Homeಮುಖಪುಟದಲಿತ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ: ಅಮಾನವೀಯ ಘಟನೆ ವರದಿ

ದಲಿತ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ: ಅಮಾನವೀಯ ಘಟನೆ ವರದಿ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ಹಿಂಸೆ, ದೌರ್ಜನ್ಯ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದೆ. ಉತ್ತರಪ್ರದೇಶದ ಜೌನ್‌ಪುರ್‌ ಜಿಲ್ಲೆಯಲ್ಲಿ ಕಳೆದ ನ.23ರಂದು 14 ವರ್ಷದ ದಲಿತ ಬಾಲಕನಿಗೆ ಕೆಲವು ಸವರ್ಣಿಯ ಜಾತಿಗೆ ಸೇರಿದ ದುಷ್ಕರ್ಮಿಗಳ ಗುಂಪು ಮೂತ್ರ ಕುಡಿಸಿದ ಪ್ರಕರಣ ನಡೆದಿತ್ತು. ಇದೀಗ ಅಂತದ್ದೇ ಪ್ರಕರಣವೊಂದು ನಡೆದಿದ್ದು, ದಲಿತ ಸಮುದಾಯಕ್ಕೆ ಸೇರಿದ ಯುವಕನಿಗೆ ಥಳಿಸಿ ಮುಖದ ಮೇಲೆ ಮೂತ್ರ ಮಾಡಿದ ಘಟನೆ ಲಕ್ನೋ ಜಿಲ್ಲೆಯ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದೇ ಜನವರಿ 9ರಂದು ದಲಿತ ಸಮುದಾಯಕ್ಕೆ ಸೇರಿದ ಅಂಕಿತ್‌ ಎಂಬ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮುಝಪ್ಪರ್‌ ನಗರ ಜಿಲ್ಲೆಯ ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋಲಾ ಗ್ರಾಮದಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಠಿಣ ಸೆಕ್ಷನ್ 302 (ಕೊಲೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯಿದೆಯ ನಿಬಂಧನೆಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಇದಾದ ಕೆಲವೇ ದಿನಗಳಲ್ಲಿ ಮತ್ತೊಂದು ದಲಿತ ದೌರ್ಜನ್ಯ ಪ್ರಕರಣ ಹೊರಬಿದ್ದದೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರವಿದ್ದು, ಯೋಗಿ ಆದಿತ್ಯನಾಥ್‌ ಆಡಳಿತ ಇಡೀ ದೇಶಕ್ಕೆ ಮಾದರಿ ಎಂದು ಬಿಜೆಪಿ ಡಂಗುರ ಸಾರಿತ್ತು. ಆದರೆ ಕೇಂದ್ರ ಸಚಿವ ರಾಮ್‌ದಾಸ್‌ ಅಠಾವಳೆ ಅವರೇ ಇತ್ತೀಚೆಗೆ ನೀಡಿದ ಮಾಹಿತಿ ಪ್ರಕಾರ ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ದಲಿತ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದೆ. ಆದರೆ ಇವುಗಳಲ್ಲಿ ಹೆಚ್ಚಿನವುಗಳು ಬಹಿರಂಗವಾಗುತ್ತಿಲ್ಲ ಎನ್ನವುದನ್ನು ಗಮನಿಸಬೇಕಿದೆ.

ಲಕ್ನೋ ಜಿಲ್ಲೆಯ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯದ ವೇಳೆ ನಡೆದ ಜಗಳ ಹಿಂಸಾಚಾರಕ್ಕೆ ತಿರುಗಿದ್ದು, ಯುವಕರ ಗುಂಪೊಂದು 18 ವರ್ಷದ ದಲಿತ ಬಾಲಕನಿಗೆ ಥಳಿಸಿ ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ಅಮಾನವೀಯವಾಗಿ ವರ್ತಿಸಿದೆ. ಜ.13ರಂದು ಘಟನೆ ನಡೆದಿದ್ದು, ಸಂತ್ರಸ್ತ ಯುವಕನ ತಂದೆ ಕೂಲಿ ಕಾರ್ಮಿಕ ಸಂದೀಪ್ ಕುಮಾರ್ ರಾವತ್ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ ನಂತರ ಮಂಗಳವಾರ ಸಂಜೆ ಈ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ  25-30 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 504 (ಅವಮಾನ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಮತ್ತು 147 (ಗಲಭೆ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಆರೋಪಿಗಳ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿದೆ.

ಇಂದಿರಾನಗರದ ಚಡಾನ್ ಗ್ರಾಮದ ನಿವಾಸಿ ರಾವತ್ ಅವರು ಈ ಕುರಿತು ಎಫ್‌ಐಆರ್‌ ದಾಖಲಿಸಿದ್ದು, ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುವ ತನ್ನ ಮಗ ಲಕ್ಕಿ(18) ತನ್ನ ಸ್ನೇಹಿತರೊಂದಿಗೆ ಖುರ್ರಂ ನಗರದ ಬಳಿ ಕ್ರಿಕೆಟ್ ಆಡಲು ಹೋಗಿದ್ದ. ಕ್ರಿಕೆಟ್‌ ಆಡುವಾಗ ಚೆಂಡು ಇತರ ಕೆಲವು ಯುವಕರು ಆಡುತ್ತಿದ್ದ ಪ್ರದೇಶದಲ್ಲಿ ಬಿತ್ತು. ಲಕ್ಕಿ ಚೆಂಡನ್ನು ತೆಗೆದುಕೊಳ್ಳಲು ಅಲ್ಲಿಗೆ ಹೋದಾಗ ಅಲ್ಲಿದ್ದ ಯುವಕರು ಆತನಿಗೆ ಚೆಂಡನ್ನು ನೀಡಲು ನಿರಾಕರಿಸಿದ್ದಾರೆ. ಆತನಿಗೆ ಜಾತಿ ನಿಂದನೆಗೈದು ಥಳಿಸಿದ್ದಾರೆ. ತನ್ನ ಅವರಿಂದ ತಪ್ಪಿಸಿಕೊಂಡು ಮನೆಗೆ ಬಂದಿದ್ದಾನೆ. ಆದರೆ ಅವನು ಈ ಬಗ್ಗೆ ಮನೆಯಲ್ಲಿ ಹೇಳಿರಲಿಲ್ಲ. ಅದೇ ದಿನ ಲಕ್ಕಿಯನ್ನು ಮತ್ತೆ ಯುವಕರ ಗುಂಪು ಅಡ್ಡಗಟ್ಟಿ ಮತ್ತೊಮ್ಮೆ ಥಳಿಸಿದ್ದಾರೆ. ಆ ಬಳಿಕ ಘಟನೆಯ ಬಗ್ಗೆ ನಮ್ಮೊಂದಿಗೆ ಆತ ಹೇಳಿಕೊಂಡಿದ್ದಾನೆ. ನಾವು ಆ ವಿಷಯದ ಬಗ್ಗೆ ಆತಂಕಿತರಾಗಿರುವಾಗಲೇ ಮತ್ತೆ ಮನೆಯ ಬಳಿಗೆ ಬಂದ ಗುಂಪು, ನನ್ನ ಪುತ್ರನನ್ನು ಮನೆಯಿಂದ ಹೊರಗೆ ಎಳೆದೊಯ್ದು ಥಳಿಸಿದೆ. ಆದರೆ ನೆರೆಹೊರೆಯವರು ನಮ್ಮ ನೆರವಿಗೆ ಬಂದಿದ್ದರಿಂದ ಆ ಯುವಕರ ಗುಂಪು ಅಲ್ಲಿಂದ ಪರಾರಿಯಾಗಿದೆ. ಮರುದಿನ ತನ್ನ ಸಹೋದರಿಯನ್ನು ಶಾಲೆಯಿಂದ ಮರಳಿ ಕರೆ ತರಲು ಟಕ್ರೋಹಿಗೆ ತೆರಳಿದ್ದ ನನ್ನ ಪುತ್ರನನ್ನು ಆ ಯುವಕರ ಗುಂಪು ಮತ್ತೆ ಕನೌಸಾದಲ್ಲಿ ಅಡ್ಡಗಟ್ಟಿ ಪ್ರಜ್ಞೆ ಕಳೆದುಕೊಳ್ಳುವವರೆಗೂ ಥಳಿಸಿದ್ದಾರೆ. ನಂತರ ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಘಟನೆಯಿಂದ ಭಯಗೊಂಡು ಆತ ಮನೆಯಿಂದ ಹೊರಗೆ ಬಂದಿಲ್ಲ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತ ಯುವಕನ ತಂದೆ ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಉತ್ತರ ವಲಯದ ಉಪ ಪೊಲೀಸ್ ಆಯುಕ್ತ ಖಾಸಿಂ ಅಬಿದಿ, ಕ್ರಿಕೆಟ್‌ ಪಂದ್ಯದ ವೇಳೆ ಗಲಾಟೆ ನಡೆದಿದೆ. ಈ ಕುರಿತು ಗಾಝಿಪುರ ಎಸಿಪಿ ಅವರ ನೇತೃತ್ವದ ತಂಡ ತನಿಖೆಯನ್ನು ನಡೆಸುತ್ತಿದೆ, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ನಾಗಾಲ್ಯಾಂಡ್ ಜನತೆಗೆ ಮೋದಿ ನೀಡಿದ್ದು ಸುಳ್ಳು ಭರವಸೆ; ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...