Homeದಲಿತ್ ಫೈಲ್ಸ್ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ದಲಿತ ಯುವಕನ ಬೈಕ್, ಮೊಬೈಲ್ ಕಿತ್ತುಕೊಂಡು ಪದೇ ಪದೇ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿಯಲ್ಲಿ ಜರುಗಿದೆ

- Advertisement -
- Advertisement -

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿರುವ ಮತ್ತು ಆ ಯುವಕ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ ದೌರ್ಜನ್ಯದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಬೇವಹಳ್ಳಿಯ ಉದಯ್ ಕಿರಣ್ ಮೃತ ಯುವಕನಾಗಿದ್ದು, ಆತನ ಮೇಲೆ ಜಾತಿ ದೌರ್ಜನ್ಯವೆಸಗಿದ ಆರೋಪದ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗಕ್ಕೆ ಸೇರಿದ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಇ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗಾರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಿದ್ದರು ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದಾರೆ.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಆನಂತರ ಮತ್ತೆ ತನ್ನ ವಾಹನ ಮತ್ತು ಮೊಬೈಲ್ ಕೇಳಲು ಹೋದ ಉದಯ್ ಕಿರಣ್ ನನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ರಚ್ಚೆ ಕಟ್ಟೆಯ ಮರಕ್ಕೆ ಕಟ್ಟಿ ಹಾಕಿ, ಹೊಡೆದು, ಜಾತಿ ನಿಂದನೆ ಮಾಡಿ ಅತಿಹೀನವಾಗಿ ಅವಮಾನಿಸುತ್ತಿದ್ದರು. ಈ ವಿಷಯ ತಿಳಿದ ನಾನು ರಾತ್ರಿ 8.30ರ ಸಮಯದಲ್ಲಿ ನಮ್ಮ ಗ್ರಾಮದ ಹಿರಿಯರನ್ನು ಕರೆದುಕೊಂಡು ಪೆತಾಂಡ್ಲಹಳ್ಳಿಗೆ ಹೋಗಿ ಮಾತಾಡಿ ಅವರನ್ನು ಬಿಡಿಸಿಕೊಂಡು ಬಂದಿದ್ದೆವು. ಆದರೆ ರಾತ್ರಿ 10 ಗಂಟೆ ಸುಮಾರಿಗೆ ಉದಯ್ ಕಿರಣ್ ಅವಮಾನ ತಾಳಲಾರದೆ ಮನನೊಂದು ತೋಟದ ಮನೆಯಲ್ಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ಆರೋಪಿಗಳು ಪದೇ ಪದೇ ಜಾತಿ ದೌರ್ಜನ್ಯವೆಸಗಿರುವುದೇ ಕಾರಣವಾಗಿದೆ ಎಂದು ಮೃತನ ಸೋದರ ಮಾವ ನಾಗರಾಜ್ ಆರೋಪಿಸಿದ್ದಾರೆ.

“ಈ ವಿಚಾರ ನಂಗಲಿ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿ, ಆರೋಪಿಗಳ ಮೇಲೆ FIR ದಾಖಲಿಸಲಾಗಿದೆ. ಪೊಲೀಸರು ನಾಳೆಯೊಳಗೆ ಆರೋಪಿಗಳನ್ನು ಬಂಧಿಸಿ ನ್ಯಾಯಯುತ ವಿಚಾರಣೆ ನಡೆಸಬೇಕೆಂದು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಮುಳಬಾಗಿಲಿನ ಹೋರಾಟಗಾರರಾದ ಜೈಭೀಮ್ ಗಂಗಾಧರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...