Homeದಲಿತ್ ಫೈಲ್ಸ್ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ದಲಿತ ಯುವಕನ ಬೈಕ್, ಮೊಬೈಲ್ ಕಿತ್ತುಕೊಂಡು ಪದೇ ಪದೇ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿಯಲ್ಲಿ ಜರುಗಿದೆ

- Advertisement -
- Advertisement -

ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿರುವ ಮತ್ತು ಆ ಯುವಕ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ ದೌರ್ಜನ್ಯದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಬೇವಹಳ್ಳಿಯ ಉದಯ್ ಕಿರಣ್ ಮೃತ ಯುವಕನಾಗಿದ್ದು, ಆತನ ಮೇಲೆ ಜಾತಿ ದೌರ್ಜನ್ಯವೆಸಗಿದ ಆರೋಪದ ಮೇಲೆ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗಕ್ಕೆ ಸೇರಿದ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಇ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 30ರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗದ ರಾಜು ಬಿನ್ ಗೋಪಾಲಕೃಷ್ಣಪ್ಪ ರವರ ದ್ವಿಚಕ್ರ ವಾಹನವನ್ನು ಬೇವಹಳ್ಳಿಯ ಉದಯ್ ಕಿರಣ್ ಮತ್ತು ನಾಗಾರಾಜು ಓವರ್ ಟೇಕ್ ಮಾಡಿದರು ಎಂದು ಆರೋಪಿಸಿ ಬೈರಕೂರಿನಲ್ಲಿ ಉದಯ್ ಕಿರಣ್ ವಾಹನವನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ಮಾಡಿದ್ದರು ಎಂದು ಮೃತ ಯುವಕನ ಸೋದರ ಮಾವ ನಾಗರಾಜು ಆರೋಪಿಸಿದ್ದಾರೆ.

ಆ ನಂತರವೂ ಸಹ ಕಾಡೆನಹಳ್ಳಿಯಿಂದ ವಾಪಸ್ಸು ಬರುತ್ತಿದ್ದ ಉದಯ್ ಕಿರಣ್ ಮತ್ತು ನಾಗರಾಜರನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ಬಳಿ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಬಳಿ ಅಡ್ಡಗಟ್ಟಿ, ಹೊಡೆದು ಆತನ ದ್ವಿಚಕ್ರ ವಾಹನ ಮತ್ತು ಮೊಬೈಲ್ ಕಿತ್ತುಕೊಂಡು ನಿಮ್ಮ ಮನೆಯವರನ್ನು ಕರೆದುಕೊಂಡು ಬನ್ನಿ ಎಂದು ದೌರ್ಜನ್ಯವೆಸಗಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಆನಂತರ ಮತ್ತೆ ತನ್ನ ವಾಹನ ಮತ್ತು ಮೊಬೈಲ್ ಕೇಳಲು ಹೋದ ಉದಯ್ ಕಿರಣ್ ನನ್ನು ಮತ್ತೆ ಪೆತಾಂಡ್ಲಹಳ್ಳಿ ಗ್ರಾಮದ ರಚ್ಚೆ ಕಟ್ಟೆಯ ಮರಕ್ಕೆ ಕಟ್ಟಿ ಹಾಕಿ, ಹೊಡೆದು, ಜಾತಿ ನಿಂದನೆ ಮಾಡಿ ಅತಿಹೀನವಾಗಿ ಅವಮಾನಿಸುತ್ತಿದ್ದರು. ಈ ವಿಷಯ ತಿಳಿದ ನಾನು ರಾತ್ರಿ 8.30ರ ಸಮಯದಲ್ಲಿ ನಮ್ಮ ಗ್ರಾಮದ ಹಿರಿಯರನ್ನು ಕರೆದುಕೊಂಡು ಪೆತಾಂಡ್ಲಹಳ್ಳಿಗೆ ಹೋಗಿ ಮಾತಾಡಿ ಅವರನ್ನು ಬಿಡಿಸಿಕೊಂಡು ಬಂದಿದ್ದೆವು. ಆದರೆ ರಾತ್ರಿ 10 ಗಂಟೆ ಸುಮಾರಿಗೆ ಉದಯ್ ಕಿರಣ್ ಅವಮಾನ ತಾಳಲಾರದೆ ಮನನೊಂದು ತೋಟದ ಮನೆಯಲ್ಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ಆರೋಪಿಗಳು ಪದೇ ಪದೇ ಜಾತಿ ದೌರ್ಜನ್ಯವೆಸಗಿರುವುದೇ ಕಾರಣವಾಗಿದೆ ಎಂದು ಮೃತನ ಸೋದರ ಮಾವ ನಾಗರಾಜ್ ಆರೋಪಿಸಿದ್ದಾರೆ.

“ಈ ವಿಚಾರ ನಂಗಲಿ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿ, ಆರೋಪಿಗಳ ಮೇಲೆ FIR ದಾಖಲಿಸಲಾಗಿದೆ. ಪೊಲೀಸರು ನಾಳೆಯೊಳಗೆ ಆರೋಪಿಗಳನ್ನು ಬಂಧಿಸಿ ನ್ಯಾಯಯುತ ವಿಚಾರಣೆ ನಡೆಸಬೇಕೆಂದು ಒತ್ತಾಯಿಸುತ್ತೇವೆ. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಮುಳಬಾಗಿಲಿನ ಹೋರಾಟಗಾರರಾದ ಜೈಭೀಮ್ ಗಂಗಾಧರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ-29; ಲಾಕ್‌ಡೌನ್ ಫೈಲ್ಸ್: ಕ್ವಾರಂಟೈನ್ ಅಲ್ಲೂ ದಲಿತರಿಗೆ ಇಲ್ಲದಾದ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...