Homeಮುಖಪುಟದಲಿತ ಯುವಕನ ಹತ್ಯೆ ಪ್ರಕರಣ: ಆಂಧ್ರದ ಮಾಜಿ ಸಚಿವರ ಪುತ್ರ ಪಿನಿಪೆ ಶ್ರೀಕಾಂತ್ ಬಂಧನ

ದಲಿತ ಯುವಕನ ಹತ್ಯೆ ಪ್ರಕರಣ: ಆಂಧ್ರದ ಮಾಜಿ ಸಚಿವರ ಪುತ್ರ ಪಿನಿಪೆ ಶ್ರೀಕಾಂತ್ ಬಂಧನ

- Advertisement -
- Advertisement -

ಎರಡು ವರ್ಷಗಳ ಹಿಂದೆ ದಲಿತ ಯುವಕನ ಹತ್ಯೆಗೆ ಸಂಬಂಧಿಸಿದಂತೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಚಿವ ಪಿನಿಪೆ ವಿಶ್ವರುಪ್ ಅವರ ಪುತ್ರ ಪಿನಿಪೆ ಶ್ರೀಕಾಂತ್ ನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಮಧುರೈನಲ್ಲಿ ಆಂಧ್ರಪ್ರದೇಶ ಪೊಲೀಸರ ತಂಡ ಶ್ರೀಕಾಂತ್‌ನನ್ನು ವಶಕ್ಕೆ ತೆಗೆದುಕೊಂಡಿದೆ. ಅವರನ್ನು ‘ಟ್ರಾನ್ಸಿಟ್ ವಾರಂಟ್’ ಮೇಲೆ ರಾಜ್ಯಕ್ಕೆ ಕರೆತರಲಾಗುತ್ತಿತ್ತು. ಈತ ದಲಿತ ಯುವಕ ಹಾಗೂ ಗ್ರಾಮದ ಸ್ವಯಂಸೇವಕ ಜೆ.ದುರ್ಗಾ ಪ್ರಸಾದ್ ಹತ್ಯೆಯ ಆರೋಪಿ ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಆಂಧ್ರ ಪೊಲೀಸರು ಶ್ರೀಕಾಂತ್‌ಗಾಗಿ ಹುಡುಕಾಟ ನಡೆಸಿದ್ದರು, ಅವರನ್ನು ಮಧುರೈನಲ್ಲಿ ಬಂಧಿಸಿ ಟ್ರಾನ್ಸಿಟ್ ವಾರಂಟ್ ಪಡೆಯಲು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಅವರನ್ನು ರಸ್ತೆ ಮಾರ್ಗವಾಗಿ ಕೋನಸೀಮಾ ಜಿಲ್ಲೆಗೆ ಕರೆತರಲಾಗುತ್ತಿತ್ತು.

ಆದರೆ, ಶ್ರೀಕಾಂತ್ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾಗ ಮಧುರೈನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿ, “ನಾನು ವೈದ್ಯ, ಜೀವ ಉಳಿಸುವುದು ಮಾತ್ರ ನನಗೆ ಗೊತ್ತು. ಈ ಪ್ರಕರಣದಲ್ಲಿ ಅಕ್ರಮವಾಗಿ ಬಂಧಿಸಲಾಗಿದೆ” ಎಂದು ಆರೋಪಿಸಿದರು.

ಕೋನಸೀಮಾ ಜಿಲ್ಲೆಯಲ್ಲಿ ನಡೆದ ಗಲಭೆಗಳ ನಂತರ 2022ರ ಜೂನ್ 6 ರಂದು ದುರ್ಗಾ ಪ್ರಸಾದ್ ಅವರನ್ನು ಕೊಲ್ಲಲಾಯಿತು. ಪೊಲೀಸರು ಈ ಹಿಂದೆ ಸಂತ್ರಸ್ತನ ಸ್ನೇಹಿತ ಮತ್ತು ವೈಎಸ್‌ಆರ್‌ಸಿಪಿ ಸಾಮಾಜಿಕ ಮಾಧ್ಯಮ ಸಂಚಾಲಕ ವಿ.ಧರ್ಮೇಶ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಕ್ಟೋಬರ್ 18ರಂದು ಆತನನ್ನು ಬಂಧಿಸಲಾಗಿತ್ತು. ಪೊಲೀಸರು ಶ್ರೀಕಾಂತ್ ಮತ್ತು ಇತರ ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು.  ಮೃತನು ಧರ್ಮೇಶ್ ಮತ್ತು ಶ್ರೀಕಾಂತ್ ಇಬ್ಬರಿಗೂ ಸ್ನೇಹಿತನಾಗಿದ್ದು, ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಎನ್ನಲಾಗಿದೆ.

ದಲಿತ ಯುವಕನ ಹತ್ಯೆಯ ಹಿಂದಿನ ಉದ್ದೇಶ ತಿಳಿದಿಲ್ಲ. ಯೋಜಿತ ಸಂಚು ರೂಪಿಸಿ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಧರ್ಮೇಶ್ ಅವರು ದುರ್ಗಾ ಪ್ರಸಾದ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕೋಟಿಪಲ್ಲಿ ದಕ್ಕೆಗೆ ಕರೆದುಕೊಂಡು ಹೋಗಿದ್ದರು. ಅವರನ್ನು ಕಾರಿನಲ್ಲಿ ನಾಲ್ವರು ಹಿಂಬಾಲಿಸಿದರು. ನಂತರ ಸಂತ್ರಸ್ತನನ್ನು ದೋಣಿಗೆ ಕರೆದೊಯ್ದ ನಂತರ ಆರೋಪಿಗಳು ದುರ್ಗಾ ಪ್ರಸಾದ್ ಅವರನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ ಎನ್ನಲಾಗಿದೆ.

ಮೃತನ ಕುಟುಂಬದ ದೂರಿನ ಮೇರೆಗೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಪೊಲೀಸರು ಆತನ ಶವವನ್ನು ಪತ್ತೆ ಹಚ್ಚಿದ್ದು, ಶವಪರೀಕ್ಷೆಯಲ್ಲಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ವಿಶ್ವರೂಪ್ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದರು. ಮೇ 2022 ರಲ್ಲಿ ಕೋನಸೀಮಾ ಜಿಲ್ಲೆಯ ಮರುನಾಮಕರಣದ ಹಿಂಸಾಚಾರದ ಸಂದರ್ಭದಲ್ಲಿ ಅಮಲಾಪುರಂನಲ್ಲಿರುವ ಅವರ ಮನೆಗೆ ಗುಂಪೊಂದು ಬೆಂಕಿ ಹಚ್ಚಿತು. ಆದರೆ, ವೈಎಸ್‌ಆರ್‌ಸಿಪಿ ನಾಯಕ ಮತ್ತು ಅವರ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ದಲಿತ ಬಾಲಕನಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...