Homeಮುಖಪುಟದಲಿತ ಯುವಕನ ಹತ್ಯೆ ಪ್ರಕರಣ: ಆಂಧ್ರದ ಮಾಜಿ ಸಚಿವರ ಪುತ್ರ ಪಿನಿಪೆ ಶ್ರೀಕಾಂತ್ ಬಂಧನ

ದಲಿತ ಯುವಕನ ಹತ್ಯೆ ಪ್ರಕರಣ: ಆಂಧ್ರದ ಮಾಜಿ ಸಚಿವರ ಪುತ್ರ ಪಿನಿಪೆ ಶ್ರೀಕಾಂತ್ ಬಂಧನ

- Advertisement -
- Advertisement -

ಎರಡು ವರ್ಷಗಳ ಹಿಂದೆ ದಲಿತ ಯುವಕನ ಹತ್ಯೆಗೆ ಸಂಬಂಧಿಸಿದಂತೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಚಿವ ಪಿನಿಪೆ ವಿಶ್ವರುಪ್ ಅವರ ಪುತ್ರ ಪಿನಿಪೆ ಶ್ರೀಕಾಂತ್ ನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಮಧುರೈನಲ್ಲಿ ಆಂಧ್ರಪ್ರದೇಶ ಪೊಲೀಸರ ತಂಡ ಶ್ರೀಕಾಂತ್‌ನನ್ನು ವಶಕ್ಕೆ ತೆಗೆದುಕೊಂಡಿದೆ. ಅವರನ್ನು ‘ಟ್ರಾನ್ಸಿಟ್ ವಾರಂಟ್’ ಮೇಲೆ ರಾಜ್ಯಕ್ಕೆ ಕರೆತರಲಾಗುತ್ತಿತ್ತು. ಈತ ದಲಿತ ಯುವಕ ಹಾಗೂ ಗ್ರಾಮದ ಸ್ವಯಂಸೇವಕ ಜೆ.ದುರ್ಗಾ ಪ್ರಸಾದ್ ಹತ್ಯೆಯ ಆರೋಪಿ ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಆಂಧ್ರ ಪೊಲೀಸರು ಶ್ರೀಕಾಂತ್‌ಗಾಗಿ ಹುಡುಕಾಟ ನಡೆಸಿದ್ದರು, ಅವರನ್ನು ಮಧುರೈನಲ್ಲಿ ಬಂಧಿಸಿ ಟ್ರಾನ್ಸಿಟ್ ವಾರಂಟ್ ಪಡೆಯಲು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಅವರನ್ನು ರಸ್ತೆ ಮಾರ್ಗವಾಗಿ ಕೋನಸೀಮಾ ಜಿಲ್ಲೆಗೆ ಕರೆತರಲಾಗುತ್ತಿತ್ತು.

ಆದರೆ, ಶ್ರೀಕಾಂತ್ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾಗ ಮಧುರೈನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿ, “ನಾನು ವೈದ್ಯ, ಜೀವ ಉಳಿಸುವುದು ಮಾತ್ರ ನನಗೆ ಗೊತ್ತು. ಈ ಪ್ರಕರಣದಲ್ಲಿ ಅಕ್ರಮವಾಗಿ ಬಂಧಿಸಲಾಗಿದೆ” ಎಂದು ಆರೋಪಿಸಿದರು.

ಕೋನಸೀಮಾ ಜಿಲ್ಲೆಯಲ್ಲಿ ನಡೆದ ಗಲಭೆಗಳ ನಂತರ 2022ರ ಜೂನ್ 6 ರಂದು ದುರ್ಗಾ ಪ್ರಸಾದ್ ಅವರನ್ನು ಕೊಲ್ಲಲಾಯಿತು. ಪೊಲೀಸರು ಈ ಹಿಂದೆ ಸಂತ್ರಸ್ತನ ಸ್ನೇಹಿತ ಮತ್ತು ವೈಎಸ್‌ಆರ್‌ಸಿಪಿ ಸಾಮಾಜಿಕ ಮಾಧ್ಯಮ ಸಂಚಾಲಕ ವಿ.ಧರ್ಮೇಶ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಕ್ಟೋಬರ್ 18ರಂದು ಆತನನ್ನು ಬಂಧಿಸಲಾಗಿತ್ತು. ಪೊಲೀಸರು ಶ್ರೀಕಾಂತ್ ಮತ್ತು ಇತರ ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು.  ಮೃತನು ಧರ್ಮೇಶ್ ಮತ್ತು ಶ್ರೀಕಾಂತ್ ಇಬ್ಬರಿಗೂ ಸ್ನೇಹಿತನಾಗಿದ್ದು, ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಎನ್ನಲಾಗಿದೆ.

ದಲಿತ ಯುವಕನ ಹತ್ಯೆಯ ಹಿಂದಿನ ಉದ್ದೇಶ ತಿಳಿದಿಲ್ಲ. ಯೋಜಿತ ಸಂಚು ರೂಪಿಸಿ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಧರ್ಮೇಶ್ ಅವರು ದುರ್ಗಾ ಪ್ರಸಾದ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕೋಟಿಪಲ್ಲಿ ದಕ್ಕೆಗೆ ಕರೆದುಕೊಂಡು ಹೋಗಿದ್ದರು. ಅವರನ್ನು ಕಾರಿನಲ್ಲಿ ನಾಲ್ವರು ಹಿಂಬಾಲಿಸಿದರು. ನಂತರ ಸಂತ್ರಸ್ತನನ್ನು ದೋಣಿಗೆ ಕರೆದೊಯ್ದ ನಂತರ ಆರೋಪಿಗಳು ದುರ್ಗಾ ಪ್ರಸಾದ್ ಅವರನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ ಎನ್ನಲಾಗಿದೆ.

ಮೃತನ ಕುಟುಂಬದ ದೂರಿನ ಮೇರೆಗೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಪೊಲೀಸರು ಆತನ ಶವವನ್ನು ಪತ್ತೆ ಹಚ್ಚಿದ್ದು, ಶವಪರೀಕ್ಷೆಯಲ್ಲಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ವಿಶ್ವರೂಪ್ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದರು. ಮೇ 2022 ರಲ್ಲಿ ಕೋನಸೀಮಾ ಜಿಲ್ಲೆಯ ಮರುನಾಮಕರಣದ ಹಿಂಸಾಚಾರದ ಸಂದರ್ಭದಲ್ಲಿ ಅಮಲಾಪುರಂನಲ್ಲಿರುವ ಅವರ ಮನೆಗೆ ಗುಂಪೊಂದು ಬೆಂಕಿ ಹಚ್ಚಿತು. ಆದರೆ, ವೈಎಸ್‌ಆರ್‌ಸಿಪಿ ನಾಯಕ ಮತ್ತು ಅವರ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ದಲಿತ ಬಾಲಕನಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...