Homeಮುಖಪುಟದಲಿತ ಯುವಕನ ಹತ್ಯೆ ಪ್ರಕರಣ: ಆಂಧ್ರದ ಮಾಜಿ ಸಚಿವರ ಪುತ್ರ ಪಿನಿಪೆ ಶ್ರೀಕಾಂತ್ ಬಂಧನ

ದಲಿತ ಯುವಕನ ಹತ್ಯೆ ಪ್ರಕರಣ: ಆಂಧ್ರದ ಮಾಜಿ ಸಚಿವರ ಪುತ್ರ ಪಿನಿಪೆ ಶ್ರೀಕಾಂತ್ ಬಂಧನ

- Advertisement -
- Advertisement -

ಎರಡು ವರ್ಷಗಳ ಹಿಂದೆ ದಲಿತ ಯುವಕನ ಹತ್ಯೆಗೆ ಸಂಬಂಧಿಸಿದಂತೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಚಿವ ಪಿನಿಪೆ ವಿಶ್ವರುಪ್ ಅವರ ಪುತ್ರ ಪಿನಿಪೆ ಶ್ರೀಕಾಂತ್ ನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಮಧುರೈನಲ್ಲಿ ಆಂಧ್ರಪ್ರದೇಶ ಪೊಲೀಸರ ತಂಡ ಶ್ರೀಕಾಂತ್‌ನನ್ನು ವಶಕ್ಕೆ ತೆಗೆದುಕೊಂಡಿದೆ. ಅವರನ್ನು ‘ಟ್ರಾನ್ಸಿಟ್ ವಾರಂಟ್’ ಮೇಲೆ ರಾಜ್ಯಕ್ಕೆ ಕರೆತರಲಾಗುತ್ತಿತ್ತು. ಈತ ದಲಿತ ಯುವಕ ಹಾಗೂ ಗ್ರಾಮದ ಸ್ವಯಂಸೇವಕ ಜೆ.ದುರ್ಗಾ ಪ್ರಸಾದ್ ಹತ್ಯೆಯ ಆರೋಪಿ ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಆಂಧ್ರ ಪೊಲೀಸರು ಶ್ರೀಕಾಂತ್‌ಗಾಗಿ ಹುಡುಕಾಟ ನಡೆಸಿದ್ದರು, ಅವರನ್ನು ಮಧುರೈನಲ್ಲಿ ಬಂಧಿಸಿ ಟ್ರಾನ್ಸಿಟ್ ವಾರಂಟ್ ಪಡೆಯಲು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಅವರನ್ನು ರಸ್ತೆ ಮಾರ್ಗವಾಗಿ ಕೋನಸೀಮಾ ಜಿಲ್ಲೆಗೆ ಕರೆತರಲಾಗುತ್ತಿತ್ತು.

ಆದರೆ, ಶ್ರೀಕಾಂತ್ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾಗ ಮಧುರೈನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿ, “ನಾನು ವೈದ್ಯ, ಜೀವ ಉಳಿಸುವುದು ಮಾತ್ರ ನನಗೆ ಗೊತ್ತು. ಈ ಪ್ರಕರಣದಲ್ಲಿ ಅಕ್ರಮವಾಗಿ ಬಂಧಿಸಲಾಗಿದೆ” ಎಂದು ಆರೋಪಿಸಿದರು.

ಕೋನಸೀಮಾ ಜಿಲ್ಲೆಯಲ್ಲಿ ನಡೆದ ಗಲಭೆಗಳ ನಂತರ 2022ರ ಜೂನ್ 6 ರಂದು ದುರ್ಗಾ ಪ್ರಸಾದ್ ಅವರನ್ನು ಕೊಲ್ಲಲಾಯಿತು. ಪೊಲೀಸರು ಈ ಹಿಂದೆ ಸಂತ್ರಸ್ತನ ಸ್ನೇಹಿತ ಮತ್ತು ವೈಎಸ್‌ಆರ್‌ಸಿಪಿ ಸಾಮಾಜಿಕ ಮಾಧ್ಯಮ ಸಂಚಾಲಕ ವಿ.ಧರ್ಮೇಶ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಕ್ಟೋಬರ್ 18ರಂದು ಆತನನ್ನು ಬಂಧಿಸಲಾಗಿತ್ತು. ಪೊಲೀಸರು ಶ್ರೀಕಾಂತ್ ಮತ್ತು ಇತರ ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು.  ಮೃತನು ಧರ್ಮೇಶ್ ಮತ್ತು ಶ್ರೀಕಾಂತ್ ಇಬ್ಬರಿಗೂ ಸ್ನೇಹಿತನಾಗಿದ್ದು, ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಎನ್ನಲಾಗಿದೆ.

ದಲಿತ ಯುವಕನ ಹತ್ಯೆಯ ಹಿಂದಿನ ಉದ್ದೇಶ ತಿಳಿದಿಲ್ಲ. ಯೋಜಿತ ಸಂಚು ರೂಪಿಸಿ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಧರ್ಮೇಶ್ ಅವರು ದುರ್ಗಾ ಪ್ರಸಾದ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕೋಟಿಪಲ್ಲಿ ದಕ್ಕೆಗೆ ಕರೆದುಕೊಂಡು ಹೋಗಿದ್ದರು. ಅವರನ್ನು ಕಾರಿನಲ್ಲಿ ನಾಲ್ವರು ಹಿಂಬಾಲಿಸಿದರು. ನಂತರ ಸಂತ್ರಸ್ತನನ್ನು ದೋಣಿಗೆ ಕರೆದೊಯ್ದ ನಂತರ ಆರೋಪಿಗಳು ದುರ್ಗಾ ಪ್ರಸಾದ್ ಅವರನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ ಎನ್ನಲಾಗಿದೆ.

ಮೃತನ ಕುಟುಂಬದ ದೂರಿನ ಮೇರೆಗೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಪೊಲೀಸರು ಆತನ ಶವವನ್ನು ಪತ್ತೆ ಹಚ್ಚಿದ್ದು, ಶವಪರೀಕ್ಷೆಯಲ್ಲಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ವಿಶ್ವರೂಪ್ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದರು. ಮೇ 2022 ರಲ್ಲಿ ಕೋನಸೀಮಾ ಜಿಲ್ಲೆಯ ಮರುನಾಮಕರಣದ ಹಿಂಸಾಚಾರದ ಸಂದರ್ಭದಲ್ಲಿ ಅಮಲಾಪುರಂನಲ್ಲಿರುವ ಅವರ ಮನೆಗೆ ಗುಂಪೊಂದು ಬೆಂಕಿ ಹಚ್ಚಿತು. ಆದರೆ, ವೈಎಸ್‌ಆರ್‌ಸಿಪಿ ನಾಯಕ ಮತ್ತು ಅವರ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ದಲಿತ ಬಾಲಕನಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...