Homeಮುಖಪುಟರಾಜಸ್ಥಾನದಲ್ಲಿ ದಲಿತ ಯುವಕರನ್ನು ಬೆತ್ತಲುಗೊಳಿಸಿ ಹಲ್ಲೆ : ಭೀಮ್‌ಆರ್ಮಿಯಿಂದ ಬಂದ್‌ಗೆ ಕರೆ

ರಾಜಸ್ಥಾನದಲ್ಲಿ ದಲಿತ ಯುವಕರನ್ನು ಬೆತ್ತಲುಗೊಳಿಸಿ ಹಲ್ಲೆ : ಭೀಮ್‌ಆರ್ಮಿಯಿಂದ ಬಂದ್‌ಗೆ ಕರೆ

- Advertisement -
- Advertisement -

ದ್ವಿಚಕ್ರ ವಾಹನದ ಏಜೆನ್ಸಿಯಿಂದ ಹಣವನ್ನು ಕದಿಯುತ್ತಿದ್ದರು ಎಂದು ಆರೋಪಿಸಿ ಇಬ್ಬರು ದಲಿತ ಯುವಕರನ್ನು ರಾಜಸ್ಥಾನದ ನಾಗೌರ್ ಜಿಲ್ಲೆಯ ಶೋ ರೂಂನ ಸಿಬ್ಬಂದಿಗಳು ಥಳಿಸಿದ್ದಾರೆ ಎಂದು “ದಿ ಕ್ವಿಂಟ್” ವರದಿ ಮಾಡಿದೆ. ಅದರಲ್ಲಿ ಒಬ್ಬ ಯುವಕನನ್ನು ಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಯ ವಿಡಿಯೋ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.

ಇಬ್ಬರು ವ್ಯಕ್ತಿಗಳು ಭಾನುವಾರ ಹಣವನ್ನು ಕದಿಯುವಲ್ಲಿ ಸಿಕ್ಕಿಬಿದ್ದಿದ್ದರು. ಅಲ್ಲಿ ಅವರನ್ನು ಶೋ ರೂಂ ನೌಕರರು ಕ್ರೂರವಾಗಿ ಥಳಿಸಿದ್ದಾರೆ. ಅಲ್ಲದೆ ಅದನ್ನು ವೀಡಿಯೊ ಚಿತ್ರೀಕರಿಸಲಾಗಿ ಅದು ವೈರಲ್ ಆಗಿದೆ. ಸಂತ್ರಸ್ತರು ಬುಧವಾರ ಎಫ್ಐಆರ್ ದಾಖಲಿಸಿದ್ದಾರೆ ಎಂದು ಪಂಚೋಡಿ ಪೊಲೀಸ್ ಠಾಣೆಯ ಮುಖ್ಯ ಅಧಿಕಾರಿ ರಾಜ್ಪಾಲ್ ಸಿಂಗ್ ತಿಳಿಸಿದ್ದಾರೆ. ಅಲ್ಲದೆ ಹಣ ಕಳ್ಳತನಕ್ಕಾಗಿ ಶೋರೂಂ ಸಿಬ್ಬಂದಿ ಇಬ್ಬರು ದಲಿತ ಯವಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಟ್ವಿಟ್ಟರ್ ನಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಟೀಕಿಸಿದ್ದಾರೆ. ಅಲ್ಲದೆ ಸಂತ್ರಸ್ತರನ್ನು ಭೇಟಿ ಮಾಡಲು ಭೀಮ್ ಆರ್ಮಿಯ ರಾಜಸ್ಥಾನ ಘಟಕಕ್ಕೆ ಸೂಚಿಸಿದ್ದು ಫೆಬ್ರವರಿ 23 ರಂದು ರಾಜಸ್ಥಾನ್ ಬಂದ್ ಗೆ ಕರೆ ನೀಡಿದ್ದಾರೆ.

ರಾಜಸ್ಥಾನದಲ್ಲಿ ದಲಿತರು ವಾಸಿಸುವುದು ಕಷ್ಟಕರವಾಗಿದೆ. ಅಶೋಕ್ ಗೆಹ್ಲೋಟ್ ಜಿ, ಸ್ವಲ್ಪ ಮರ್ಯಾದೆ ಉಳಿದಿದ್ದರೆ ತಕ್ಷಣ ಕುರ್ಚಿಯನ್ನು ಬಿಡಿ. ಭೀಮ್ ಆರ್ಮಿ ರಾಜಸ್ಥಾನ ತಂಡವು ತಕ್ಷಣ ಸಂತ್ರಸ್ತರನ್ನು ಭೇಟಿಯಾಗಿ ಫೆಬ್ರವರಿ 23 ರಂದು ಇಡೀ ರಾಜಸ್ಥಾನವನ್ನು ಬಂದ್‌ ಮಾಡಲಿದೆ ಎಂದು ಟ್ವೀಟ್‌ ಮಾಡಿದ್ದಾರೆ.

“ರಾಜಸ್ಥಾನದ ನಾಗೌರ್ನಲ್ಲಿ ಇಬ್ಬರು ಯುವ ದಲಿತರ ಮೇಲೆ ಇತ್ತೀಚೆಗೆ ಕ್ರೂರವಾಗಿ ಹಿಂಸೆ ಮಾಡುತ್ತಿರುವ ವಿಡಿಯೋ ಭಯಾನಕ ಮತ್ತು ಅನಾರೋಗ್ಯಕರವಾಗಿದೆ. ಆಘಾತಕಾರಿಯಾಗಿದ್ದು ಈ ಅಪರಾಧದ ಅಪರಾಧಿಗಳಿಗೆ ಶಿಕ್ಷ ಆಗಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ ”ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸ್‌ನ ’ಪರಿಶಿಷ್ಟ ಜಾತಿ, ವರ್ಗಗಳ ವಿಭಾಗವೂ ಕೂಡ ಚಿತ್ರಹಿಂಸೆ ಖಂಡಿಸಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಪ್ರಕರಣದ ತನಿಖೆ ನಡೆಸಿ ಅದರಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದೆ.

ನಾಗೌರ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿಕಾಸ್ ಪಾಠಕ್, ಇಬ್ಬರಿಂದ ಪೊಲೀಸರಿಗೆ ದೂರು ಬಂದಿಲ್ಲ. “ನಮಗೆ ಮಾಹಿತಿ ನೀಡಿದ ಕೂಡಲೇ (ವಿಡಿಯೋ ಬಗ್ಗೆ) ಆರೋಪಿಗಳನ್ನು ಗುರುತಿಸಿ ನಂತರ ಬಂಧಿಸಲಾಗಿದೆ” ಎಂದು ನಾಗರೂರು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕಾಸ್ ಪಾಠಕ್ ತಿಳಿಸಿದ್ದಾರೆ.

ಶಂಕಿತರನ್ನು ಭೀವ್ ಸಿಂಗ್, ಐದಾನ್ ಲಷ್ಮಾನ್ ಸಿಂಗ್, ಜಾಸು ಸಿಂಗ್, ಸವಾಯಿ ಸಿಂಗ್, ಹರ್ಮಾ ಸಿಂಗ್ ಮತ್ತು ಗಣಪತ್ ರಾಮ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...