Homeಮುಖಪುಟದಲಿತ ಯುವಕನ ಹತ್ಯೆ ಪ್ರಕರಣ: ಆಂಧ್ರದ ಮಾಜಿ ಸಚಿವರ ಪುತ್ರ ಪಿನಿಪೆ ಶ್ರೀಕಾಂತ್ ಬಂಧನ

ದಲಿತ ಯುವಕನ ಹತ್ಯೆ ಪ್ರಕರಣ: ಆಂಧ್ರದ ಮಾಜಿ ಸಚಿವರ ಪುತ್ರ ಪಿನಿಪೆ ಶ್ರೀಕಾಂತ್ ಬಂಧನ

- Advertisement -
- Advertisement -

ಎರಡು ವರ್ಷಗಳ ಹಿಂದೆ ದಲಿತ ಯುವಕನ ಹತ್ಯೆಗೆ ಸಂಬಂಧಿಸಿದಂತೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಚಿವ ಪಿನಿಪೆ ವಿಶ್ವರುಪ್ ಅವರ ಪುತ್ರ ಪಿನಿಪೆ ಶ್ರೀಕಾಂತ್ ನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಮಧುರೈನಲ್ಲಿ ಆಂಧ್ರಪ್ರದೇಶ ಪೊಲೀಸರ ತಂಡ ಶ್ರೀಕಾಂತ್‌ನನ್ನು ವಶಕ್ಕೆ ತೆಗೆದುಕೊಂಡಿದೆ. ಅವರನ್ನು ‘ಟ್ರಾನ್ಸಿಟ್ ವಾರಂಟ್’ ಮೇಲೆ ರಾಜ್ಯಕ್ಕೆ ಕರೆತರಲಾಗುತ್ತಿತ್ತು. ಈತ ದಲಿತ ಯುವಕ ಹಾಗೂ ಗ್ರಾಮದ ಸ್ವಯಂಸೇವಕ ಜೆ.ದುರ್ಗಾ ಪ್ರಸಾದ್ ಹತ್ಯೆಯ ಆರೋಪಿ ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಆಂಧ್ರ ಪೊಲೀಸರು ಶ್ರೀಕಾಂತ್‌ಗಾಗಿ ಹುಡುಕಾಟ ನಡೆಸಿದ್ದರು, ಅವರನ್ನು ಮಧುರೈನಲ್ಲಿ ಬಂಧಿಸಿ ಟ್ರಾನ್ಸಿಟ್ ವಾರಂಟ್ ಪಡೆಯಲು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಅವರನ್ನು ರಸ್ತೆ ಮಾರ್ಗವಾಗಿ ಕೋನಸೀಮಾ ಜಿಲ್ಲೆಗೆ ಕರೆತರಲಾಗುತ್ತಿತ್ತು.

ಆದರೆ, ಶ್ರೀಕಾಂತ್ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾಗ ಮಧುರೈನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿ, “ನಾನು ವೈದ್ಯ, ಜೀವ ಉಳಿಸುವುದು ಮಾತ್ರ ನನಗೆ ಗೊತ್ತು. ಈ ಪ್ರಕರಣದಲ್ಲಿ ಅಕ್ರಮವಾಗಿ ಬಂಧಿಸಲಾಗಿದೆ” ಎಂದು ಆರೋಪಿಸಿದರು.

ಕೋನಸೀಮಾ ಜಿಲ್ಲೆಯಲ್ಲಿ ನಡೆದ ಗಲಭೆಗಳ ನಂತರ 2022ರ ಜೂನ್ 6 ರಂದು ದುರ್ಗಾ ಪ್ರಸಾದ್ ಅವರನ್ನು ಕೊಲ್ಲಲಾಯಿತು. ಪೊಲೀಸರು ಈ ಹಿಂದೆ ಸಂತ್ರಸ್ತನ ಸ್ನೇಹಿತ ಮತ್ತು ವೈಎಸ್‌ಆರ್‌ಸಿಪಿ ಸಾಮಾಜಿಕ ಮಾಧ್ಯಮ ಸಂಚಾಲಕ ವಿ.ಧರ್ಮೇಶ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಕ್ಟೋಬರ್ 18ರಂದು ಆತನನ್ನು ಬಂಧಿಸಲಾಗಿತ್ತು. ಪೊಲೀಸರು ಶ್ರೀಕಾಂತ್ ಮತ್ತು ಇತರ ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು.  ಮೃತನು ಧರ್ಮೇಶ್ ಮತ್ತು ಶ್ರೀಕಾಂತ್ ಇಬ್ಬರಿಗೂ ಸ್ನೇಹಿತನಾಗಿದ್ದು, ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಎನ್ನಲಾಗಿದೆ.

ದಲಿತ ಯುವಕನ ಹತ್ಯೆಯ ಹಿಂದಿನ ಉದ್ದೇಶ ತಿಳಿದಿಲ್ಲ. ಯೋಜಿತ ಸಂಚು ರೂಪಿಸಿ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಧರ್ಮೇಶ್ ಅವರು ದುರ್ಗಾ ಪ್ರಸಾದ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕೋಟಿಪಲ್ಲಿ ದಕ್ಕೆಗೆ ಕರೆದುಕೊಂಡು ಹೋಗಿದ್ದರು. ಅವರನ್ನು ಕಾರಿನಲ್ಲಿ ನಾಲ್ವರು ಹಿಂಬಾಲಿಸಿದರು. ನಂತರ ಸಂತ್ರಸ್ತನನ್ನು ದೋಣಿಗೆ ಕರೆದೊಯ್ದ ನಂತರ ಆರೋಪಿಗಳು ದುರ್ಗಾ ಪ್ರಸಾದ್ ಅವರನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ ಎನ್ನಲಾಗಿದೆ.

ಮೃತನ ಕುಟುಂಬದ ದೂರಿನ ಮೇರೆಗೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಪೊಲೀಸರು ಆತನ ಶವವನ್ನು ಪತ್ತೆ ಹಚ್ಚಿದ್ದು, ಶವಪರೀಕ್ಷೆಯಲ್ಲಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ವಿಶ್ವರೂಪ್ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದರು. ಮೇ 2022 ರಲ್ಲಿ ಕೋನಸೀಮಾ ಜಿಲ್ಲೆಯ ಮರುನಾಮಕರಣದ ಹಿಂಸಾಚಾರದ ಸಂದರ್ಭದಲ್ಲಿ ಅಮಲಾಪುರಂನಲ್ಲಿರುವ ಅವರ ಮನೆಗೆ ಗುಂಪೊಂದು ಬೆಂಕಿ ಹಚ್ಚಿತು. ಆದರೆ, ವೈಎಸ್‌ಆರ್‌ಸಿಪಿ ನಾಯಕ ಮತ್ತು ಅವರ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ದಲಿತ ಬಾಲಕನಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...