Homeದಲಿತ್ ಫೈಲ್ಸ್ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ದಲಿತ ಯುವಕನ ಬೈಕ್, ಮೊಬೈಲ್ ಕಿತ್ತುಕೊಂಡು ಪದೇ ಪದೇ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿಯಲ್ಲಿ ಜರುಗಿದೆ

- Advertisement -
- Advertisement -

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿರುವ ಮತ್ತು ಆ ಯುವಕ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ ದೌರ್ಜನ್ಯದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಬೇವಹಳ್ಳಿಯ ಉದಯ್ ಕಿರಣ್ ಮೃತ ಯುವಕನಾಗಿದ್ದು, ಆತನ ಮೇಲೆ ಜಾತಿ ದೌರ್ಜನ್ಯವೆಸಗಿದ ಆರೋಪದ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗಕ್ಕೆ ಸೇರಿದ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಇ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗಾರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಿದ್ದರು ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದಾರೆ.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಆನಂತರ ಮತ್ತೆ ತನ್ನ ವಾಹನ ಮತ್ತು ಮೊಬೈಲ್ ಕೇಳಲು ಹೋದ ಉದಯ್ ಕಿರಣ್ ನನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ರಚ್ಚೆ ಕಟ್ಟೆಯ ಮರಕ್ಕೆ ಕಟ್ಟಿ ಹಾಕಿ, ಹೊಡೆದು, ಜಾತಿ ನಿಂದನೆ ಮಾಡಿ ಅತಿಹೀನವಾಗಿ ಅವಮಾನಿಸುತ್ತಿದ್ದರು. ಈ ವಿಷಯ ತಿಳಿದ ನಾನು ರಾತ್ರಿ 8.30ರ ಸಮಯದಲ್ಲಿ ನಮ್ಮ ಗ್ರಾಮದ ಹಿರಿಯರನ್ನು ಕರೆದುಕೊಂಡು ಪೆತಾಂಡ್ಲಹಳ್ಳಿಗೆ ಹೋಗಿ ಮಾತಾಡಿ ಅವರನ್ನು ಬಿಡಿಸಿಕೊಂಡು ಬಂದಿದ್ದೆವು. ಆದರೆ ರಾತ್ರಿ 10 ಗಂಟೆ ಸುಮಾರಿಗೆ ಉದಯ್ ಕಿರಣ್ ಅವಮಾನ ತಾಳಲಾರದೆ ಮನನೊಂದು ತೋಟದ ಮನೆಯಲ್ಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ಆರೋಪಿಗಳು ಪದೇ ಪದೇ ಜಾತಿ ದೌರ್ಜನ್ಯವೆಸಗಿರುವುದೇ ಕಾರಣವಾಗಿದೆ ಎಂದು ಮೃತನ ಸೋದರ ಮಾವ ನಾಗರಾಜ್ ಆರೋಪಿಸಿದ್ದಾರೆ.

“ಈ ವಿಚಾರ ನಂಗಲಿ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿ, ಆರೋಪಿಗಳ ಮೇಲೆ FIR ದಾಖಲಿಸಲಾಗಿದೆ. ಪೊಲೀಸರು ನಾಳೆಯೊಳಗೆ ಆರೋಪಿಗಳನ್ನು ಬಂಧಿಸಿ ನ್ಯಾಯಯುತ ವಿಚಾರಣೆ ನಡೆಸಬೇಕೆಂದು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಮುಳಬಾಗಿಲಿನ ಹೋರಾಟಗಾರರಾದ ಜೈಭೀಮ್ ಗಂಗಾಧರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...