Homeಮುಖಪುಟದಲಿತ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ: ಅಮಾನವೀಯ ಘಟನೆ ವರದಿ

ದಲಿತ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ: ಅಮಾನವೀಯ ಘಟನೆ ವರದಿ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ಹಿಂಸೆ, ದೌರ್ಜನ್ಯ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದೆ. ಉತ್ತರಪ್ರದೇಶದ ಜೌನ್‌ಪುರ್‌ ಜಿಲ್ಲೆಯಲ್ಲಿ ಕಳೆದ ನ.23ರಂದು 14 ವರ್ಷದ ದಲಿತ ಬಾಲಕನಿಗೆ ಕೆಲವು ಸವರ್ಣಿಯ ಜಾತಿಗೆ ಸೇರಿದ ದುಷ್ಕರ್ಮಿಗಳ ಗುಂಪು ಮೂತ್ರ ಕುಡಿಸಿದ ಪ್ರಕರಣ ನಡೆದಿತ್ತು. ಇದೀಗ ಅಂತದ್ದೇ ಪ್ರಕರಣವೊಂದು ನಡೆದಿದ್ದು, ದಲಿತ ಸಮುದಾಯಕ್ಕೆ ಸೇರಿದ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ಮಾಡಿದ ಘಟನೆ ಲಕ್ನೋ ಜಿಲ್ಲೆಯ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದೇ ಜನವರಿ 9ರಂದು ದಲಿತ ಸಮುದಾಯಕ್ಕೆ ಸೇರಿದ ಅಂಕಿತ್‌ ಎಂಬ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮುಝಪ್ಪರ್‌ ನಗರ ಜಿಲ್ಲೆಯ ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋಲಾ ಗ್ರಾಮದಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಠಿಣ ಸೆಕ್ಷನ್ 302 (ಕೊಲೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯಿದೆಯ ನಿಬಂಧನೆಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಇದಾದ ಕೆಲವೇ ದಿನಗಳಲ್ಲಿ ಮತ್ತೊಂದು ದಲಿತ ದೌರ್ಜನ್ಯ ಪ್ರಕರಣ ಹೊರಬಿದ್ದದೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರವಿದ್ದು, ಯೋಗಿ ಆದಿತ್ಯನಾಥ್‌ ಆಡಳಿತ ಇಡೀ ದೇಶಕ್ಕೆ ಮಾದರಿ ಎಂದು ಬಿಜೆಪಿ ಡಂಗುರ ಸಾರಿತ್ತು. ಆದರೆ ಕೇಂದ್ರ ಸಚಿವ ರಾಮ್‌ದಾಸ್‌ ಅಠಾವಳೆ ಅವರೇ ಇತ್ತೀಚೆಗೆ ನೀಡಿದ ಮಾಹಿತಿ ಪ್ರಕಾರ ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ದಲಿತ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದೆ. ಆದರೆ ಇವುಗಳಲ್ಲಿ ಹೆಚ್ಚಿನವುಗಳು ಬಹಿರಂಗವಾಗುತ್ತಿಲ್ಲ ಎನ್ನವುದನ್ನು ಗಮನಿಸಬೇಕಿದೆ.

ಲಕ್ನೋ ಜಿಲ್ಲೆಯ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯದ ವೇಳೆ ನಡೆದ ಜಗಳ ಹಿಂಸಾಚಾರಕ್ಕೆ ತಿರುಗಿದ್ದು, ಯುವಕರ ಗುಂಪೊಂದು 18 ವರ್ಷದ ದಲಿತ ಬಾಲಕನಿಗೆ ಥಳಿಸಿ ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ಅಮಾನವೀಯವಾಗಿ ವರ್ತಿಸಿದೆ. ಜ.13ರಂದು ಘಟನೆ ನಡೆದಿದ್ದು, ಸಂತ್ರಸ್ತ ಯುವಕನ ತಂದೆ ಕೂಲಿ ಕಾರ್ಮಿಕ ಸಂದೀಪ್ ಕುಮಾರ್ ರಾವತ್ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ ನಂತರ ಮಂಗಳವಾರ ಸಂಜೆ ಈ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ  25-30 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 504 (ಅವಮಾನ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು 147 (ಗಲಭೆ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಆರೋಪಿಗಳ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿದೆ.

ಇಂದಿರಾನಗರದ ಚಡಾನ್ ಗ್ರಾಮದ ನಿವಾಸಿ ರಾವತ್ ಅವರು ಈ ಕುರಿತು ಎಫ್‌ಐಆರ್‌ ದಾಖಲಿಸಿದ್ದು, ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುವ ತನ್ನ ಮಗ ಲಕ್ಕಿ(18) ತನ್ನ ಸ್ನೇಹಿತರೊಂದಿಗೆ ಖುರ್ರಂ ನಗರದ ಬಳಿ ಕ್ರಿಕೆಟ್ ಆಡಲು ಹೋಗಿದ್ದ. ಕ್ರಿಕೆಟ್‌ ಆಡುವಾಗ ಚೆಂಡು ಇತರ ಕೆಲವು ಯುವಕರು ಆಡುತ್ತಿದ್ದ ಪ್ರದೇಶದಲ್ಲಿ ಬಿತ್ತು. ಲಕ್ಕಿ ಚೆಂಡನ್ನು ತೆಗೆದುಕೊಳ್ಳಲು ಅಲ್ಲಿಗೆ ಹೋದಾಗ ಅಲ್ಲಿದ್ದ ಯುವಕರು ಆತನಿಗೆ ಚೆಂಡನ್ನು ನೀಡಲು ನಿರಾಕರಿಸಿದ್ದಾರೆ. ಆತನಿಗೆ ಜಾತಿ ನಿಂದನೆಗೈದು ಥಳಿಸಿದ್ದಾರೆ. ತನ್ನ ಅವರಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದಾನೆ. ಆದರೆ ಅವನು ಈ ಬಗ್ಗೆ ಮನೆಯಲ್ಲಿ ಹೇಳಿರಲಿಲ್ಲ. ಅದೇ ದಿನ ಲಕ್ಕಿಯನ್ನು ಮತ್ತೆ ಯುವಕರ ಗುಂಪು ಅಡ್ಡಗಟ್ಟಿ ಮತ್ತೊಮ್ಮೆ ಥಳಿಸಿದ್ದಾರೆ. ಆ ಬಳಿಕ ಘಟನೆಯ ಬಗ್ಗೆ ನಮ್ಮೊಂದಿಗೆ ಆತ ಹೇಳಿಕೊಂಡಿದ್ದಾನೆ. ನಾವು ಆ ವಿಷಯದ ಬಗ್ಗೆ ಆತಂಕಿತರಾಗಿರುವಾಗಲೇ ಮತ್ತೆ ಮನೆಯ ಬಳಿಗೆ ಬಂದ ಗುಂಪು, ನನ್ನ ಪುತ್ರನನ್ನು ಮನೆಯಿಂದ ಹೊರಗೆ ಎಳೆದೊಯ್ದು ಥಳಿಸಿದೆ. ಆದರೆ ನೆರೆಹೊರೆಯವರು ನಮ್ಮ ನೆರವಿಗೆ ಬಂದಿದ್ದರಿಂದ ಆ ಯುವಕರ ಗುಂಪು ಅಲ್ಲಿಂದ ಪರಾರಿಯಾಗಿದೆ. ಮರುದಿನ ತನ್ನ ಸಹೋದರಿಯನ್ನು ಶಾಲೆಯಿಂದ ಮರಳಿ ಕರೆ ತರಲು ಟಕ್ರೋಹಿಗೆ ತೆರಳಿದ್ದ ನನ್ನ ಪುತ್ರನನ್ನು ಆ ಯುವಕರ ಗುಂಪು ಮತ್ತೆ ಕನೌಸಾದಲ್ಲಿ ಅಡ್ಡಗಟ್ಟಿ ಪ್ರಜ್ಞೆ ಕಳೆದುಕೊಳ್ಳುವವರೆಗೂ ಥಳಿಸಿದ್ದಾರೆ. ನಂತರ ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಘಟನೆಯಿಂದ ಭಯಗೊಂಡು ಆತ ಮನೆಯಿಂದ ಹೊರಗೆ ಬಂದಿಲ್ಲ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತ ಯುವಕನ ತಂದೆ ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಉತ್ತರ ವಲಯದ ಉಪ ಪೊಲೀಸ್ ಆಯುಕ್ತ ಖಾಸಿಂ ಅಬಿದಿ, ಕ್ರಿಕೆಟ್‌ ಪಂದ್ಯದ ವೇಳೆ ಗಲಾಟೆ ನಡೆದಿದೆ. ಈ ಕುರಿತು ಗಾಝಿಪುರ ಎಸಿಪಿ ಅವರ ನೇತೃತ್ವದ ತಂಡ ತನಿಖೆಯನ್ನು ನಡೆಸುತ್ತಿದೆ, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ನಾಗಾಲ್ಯಾಂಡ್ ಜನತೆಗೆ ಮೋದಿ ನೀಡಿದ್ದು ಸುಳ್ಳು ಭರವಸೆ; ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...