Homeದಲಿತ್ ಫೈಲ್ಸ್ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ದಲಿತ ಯುವಕನ ಬೈಕ್, ಮೊಬೈಲ್ ಕಿತ್ತುಕೊಂಡು ಪದೇ ಪದೇ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿಯಲ್ಲಿ ಜರುಗಿದೆ

- Advertisement -
- Advertisement -

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿರುವ ಮತ್ತು ಆ ಯುವಕ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ ದೌರ್ಜನ್ಯದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಬೇವಹಳ್ಳಿಯ ಉದಯ್ ಕಿರಣ್ ಮೃತ ಯುವಕನಾಗಿದ್ದು, ಆತನ ಮೇಲೆ ಜಾತಿ ದೌರ್ಜನ್ಯವೆಸಗಿದ ಆರೋಪದ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗಕ್ಕೆ ಸೇರಿದ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಇ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗಾರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಿದ್ದರು ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದಾರೆ.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಆನಂತರ ಮತ್ತೆ ತನ್ನ ವಾಹನ ಮತ್ತು ಮೊಬೈಲ್ ಕೇಳಲು ಹೋದ ಉದಯ್ ಕಿರಣ್ ನನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ರಚ್ಚೆ ಕಟ್ಟೆಯ ಮರಕ್ಕೆ ಕಟ್ಟಿ ಹಾಕಿ, ಹೊಡೆದು, ಜಾತಿ ನಿಂದನೆ ಮಾಡಿ ಅತಿಹೀನವಾಗಿ ಅವಮಾನಿಸುತ್ತಿದ್ದರು. ಈ ವಿಷಯ ತಿಳಿದ ನಾನು ರಾತ್ರಿ 8.30ರ ಸಮಯದಲ್ಲಿ ನಮ್ಮ ಗ್ರಾಮದ ಹಿರಿಯರನ್ನು ಕರೆದುಕೊಂಡು ಪೆತಾಂಡ್ಲಹಳ್ಳಿಗೆ ಹೋಗಿ ಮಾತಾಡಿ ಅವರನ್ನು ಬಿಡಿಸಿಕೊಂಡು ಬಂದಿದ್ದೆವು. ಆದರೆ ರಾತ್ರಿ 10 ಗಂಟೆ ಸುಮಾರಿಗೆ ಉದಯ್ ಕಿರಣ್ ಅವಮಾನ ತಾಳಲಾರದೆ ಮನನೊಂದು ತೋಟದ ಮನೆಯಲ್ಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ಆರೋಪಿಗಳು ಪದೇ ಪದೇ ಜಾತಿ ದೌರ್ಜನ್ಯವೆಸಗಿರುವುದೇ ಕಾರಣವಾಗಿದೆ ಎಂದು ಮೃತನ ಸೋದರ ಮಾವ ನಾಗರಾಜ್ ಆರೋಪಿಸಿದ್ದಾರೆ.

“ಈ ವಿಚಾರ ನಂಗಲಿ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿ, ಆರೋಪಿಗಳ ಮೇಲೆ FIR ದಾಖಲಿಸಲಾಗಿದೆ. ಪೊಲೀಸರು ನಾಳೆಯೊಳಗೆ ಆರೋಪಿಗಳನ್ನು ಬಂಧಿಸಿ ನ್ಯಾಯಯುತ ವಿಚಾರಣೆ ನಡೆಸಬೇಕೆಂದು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಮುಳಬಾಗಿಲಿನ ಹೋರಾಟಗಾರರಾದ ಜೈಭೀಮ್ ಗಂಗಾಧರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...