಅನುರಾಜಿ, ತನ್ನ ಇಬ್ಬರು ಮೇಲ್ಜಾತಿಯ ಗೆಳೆಯರಾದ ಅಪೂರ್ವಾ ಸೋನಿ ಮತ್ತು ಸಂತೋಷ್ ಪಾಲ್ ಅವರ ಊಟವಿದ್ದ ತಟ್ಟೆಯನ್ನು ಮುಟ್ಟಿದ ನಂತರ ಥಳಿತಕ್ಕೆ ಒಳಗಾಗಿದ್ದಾನೆ.

- Advertisement -
- Advertisement -

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಸಮಾರಂಭವೊಂದರಲ್ಲಿ ಮೇಲ್ಜಾತಿ ಗೆಳೆಯರ ಊಟದ ತಟ್ಟೆಯನ್ನು ಮುಟ್ಟಿದನೆಂದು 25 ವರ್ಷದ ದಲಿತ ಯುವಕನನ್ನು ಥಳಿಸಿ ಹತ್ಯೆ ಮಾಡಲಾಗಿದೆ.

ಈ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಕೃಷಿ ಕಾರ್ಮಿಕ ದೇವರಾಜ್ ಅನುರಾಜಿ, ತನ್ನ ಇಬ್ಬರು ಮೇಲ್ಜಾತಿಯ ಗೆಳೆಯರಾದ ಅಪೂರ್ವಾ ಸೋನಿ ಮತ್ತು ಸಂತೋಷ್ ಪಾಲ್ ಅವರ ಊಟದ ತಟ್ಟೆಯನ್ನು ಮುಟ್ಟಿದ ನಂತರ ಥಳಿತಕ್ಕೆ ಒಳಗಾಗಿದ್ದಾನೆ.

ಇದನ್ನೂ ಓದಿ: ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ದೇವರಾಜ್‌ಗೆ ರಕ್ತಸ್ರಾವವಾಗುವವರೆಗೂ ಕೋಲುಗಳಿಂದ ಹೊಡೆಯಲಾಗಿದೆ. ಆತ ಮೂರ್ಛೆ ಹೋದ ನಂತರ ‘ಈತ ಗಾಯಗೊಂಡಿದ್ದಾನೆ’ ಎಂದು ಆತನ ಮನೆಗೆ ಸಾಗಿಸಿದರು. ನಂತರ ಸಂಜೆ 7 ರ ಸುಮಾರಿಗೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಒತ್ತಾಯ: ದಲಿತರ ಗುಡಿಸಲು ಸುಟ್ಟ ಮೇಲ್ಜಾತಿಯವರು!

“ಮೃತ ಮತ್ತು ಆರೋಪಿಗಳು ಒಂದೇ ಹಳ್ಳಿಯವರು. ಪಾರ್ಟಿಯಲ್ಲಿ ತಮ್ಮ ಸ್ನೇಹಿತರ ಊಟದ ತಟ್ಟೆಯನ್ನು ಮುಟ್ಟಿದ್ದಕ್ಕಾಗಿ ಅವರು ದೇವರಾಜ್‌ನನ್ನು ಕೊಂದಿದ್ದಾರೆ” ಎಂದು ಗೌರಿಹಾರ್ ಪೊಲೀಸ್ ಠಾಣೆಯ ಟೌನ್ ಇನ್ಸ್‌ಪೆಕ್ಟರ್ ಜಸ್ವಂತ್ ಸಿಂಗ್ ರಜಪೂತ್ ಹೇಳಿದ್ದಾರೆ.

ಪರಾರಿಯಾಗಿದ್ದ ಆರೋಪಿಗಳ ಮೇಲೆ ಗೌರಿಹಾರ್ ಪೊಲೀಸರು ಕೊಲೆ ಮತ್ತು ದಲಿತರ ಮೇಲಿನ ದೌರ್ಜನ್ಯದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ಇದು ಯಡಿಯೂರಪ್ಪನವರ ’ಜಾತಿಗೊಂದು ನಿಗಮ’ವಷ್ಟೇ ಅಲ್ಲ, ಬಿಜೆಪಿಯ ಅಪಾಯಕಾರಿ ವೈದಿಕಶಾಹಿ ವರಸೆ!

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302, 34 ಮತ್ತು ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ರಜಪೂತ್ ತಿಳಿಸಿದ್ದಾರೆ.

“ಆರೋಪಿಗಳನ್ನು ಹುಡುಕಲಾಗುತ್ತಿದೆ. ಅತೀ ಶೀಘ್ರದಲ್ಲಿ ಅವರನ್ನು ಜೈಲಿಗೆ ಕಳುಹಿಸಲಾಗುವುದು. ಜೊತೆಗೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯನ್ವಯ ಸಂತ್ರಸ್ತರ ಕುಟುಂಬಕ್ಕೆ 8.25 ಲಕ್ಷ ರೂ. ಪರಿಹಾರ ಧನ ಸೇರಿದಂತೆ ಇತರ ಪ್ರಯೋಜನಗಳು ಸಿಗಲಿವೆ” ಎಂದು ಛತ್ತರ್‌ಪುರ ಜಿಲ್ಲೆಯ ಎಎಸ್‌ಪಿ ಹೇಳಿದರು.

ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ಮಧ್ಯಪ್ರದೇಶದಲ್ಲಿ ದಲಿತರ ವಿರುದ್ಧದ ಅಪರಾಧ ಹೊಸದೇನಲ್ಲ.

ಕೇವಲ ಹದಿನೈದು ದಿನಗಳ ಹಿಂದೆ, ಸಿಗರೇಟ್ ಹಚ್ಚಲು ಬೆಂಕಿಕಡ್ಡಿ ನೀಡಲು ನಿರಾಕರಿಸಿದ ಕಾರಣಕ್ಕೆ ಗುನಾ ಜಿಲ್ಲೆಯ ಕರೋಡ್ ಗ್ರಾಮದ ನಿವಾಸಿ 50 ವರ್ಷದ ದಲಿತ ಲಾಲ್ಜಿರಾಮ್ ಅಹಿರ್ವಾರ್ ಅವರ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ.


ಇದನ್ನೂ ಓದಿ: ಜಾತಿ ದ್ವೇಷ: ದಲಿತ ಕುಟುಂಬವನ್ನು ಕೊಲ್ಲಲು ತಂದೆಯಿಂದಲೇ ಮಗನಿಗೆ ಪ್ರಚೋದನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....