Homeಮುಖಪುಟದಲಿತ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ: ಅಮಾನವೀಯ ಘಟನೆ ವರದಿ

ದಲಿತ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ: ಅಮಾನವೀಯ ಘಟನೆ ವರದಿ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ಹಿಂಸೆ, ದೌರ್ಜನ್ಯ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದೆ. ಉತ್ತರಪ್ರದೇಶದ ಜೌನ್‌ಪುರ್‌ ಜಿಲ್ಲೆಯಲ್ಲಿ ಕಳೆದ ನ.23ರಂದು 14 ವರ್ಷದ ದಲಿತ ಬಾಲಕನಿಗೆ ಕೆಲವು ಸವರ್ಣಿಯ ಜಾತಿಗೆ ಸೇರಿದ ದುಷ್ಕರ್ಮಿಗಳ ಗುಂಪು ಮೂತ್ರ ಕುಡಿಸಿದ ಪ್ರಕರಣ ನಡೆದಿತ್ತು. ಇದೀಗ ಅಂತದ್ದೇ ಪ್ರಕರಣವೊಂದು ನಡೆದಿದ್ದು, ದಲಿತ ಸಮುದಾಯಕ್ಕೆ ಸೇರಿದ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ಮಾಡಿದ ಘಟನೆ ಲಕ್ನೋ ಜಿಲ್ಲೆಯ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದೇ ಜನವರಿ 9ರಂದು ದಲಿತ ಸಮುದಾಯಕ್ಕೆ ಸೇರಿದ ಅಂಕಿತ್‌ ಎಂಬ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮುಝಪ್ಪರ್‌ ನಗರ ಜಿಲ್ಲೆಯ ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋಲಾ ಗ್ರಾಮದಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಠಿಣ ಸೆಕ್ಷನ್ 302 (ಕೊಲೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯಿದೆಯ ನಿಬಂಧನೆಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಇದಾದ ಕೆಲವೇ ದಿನಗಳಲ್ಲಿ ಮತ್ತೊಂದು ದಲಿತ ದೌರ್ಜನ್ಯ ಪ್ರಕರಣ ಹೊರಬಿದ್ದದೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರವಿದ್ದು, ಯೋಗಿ ಆದಿತ್ಯನಾಥ್‌ ಆಡಳಿತ ಇಡೀ ದೇಶಕ್ಕೆ ಮಾದರಿ ಎಂದು ಬಿಜೆಪಿ ಡಂಗುರ ಸಾರಿತ್ತು. ಆದರೆ ಕೇಂದ್ರ ಸಚಿವ ರಾಮ್‌ದಾಸ್‌ ಅಠಾವಳೆ ಅವರೇ ಇತ್ತೀಚೆಗೆ ನೀಡಿದ ಮಾಹಿತಿ ಪ್ರಕಾರ ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ದಲಿತ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದೆ. ಆದರೆ ಇವುಗಳಲ್ಲಿ ಹೆಚ್ಚಿನವುಗಳು ಬಹಿರಂಗವಾಗುತ್ತಿಲ್ಲ ಎನ್ನವುದನ್ನು ಗಮನಿಸಬೇಕಿದೆ.

ಲಕ್ನೋ ಜಿಲ್ಲೆಯ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯದ ವೇಳೆ ನಡೆದ ಜಗಳ ಹಿಂಸಾಚಾರಕ್ಕೆ ತಿರುಗಿದ್ದು, ಯುವಕರ ಗುಂಪೊಂದು 18 ವರ್ಷದ ದಲಿತ ಬಾಲಕನಿಗೆ ಥಳಿಸಿ ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ಅಮಾನವೀಯವಾಗಿ ವರ್ತಿಸಿದೆ. ಜ.13ರಂದು ಘಟನೆ ನಡೆದಿದ್ದು, ಸಂತ್ರಸ್ತ ಯುವಕನ ತಂದೆ ಕೂಲಿ ಕಾರ್ಮಿಕ ಸಂದೀಪ್ ಕುಮಾರ್ ರಾವತ್ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ ನಂತರ ಮಂಗಳವಾರ ಸಂಜೆ ಈ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ  25-30 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 504 (ಅವಮಾನ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು 147 (ಗಲಭೆ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಆರೋಪಿಗಳ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿದೆ.

ಇಂದಿರಾನಗರದ ಚಡಾನ್ ಗ್ರಾಮದ ನಿವಾಸಿ ರಾವತ್ ಅವರು ಈ ಕುರಿತು ಎಫ್‌ಐಆರ್‌ ದಾಖಲಿಸಿದ್ದು, ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುವ ತನ್ನ ಮಗ ಲಕ್ಕಿ(18) ತನ್ನ ಸ್ನೇಹಿತರೊಂದಿಗೆ ಖುರ್ರಂ ನಗರದ ಬಳಿ ಕ್ರಿಕೆಟ್ ಆಡಲು ಹೋಗಿದ್ದ. ಕ್ರಿಕೆಟ್‌ ಆಡುವಾಗ ಚೆಂಡು ಇತರ ಕೆಲವು ಯುವಕರು ಆಡುತ್ತಿದ್ದ ಪ್ರದೇಶದಲ್ಲಿ ಬಿತ್ತು. ಲಕ್ಕಿ ಚೆಂಡನ್ನು ತೆಗೆದುಕೊಳ್ಳಲು ಅಲ್ಲಿಗೆ ಹೋದಾಗ ಅಲ್ಲಿದ್ದ ಯುವಕರು ಆತನಿಗೆ ಚೆಂಡನ್ನು ನೀಡಲು ನಿರಾಕರಿಸಿದ್ದಾರೆ. ಆತನಿಗೆ ಜಾತಿ ನಿಂದನೆಗೈದು ಥಳಿಸಿದ್ದಾರೆ. ತನ್ನ ಅವರಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದಾನೆ. ಆದರೆ ಅವನು ಈ ಬಗ್ಗೆ ಮನೆಯಲ್ಲಿ ಹೇಳಿರಲಿಲ್ಲ. ಅದೇ ದಿನ ಲಕ್ಕಿಯನ್ನು ಮತ್ತೆ ಯುವಕರ ಗುಂಪು ಅಡ್ಡಗಟ್ಟಿ ಮತ್ತೊಮ್ಮೆ ಥಳಿಸಿದ್ದಾರೆ. ಆ ಬಳಿಕ ಘಟನೆಯ ಬಗ್ಗೆ ನಮ್ಮೊಂದಿಗೆ ಆತ ಹೇಳಿಕೊಂಡಿದ್ದಾನೆ. ನಾವು ಆ ವಿಷಯದ ಬಗ್ಗೆ ಆತಂಕಿತರಾಗಿರುವಾಗಲೇ ಮತ್ತೆ ಮನೆಯ ಬಳಿಗೆ ಬಂದ ಗುಂಪು, ನನ್ನ ಪುತ್ರನನ್ನು ಮನೆಯಿಂದ ಹೊರಗೆ ಎಳೆದೊಯ್ದು ಥಳಿಸಿದೆ. ಆದರೆ ನೆರೆಹೊರೆಯವರು ನಮ್ಮ ನೆರವಿಗೆ ಬಂದಿದ್ದರಿಂದ ಆ ಯುವಕರ ಗುಂಪು ಅಲ್ಲಿಂದ ಪರಾರಿಯಾಗಿದೆ. ಮರುದಿನ ತನ್ನ ಸಹೋದರಿಯನ್ನು ಶಾಲೆಯಿಂದ ಮರಳಿ ಕರೆ ತರಲು ಟಕ್ರೋಹಿಗೆ ತೆರಳಿದ್ದ ನನ್ನ ಪುತ್ರನನ್ನು ಆ ಯುವಕರ ಗುಂಪು ಮತ್ತೆ ಕನೌಸಾದಲ್ಲಿ ಅಡ್ಡಗಟ್ಟಿ ಪ್ರಜ್ಞೆ ಕಳೆದುಕೊಳ್ಳುವವರೆಗೂ ಥಳಿಸಿದ್ದಾರೆ. ನಂತರ ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಘಟನೆಯಿಂದ ಭಯಗೊಂಡು ಆತ ಮನೆಯಿಂದ ಹೊರಗೆ ಬಂದಿಲ್ಲ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತ ಯುವಕನ ತಂದೆ ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಉತ್ತರ ವಲಯದ ಉಪ ಪೊಲೀಸ್ ಆಯುಕ್ತ ಖಾಸಿಂ ಅಬಿದಿ, ಕ್ರಿಕೆಟ್‌ ಪಂದ್ಯದ ವೇಳೆ ಗಲಾಟೆ ನಡೆದಿದೆ. ಈ ಕುರಿತು ಗಾಝಿಪುರ ಎಸಿಪಿ ಅವರ ನೇತೃತ್ವದ ತಂಡ ತನಿಖೆಯನ್ನು ನಡೆಸುತ್ತಿದೆ, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ನಾಗಾಲ್ಯಾಂಡ್ ಜನತೆಗೆ ಮೋದಿ ನೀಡಿದ್ದು ಸುಳ್ಳು ಭರವಸೆ; ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...